ಸಚಿವ ಸುರೇಶ್ ಗೋಪಿ 
ದೇಶ

ಆದಾಯವೇ ಇಲ್ಲ, ಸಚಿವ ಸ್ಥಾನ ಬೇಡ, ನಾನು ಮತ್ತೆ ನಟನೆ ಮಾಡ್ತೇನೆ: ಸಾರ್ವಜನಿಕ ಕಾರ್ಯಕ್ರಮದಲ್ಲೇ ಸುರೇಶ್‌ ಗೋಪಿ ಘೋಷಣೆ

ನಾನು ನಿಜವಾಗಿಯೂ ನಟನೆಯನ್ನು ಮುಂದುವರಿಸಲು ಬಯಸುತ್ತೇನೆ. ನಾನು ಹೆಚ್ಚು ಗಳಿಸಬೇಕಾಗಿದೆ, ನನ್ನ ಆದಾಯ ಈಗ ಸಂಪೂರ್ಣವಾಗಿ ನಿಂತುಹೋಗಿದೆ ಎಂದು ಅವರು ಹೇಳಿದರು.

ಕಣ್ಣೂರು: ಕೇಂದ್ರ ಸಚಿವ ಸುರೇಶ್ ಗೋಪಿ ನಟನೆಗೆ ಮರಳುವ ಇಚ್ಛೆಯನ್ನು ವ್ಯಕ್ತಪಡಿಸಿದ್ದು, ತಮ್ಮ ಸಿನಿಮಾ ವೃತ್ತಿಜೀವನವನ್ನು ಮುಂದುವರಿಸಲು ಬಯಸುವುದಾಗಿ ಹೇಳಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಸ್ಥಾನ ತಮಗೆ ಬೇಡ. ನಟನೆಗೆ ಮತ್ತೆ ಮರಳುವುದಾಗಿ ಘೋಷಿಸಿದ್ದಾರೆ. ಕಣ್ಣೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತ್ರಿಶೂರ್ ಸಂಸದ ಮತ್ತು ನಟ-ರಾಜಕಾರಣಿಯಾಗಿರುವ ಅವರು, ಸಚಿವ ಹುದ್ದೆಯನ್ನು ವಹಿಸಿಕೊಂಡ ನಂತರ ತಮ್ಮ ಆದಾಯ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ಹೇಳಿದರು. ಸಿನಿಮಾ ವೃತ್ತಿಜೀವನವನ್ನು ತೊರೆದು ಸಚಿವನಾಗಲು ತಮಗೆ ಇಷ್ಟವಿರಲಿಲ್ಲ ಎಂದಿರುವ ಅವರು, ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ನಾನು ನಿಜವಾಗಿಯೂ ನಟನೆಯನ್ನು ಮುಂದುವರಿಸಲು ಬಯಸುತ್ತೇನೆ. ನಾನು ಹೆಚ್ಚು ಗಳಿಸಬೇಕಾಗಿದೆ, ನನ್ನ ಆದಾಯ ಈಗ ಸಂಪೂರ್ಣವಾಗಿ ನಿಂತುಹೋಗಿದೆ ಎಂದು ಅವರು ಹೇಳಿದರು.

ಇನ್ನು ತಾವು ರಾಜೀನಾಮೆ ಸಲ್ಲಿಸಿದ ನಂತರ ತೆರವಾಗುವ ಸಚಿವ ಸ್ಥಾನವನ್ನು ರಾಜ್ಯಸಭಾ ಸಂಸದ ಸಿ ಸದಾನಂದನ್ ಮಾಸ್ಟರ್ ಅವರಿಗೆ ನೀಡಬೇಕೆಂದು ಮನವಿ ಮಾಡಿದ್ದಾರೆ. ನಾನು ಎಂದಿಗೂ ಸಚಿವನಾಗಬೇಕೆಂದು ಪ್ರಾರ್ಥಿಸಿಲ್ಲ. ಚುನಾವಣೆಗೆ ಒಂದು ದಿನ ಮೊದಲೂ, ನಾನು ಸಚಿವನಾಗಲು ಬಯಸುವುದಿಲ್ಲ, ನಾನು ಸಿನಿಮಾದಲ್ಲಿ ಮುಂದುವರಿಯಲು ಬಯಸುತ್ತೇನೆ ಎಂದು ವರದಿಗಾರರಿಗೆ ಹೇಳಿದ್ದೆ.

ನಾನು ಅಕ್ಟೋಬರ್ 2008 ರಲ್ಲಿ ಪಕ್ಷದ ಸದಸ್ಯತ್ವವನ್ನು ಪಡೆದುಕೊಂಡೆ. ಪಕ್ಷವು ನನ್ನ ಮೇಲೆ ಭರವಸೆ ಇಟ್ಟು ದೊಡ್ಡ ಹುದ್ದೆಯನ್ನೇ ನೀಡಿತು ಎಂದರು. ಸದ್ಯ ಗೋಪಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ರಾಜ್ಯ ಸಚಿವರು ಮತ್ತು ಪ್ರವಾಸೋದ್ಯಮ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಈ ವರ್ಷದ ಆರಂಭದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಣ್ಣೂರಿನ ಬಿಜೆಪಿ ಹಿರಿಯ ನಾಯಕ ಸದಾನಂದನ್ ಮಾಸ್ಟರ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?

ಅದಕ್ಕಾಗಿ ನಾನು ತಮನ್ನಾ ಭಾಟಿಯಾ ಕಾಲಿಗೆ ಬೀಳಲು ಸಿದ್ಧ: ಬಾಲಿವುಡ್ ನಟ ಅನ್ನು ಕಪೂರ್

IPL 2026: ವಿರಾಟ್ ಕೊಹ್ಲಿ, ಪಡಿಕ್ಕಲ್ ಅಬ್ಬರಕ್ಕೆ GT ತತ್ತರ; RCB ಭರ್ಜರಿ ಗೆಲುವು

ಮಣಿಪಾಲದಲ್ಲಿ ಇದೆಂಥಾ ಅಸಹ್ಯ: ರಸ್ತೆಯಲ್ಲೇ ರೊಮ್ಯಾನ್ಸ್; ಉತ್ತರ ಭಾರತ ಜೋಡಿಗೆ ಕನ್ನಡದಲ್ಲೇ ಉಗಿದ ಸ್ಥಳೀಯರು, Video!

ರಾಘವ್ ಚಡ್ಡಾ, ಇತರರು ಎಎಪಿ ಬಿಟ್ಟು ಹೋಗುತ್ತಿರಲಿಲ್ಲ...: ಅಣ್ಣಾ ಹಜಾರೆ ಸ್ಫೋಟಕ ಹೇಳಿಕೆ

SCROLL FOR NEXT