ನಿತೀಶ್ ಕುಮಾರ್ 
ದೇಶ

ಬಿಹಾರ ವಿಧಾನಸಭೆ ಚುನಾವಣೆ: JDU ಮೊದಲ ಲಿಸ್ಟ್ ರಿಲೀಸ್; 5 ಸಚಿವರು ಸೇರಿ 51 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಹಾಗೂ ಜೆಡಿಯು ತಲಾ 101 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಉಳಿದ ಕ್ಷೇತ್ರಗಳನ್ನು ಮೈತ್ರಿಕೂಟದ ಇತರ ಪಕ್ಷಗಳಿಗೆ ಬಿಟ್ಟುಕೊಡಲಾಗಿದೆ.

ಪಾಟ್ನಾ: ಸೀಟು ಹಂಚಿಕೆ ಕುರಿತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ ಇಂದು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮೊದಲ ಪಟ್ಟಿಯಲ್ಲಿ ಸಚಿವರಾದ ಶ್ರವಣ್ ಕುಮಾರ್, ವಿಜಯ್ ಕುಮಾರ್ ಚೌಧರಿ ಮತ್ತು ಮಹೇಶ್ವರ್ ಹಜಾರಿ ಸೇರಿದಂತೆ 51 ಅಭ್ಯರ್ಥಿಗಳ ಹೆಸರುಗಳು ಸೇರಿವೆ. ಜೆಡಿಯು ಟಿಕೆಟ್‌ನಲ್ಲಿ ಈಗಾಗಲೇ ನಾಮಪತ್ರ ಸಲ್ಲಿಸಿರುವ ಅನಂತ್ ಸಿಂಗ್ ಕೂಡ ಸೇರಿದ್ದಾರೆ. ಸೀಟು ಹಂಚಿಕೆ ಸಂಬಂಧ ಎನ್‌ಡಿಎ ಮೈತ್ರಿಯಲ್ಲಿ ಅಪಸ್ವರ ಎದ್ದಿರುವ ನಡುವೆ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಹಾಗೂ ಜೆಡಿಯು ತಲಾ 101 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಉಳಿದ ಕ್ಷೇತ್ರಗಳನ್ನು ಮೈತ್ರಿಕೂಟದ ಇತರ ಪಕ್ಷಗಳಿಗೆ ಬಿಟ್ಟುಕೊಡಲಾಗಿದೆ. ಎಲ್‌ಜೆಪಿ (ರಾಮ್ ವಿಲಾಸ್) 29, ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾ (ಆರ್‌ಎಲ್‌ಎಂ) ಪಕ್ಷಗಳಿಗೆ ತಲಾ ಆರು ಸ್ಥಾನಗಳನ್ನು ನೀಡಲಾಗಿದೆ. ಆದರೆ ಸೀಟು ಹಂಚಿಕೆ ಬಗ್ಗೆ ಎಚ್‌ಎಎಂ ಹಾಗೂ ಆರ್‌ಎಲ್‌ಎಂ ಪಕ್ಷಗಳ ನಾಯಕರು ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚುನಾವಣಾ ಪ್ರಚಾರವು ಅ.16ರಂದು ಪ್ರಾರಂಭವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!