ಹಿಜಾಬ್ ವಿವಾದ ಕ್ಯಾಥೋಲಿಕ್ ಶಾಲೆ ತಾತ್ಕಾಲಿಕ ಸ್ಥಗಿತ 
ದೇಶ

ಕೇರಳದಲ್ಲೂ hijab ವಿವಾದ: ಹಿಜಾಬ್ ಧರಿಸಿದ ವಿದ್ಯಾರ್ಥಿನಿಗೆ ಪ್ರವೇಶ ನಿರಾಕರಣೆ; ಕ್ಯಾಥೋಲಿಕ್ ಶಾಲೆ 2 ದಿನ ಕ್ಲೋಸ್!

ಕೇರಳದ ಕೊಚ್ಚಿಯ ಪಲ್ಲೂರುತಿಯಲ್ಲಿರುವ ಲ್ಯಾಟಿನ್ ಕ್ಯಾಥೋಲಿಕ್ ಚರ್ಚ್ ನಡೆಸುತ್ತಿರುವ ಸೇಂಟ್ ರೀಟಾ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಕೊಚ್ಚಿ: ಈ ಹಿಂದೆ ಕರ್ನಾಟಕದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಹಿಜಾಬ್ ವಿವಾದ ಇದೀಗ ನೆರೆಯ ಕೇರಳದಲ್ಲೂ ಭಾರಿ ಸುದ್ದಿಗೆ ಗ್ರಾಸವಾಗಿದ್ದು, ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಗೆ ಪ್ರವೇಶ ನಿರಾಕರಿಸಿದ ಬಳಿಕ ದೊಡ್ಡ ಹೈಡ್ರಾಮಾವೇ ನಡೆದು ಕ್ಯಾಥೋಲಿಕ್ ಶಾಲೆಗೆ 2ನೇ ದಿನ ಬೀಗ ಹಾಕಲಾಗಿದೆ.

ಕೇರಳದ ಕೊಚ್ಚಿಯ ಪಲ್ಲೂರುತಿಯಲ್ಲಿರುವ ಲ್ಯಾಟಿನ್ ಕ್ಯಾಥೋಲಿಕ್ ಚರ್ಚ್ ನಡೆಸುತ್ತಿರುವ ಸೇಂಟ್ ರೀಟಾ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಗೆ ಪ್ರವೇಶ ನಿರಾಕರಿಸಲಾಗಿದೆ. ಬಳಿಕ ವಿದ್ಯಾರ್ಥಿನಿ ಹಿಜಾಬ್ ಧರಿಸಲು ಒತ್ತಾಯಿಸಿದ್ದರಿಂದ ಉಂಟಾದ ಉದ್ವಿಗ್ನತೆಯ ನಂತರ ಶಾಲೆಗೆ ಎರಡು ದಿನಗಳ ರಜೆ ಘೋಷಿಸಲಾಗಿದೆ.

ಈ ಸಂಬಂಧ ನಡೆದ ಪೋಷಕರ ಸಭೆಯಲ್ಲೂ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಶಾಲೆಯ ನಿರ್ಧಾರಕ್ಕೆ ನಿರ್ದಿಷ್ಟ ಸಮುದಾಯದ ವಿದ್ಯಾರ್ಥಿಗಳ ಪೋಷಕರು ವಿರೋಧ ವ್ಯಕ್ತಪಡಿಸಿದರು ಎನ್ನಲಾಗಿದೆ.

ಹೀಗಾಗಿ ಸಭೆಯಲ್ಲಿ ಒಮ್ಮತ ಮೂಡದೇ ಪೋಷಕರು ಮತ್ತು ಶಾಲಾ ಆಡಳಿತ ಸಿಬ್ಬಂದಿ ನಡುವೆ ವಾಕ್ಸಮರ ನಡೆದಿದೆ. ಬಳಿಕ ಮುಂಜಾಗ್ರತಾ ಕ್ರಮವಾಗಿ ಸಿಬಿಎಸ್ಇ-ಸಂಯೋಜಿತ ಶಾಲೆಯನ್ನು 2 ದಿನ ಮುಚ್ಚಲು ಆಡಳಿತ ಸಿಬ್ಬಂದಿ ಘೋಷಣೆ ಮಾಡಿದೆ.

ಅಕ್ಟೋಬರ್ 12 ರಂದು ಪೋಷಕರಿಗೆ ಬರೆದ ಪತ್ರದಲ್ಲಿ, ಪ್ರಾಂಶುಪಾಲರಾದ ಸೀನಿಯರ್ ಹೆಲೀನಾ ಆಲ್ಬಿ, "ಪರಿಸ್ಥಿತಿಯಿಂದ ಉಂಟಾದ ಮಾನಸಿಕ ಒತ್ತಡದ ನಂತರ ಮತ್ತು ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ರಜೆ ತೆಗೆದುಕೊಂಡಿರುವುದರಿಂದ" ಶಾಲೆಗೆ ರಜೆ ಘೋಷಿಸಲಾಗುತ್ತಿದೆ ಎಂದು ಹೇಳಿದರು.

ಪತ್ರವು ವಿವಾದದ ಸ್ವರೂಪವನ್ನು ನಿರ್ದಿಷ್ಟಪಡಿಸಲಿಲ್ಲ ಆದರೆ "ಶಾಲೆಯಿಂದ ಅನುಮತಿಸದ ಉಡುಪಿನಲ್ಲಿ ಬಂದ ವಿದ್ಯಾರ್ಥಿನಿಯನ್ನು" ಉಲ್ಲೇಖಿಸಿದೆ.

