ಗುಜರಾತ್  online desk
ದೇಶ

ಗುಜರಾತ್‌: ಎಎಪಿ ರೈತರ ಜಾಥಾದಲ್ಲಿ ಹಿಂಸಾಚಾರ; ಕಲ್ಲು ತೂರಿದ ರೈತರು, 3 ಪೊಲೀಸರಿಗೆ ಗಾಯ

ಗುಂಪನ್ನು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡಿ ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದಾರೆ ಎಂದು ಅವರು ಹೇಳಿದರು.

ಗುಜರಾತ್: ಗುಜರಾತ್ ನ ಬೋಟಾಡ್ ಜಿಲ್ಲೆಯಲ್ಲಿ ಭಾನುವಾರ ರೈತರಿಗಾಗಿ ಎಎಪಿ ಆಯೋಜಿಸಿದ್ದ 'ಮಹಾಪಂಚಾಯತ್' ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಕನಿಷ್ಠ ಮೂವರು ಪೊಲೀಸರು ಗಾಯಗೊಂಡಿದ್ದಾರೆ.

ಸಂಜೆ ಹದ್ದದ್ ಗ್ರಾಮದಲ್ಲಿ ಜಾಥಾವನ್ನು ಆಯೋಜಿಸಲು ಯಾವುದೇ ಅನುಮತಿ ಪಡೆದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

"ಮಹಾಪಂಚಾಯತ್' ನ್ನು ಕಾನೂನುಬಾಹಿರವಾಗಿ ಆಯೋಜಿಸಲಾಗಿದೆ. ಮಾರುಕಟ್ಟೆ ಅಂಗಳಕ್ಕೆ ಹಾನಿ ಮಾಡುವ ಉದ್ದೇಶದಿಂದ ಈ ಜನರು ಗ್ರಾಮದಲ್ಲಿ ಜಮಾಯಿಸಿದ್ದರು. ಪೊಲೀಸ್ ಅಧಿಕಾರಿಗಳು ಸ್ಥಳದಿಂದ ತೆರಳಳು ಕೇಳಿದಾಗ, ಅವರು ಅಧಿಕಾರಿಗಳ ಮೇಲೆ ಕಲ್ಲು ಎಸೆದಿದ್ದಾರೆ. ಇದು ಪೊಲೀಸ್ ವಾಹನಕ್ಕೆ ಹಾನಿಯನ್ನುಂಟುಮಾಡಿದೆ" ಎಂದು ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಶರ್ಮಾ ಹೇಳಿದ್ದಾರೆ.

ಗುಂಪನ್ನು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡಿ ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದಾರೆ ಎಂದು ಅವರು ಹೇಳಿದರು.

"ಮೂವರು ಪೊಲೀಸರು ಗಾಯಗೊಂಡಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 20 ಜನರನ್ನು ಬಂಧಿಸಲಾಗಿದೆ, ಆದರೆ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿರುವುದರಿಂದ ಸಂಖ್ಯೆ ಹೆಚ್ಚಾಗಬಹುದು" ಎಂದು ಅವರು ಹೇಳಿದರು, ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಒತ್ತಡ: ಮದುವೆಗೆ ಒಂದು ದಿನ ಮೊದಲು ಆತ್ಮಹತ್ಯೆಗೆ ಶರಣಾದ ಯುಪಿ ಸಿಬ್ಬಂದಿ!

'Please wait...': ಡಿ.ಕೆ ಶಿವಕುಮಾರ್ ಗೆ ರಾಹುಲ್ ಗಾಂಧಿ ವಾಟ್ಸ್​ಆ್ಯಪ್​​ ಸಂದೇಶ; ಹೇಳಿದ್ದೇನು?

ಭಾರತದ ಸಿಇಸಿ ಜ್ಞಾನೇಶ್ ಕುಮಾರ್ ಗೆ ವಿಶ್ವ ಚುನಾವಣಾ ಸಂಸ್ಥೆಯ ಅಧ್ಯಕ್ಷ ಹುದ್ದೆ!

ಹಾಂಗ್ ಕಾಂಗ್ ನಲ್ಲಿ ಭೀಕರ ಅಗ್ನಿ ಅವಘಡ: 32 ಅಂತಸ್ತಿನ ಅಪಾರ್ಟ್ ಮೆಂಟ್ ಗೆ ಬೆಂಕಿ, 13 ಮಂದಿ ಸಾವು, 700 ಮಂದಿ ಸ್ಥಳಾಂತರ! Video

ಐಎಎಸ್​ ಅಧಿಕಾರಿ ಮಹಾಂತೇಶ ಬೀಳಗಿ ಪಂಚಭೂತಗಳಲ್ಲಿ ಲೀನ: ಏಕಕಾಲಕ್ಕೆ ನಾಲ್ವರ ಅಂತ್ಯಕ್ರಿಯೆ

SCROLL FOR NEXT