ಲೋಕಸಭೆ 
ದೇಶ

ಕಳಂಕಿತ ಸಿಎಂ, ಸಚಿವರನ್ನು ಪದಚ್ಯುತಗೊಳಿಸುವ ಮಸೂದೆ ಕುರಿತ JPCಗೆ ಇಂಡಿಯಾ ಬಣ ಬಹಿಷ್ಕಾರ

ವಿರೋಧ ಪಕ್ಷಗಳು ಜೆಪಿಸಿಯನ್ನು ಬಹಿಷ್ಕರಿಸಲು ಸರ್ವಾನುಮತದಿಂದ ನಿರ್ಧರಿಸಿದ್ದು, ಇದನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನವದೆಹಲಿ: ಗಂಭೀರ ಆರೋಪಗಳ ಮೇಲೆ ಸತತ 30 ದಿನಗಳವರೆಗೆ ಬಂಧನದಲ್ಲಿರುವ ಮುಖ್ಯಮಂತ್ರಿಗಳನ್ನು ಮತ್ತು ಸಚಿವರನ್ನು ಅವರ ಹುದ್ದೆಯಿಂದ ತೆಗೆದುಹಾಕುವ ಮೂರು ಮಸೂದೆಗಳ ಮೇಲಿನ ಸಂಸತ್ ಜಂಟಿ ಸಮಿತಿ(ಜೆಪಿಸಿ)ಯ ಭಾಗವಾಗಿರುವುದಿಲ್ಲ ಎಂದು ಕಾಂಗ್ರೆಸ್ ಸೋಮವಾರ ಕೇಂದ್ರ ಸಚಿವ ಕಿರಣ್ ರಿಜಿಜು ಅವರಿಗೆ ತಿಳಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವಿರೋಧ ಪಕ್ಷಗಳು ಜೆಪಿಸಿಯನ್ನು ಬಹಿಷ್ಕರಿಸಲು ಸರ್ವಾನುಮತದಿಂದ ನಿರ್ಧರಿಸಿದ್ದು, ಇದನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸೇರಿದಂತೆ ಇಡೀ ವಿರೋಧ ಪಕ್ಷವು ಜೆಪಿಸಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡದಿರಲು ನಿರ್ಧರಿಸಿದೆ ಎಂದು ಸೆಪ್ಟೆಂಬರ್ 14 ರಂದು ಟಿಎನ್‌ಐಇ ವರದಿ ಮಾಡಿತ್ತು.

ಕನಿಷ್ಠ ಮೂರು ಪಕ್ಷಗಳು - ಟಿಎಂಸಿ, ಶಿವಸೇನೆ(ಯುಬಿಟಿ), ಮತ್ತು ಎಎಪಿ, ಸಂಸತ್ ಜಂಟಿ ಸಮಿತಿಯ ಭಾಗವಾಗಿರುವುದಿಲ್ಲ ಎಂದು ಈ ಹಿಂದೆ ಘೋಷಿಸಿದ್ದವು. ಅಲ್ಲದೆ ವಿರೋಧ ಪಕ್ಷಗಳು ಒಗ್ಗಟ್ಟಾಗಿರಬೇಕು ಎಂಬ ಅಭಿಪ್ರಾಯವನ್ನು ಬೆಂಬಲಿಸಲು ಸಮಿತಿಗೆ ಸೇರುವುದಿಲ್ಲ ಎಂದು ಎಸ್‌ಪಿ ಕೂಡ ಸುಳಿವು ನೀಡಿತ್ತು.

ಕಳೆದ ತಿಂಗಳು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮೂರು ಮಸೂದೆಗಳನ್ನು ಪರಿಶೀಲಿಸುವ ಸಂಸತ್ ಜಂಟಿ ಸಮಿತಿಯನ್ನು ಬಹಿಷ್ಕರಿಸುವ ಬಗ್ಗೆ ಯಾವುದೇ ರಾಜಕೀಯ ಪಕ್ಷ ತಮಗೆ ಪತ್ರ ಬರೆದಿಲ್ಲ ಎಂದು ಹೇಳಿದ್ದರು.

ಮಳೆಗಾಲದ ಅಧಿವೇಶನದ ಕೊನೆಯ ದಿನದಂದು, ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಈ ಮೂರು ಮಸೂದೆಗಳನ್ನು ಮಂಡಿಸಿದರು - ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ(ತಿದ್ದುಪಡಿ) ಮಸೂದೆ; ಸಂವಿಧಾನ(ನೂರ ಮೂವತ್ತನೇ ತಿದ್ದುಪಡಿ) ಮಸೂದೆ ಹಾಗೂ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಕ್ಷ ಇಬ್ಭಾಗದ ಭೀತಿಯ ನಡುವೆ INDI ಮೈತ್ರಿಕೂಟ ಸಭೆಯಲ್ಲಿ ಭಾಗವಹಿಸಲಿರುವ ಮಮತಾ ಬ್ಯಾನರ್ಜಿ

ನಟಿಯನ್ನು ಯಾಕೆ ದೂಷಿಸುತ್ತೀರಾ? Peddi ಚಿತ್ರದಲ್ಲಿನ ಜಾಹ್ನವಿ ಉಡುಪು ವಿವಾದಕ್ಕೆ ನಟಿ ಆಶಿಕಾ ರಂಗನಾಥ್ ಗರಂ

India vs Afghanistan: 564 ರನ್ ಗೆ ಭಾರತ ಮೊದಲ ಇನ್ನಿಂಗ್ಸ್ ಡಿಕ್ಲೇರ್, 2ನೇ ದಿನದಾಟದಂತ್ಯಕ್ಕೆ ಆಫ್ಘಾನಿಸ್ತಾನ 113/5; ಸಂಕಷ್ಟದಲ್ಲಿ ಶಾಹಿದಿ ಪಡೆ!

ರಾಜತಾಂತ್ರಿಕ ಮಾತುಕತೆಯ ಮೂಲಕವೇ ಗಡಿ ವಿವಾದ ಬಗೆಹರಿಸಿಕೊಳ್ಳುತ್ತೇವೆ: ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್

ಭಾರತದ ಅಡುಗೆ ಅನಿಲ ಬೆಲೆ ಇನ್ನೂ ವಿಶ್ವದಲ್ಲೇ ಅಗ್ಗವಾಗಿದೆ: LPG ದರ ಏರಿಕೆ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

SCROLL FOR NEXT