ಮೂಲಗಳ ಪ್ರಕಾರ, ವಿದ್ಯಾರ್ಥಿನಿಯ ಪೋಷಕರು ತಮ್ಮ ಮಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ ನಂತರ ಭಿನ್ನಾಭಿಪ್ರಾಯ ಉಂಟಾಯಿತು. ಪ್ರಾಂಶುಪಾಲರು ತಮ್ಮ ಟಿಪ್ಪಣಿಯಲ್ಲಿ ಪೋಷಕರ ಸಹಕಾರಕ್ಕಾಗಿ ಮನವಿ ಮಾಡಿದರು ಮತ್ತು "ಸಂಸ್ಥೆಯ ಶಿಸ್ತು ಮತ್ತು ನಿಯಮಗಳಿಗೆ ಅನುಸಾರವಾಗಿ ಮೌಲ್ಯಾಧಾರಿತ ಶಿಕ್ಷಣವನ್ನು ಒದಗಿಸುವ" ಶಾಲೆಯ ಬದ್ಧತೆಯನ್ನು ಪುನರುಚ್ಚರಿಸಿದರು.

ಟಿವಿ ಚಾನೆಲ್ ಒಂದಕ್ಕೆ ಮಾತನಾಡಿದ ಸೀನಿಯರ್ ಹೆಲೀನಾ, ವಿದ್ಯಾರ್ಥಿನಿಯ ತಂದೆ ಮತ್ತು ಇತರ ಆರು ಜನರು ಶುಕ್ರವಾರ (ಅಕ್ಟೋಬರ್ 10) ಶಾಲಾ ಆವರಣದಲ್ಲಿ ಹುಡುಗಿಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ ನಂತರ ಪಲ್ಲೂರುತಿ ಪೊಲೀಸರಿಗೆ ದೂರು ಸಲ್ಲಿಸಿದ್ದೇನೆ ಎಂದು ಹೇಳಿದರು. "ಅವರ ವಿಧಾನವು ಪ್ರಚೋದನಕಾರಿ ಮತ್ತು ಬೆದರಿಕೆಯ ಸ್ವರೂಪದ್ದಾಗಿತ್ತು" ಎಂದು ಅವರು ಆರೋಪಿಸಿದ್ದಾರೆ.

ಮಧ್ಯ ಕೇರಳದ ಕೆಲವು ಭಾಗಗಳಲ್ಲಿ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಹೆಚ್ಚುತ್ತಿರುವ ಅಶಾಂತಿಯ ಮಧ್ಯೆ ಈ ಘಟನೆ ನಡೆದಿದೆ. ಕಳೆದ ವರ್ಷ ಜುಲೈನಲ್ಲಿ, ಮುವಾಟ್ಟುಪುಳದಲ್ಲಿರುವ ನಿರ್ಮಲಾ ಕಾಲೇಜಿನಲ್ಲಿ ಮುಸ್ಲಿಂ ಸಮುದಾಯದ ಪ್ರಾರ್ಥನಾ ಕೊಠಡಿಗೆ ಬೇಡಿಕೆ ಇಟ್ಟಾಗಲೂ ಇದೇ ರೀತಿಯ ಸಮಸ್ಯೆ ಉಂಟಾಗಿ, ಧಾರ್ಮಿಕ ಮುಖಂಡರು ಮಧ್ಯಪ್ರವೇಶಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Operation Sindoor ಗೆ ಪಾಕಿಸ್ತಾನದ 100 ಕ್ಕೂ ಹೆಚ್ಚು ಸೈನಿಕರು ಬಲಿ, 12 ವಿಮಾನಗಳು ಧ್ವಂಸ: ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್

ಜೈಸಲ್ಮೇರ್‌ನಲ್ಲಿ ಹೊತ್ತಿ ಉರಿದ ಬಸ್: 15 ಮಂದಿ ಸಜೀವದಹನ; ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡ ಪ್ರಯಾಣಿಕರು, Video!

ಟೀಕೆ ಬದಲು ಸಾಮೂಹಿಕ ಪ್ರಯತ್ನ ಅಗತ್ಯ: ಕಿರಣ್​ ಮಜುಂದಾರ್​ಗೆ ಡಿ.ಕೆ ಶಿವಕುಮಾರ್ ತಿರುಗೇಟು

ಕದನ ವಿರಾಮಕ್ಕೆ ಕಿಮ್ಮತ್ತಿಲ್ಲ: ಗಾಜಾದಲ್ಲಿ ಮಾರಣ ಹೋಮ ಮುಂದುವರೆಸಿದ ಇಸ್ರೇಲ್; 9 ಪ್ಯಾಲೆಸ್ತೇನಿಯರು ಸಾವು!

ಮಿತಿ ಮೀರುತ್ತಿದ್ದೀರಾ? ಒಕ್ಕೂಟ ವ್ಯವಸ್ಥೆಯ ಕಥೆಯೇನು?: ತಮಿಳುನಾಡು ಕೇಸ್ ನಲ್ಲಿ ED ವಿರುದ್ಧ 'ಸುಪ್ರೀಂ' ಗರಂ; ಕೋರ್ಟ್ ಚಾಟಿಗೆ ತನಿಖಾ ಸಂಸ್ಥೆ ಬೇಸ್ತು!

SCROLL FOR NEXT