ದೇಶ

ಯೆಮನ್‌ನಲ್ಲಿ ಕೇರಳದ ನರ್ಸ್ ಮರಣದಂಡನೆಗೆ ತಡೆ; ಯಾವುದೇ ಪ್ರತಿಕೂಲ ಘಟನೆ ನಡೆದಿಲ್ಲ: 'ಸುಪ್ರೀಂ'ಗೆ ಮಾಹಿತಿ

ಕೇಂದ್ರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಈ ವಿಷಯದಲ್ಲಿ ಹೊಸ ಮಧ್ಯವರ್ತಿಯೊಬ್ಬರು ಮಧ್ಯಪ್ರವೇಶಿಸಿದ್ದಾರೆ ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠಕ್ಕೆ ತಿಳಿಸಿದರು.

ನವದೆಹಲಿ: ಯೆಮೆನ್‌ನಲ್ಲಿ ಸ್ಥಳೀಯ ಪ್ರಜೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ಶಿಕ್ಷೆಯನ್ನು ತಡೆಹಿಡಿಯಲಾಗಿದೆ ಮತ್ತು ಯಾವುದೇ ಪ್ರತಿಕೂಲ ಘಟನೆಗಳು ನಡೆದಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಗುರುವಾರ ತಿಳಿಸಲಾಯಿತು.

ಕೇಂದ್ರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಈ ವಿಷಯದಲ್ಲಿ ಹೊಸ ಮಧ್ಯವರ್ತಿಯೊಬ್ಬರು ಮಧ್ಯಪ್ರವೇಶಿಸಿದ್ದಾರೆ ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠಕ್ಕೆ ತಿಳಿಸಿದರು.

'ಮರಣದಂಡನೆ ವಿಚಾರ ಏನಾಯಿತು?' ಎಂದು ಪೀಠ ಪ್ರಶ್ನಿಸಿತು.

ನಿಮಿಷ ಪ್ರಿಯಾ ಅವರಿಗೆ ಕಾನೂನು ಬೆಂಬಲದೊಂದಿಗೆ ಸಹಾಯ ಮಾಡುತ್ತಿರುವ 'ಸೇವ್ ನಿಮಿಷ ಪ್ರಿಯಾ ಇಂಟರ್‌ನ್ಯಾಷನಲ್ ಆ್ಯಕ್ಷನ್ ಕೌನ್ಸಿಲ್' ಸಂಘಟನೆಯನ್ನು ಪ್ರತಿನಿಧಿಸುವ ವಕೀಲರು, ಆಕೆಯ ಮರಣದಂಡನೆಗೆ ಸದ್ಯಕ್ಕೆ ತಡೆ ನೀಡಲಾಗಿದೆ ಎಂದು ಹೇಳಿದರು.

'ಈ ಪ್ರಕರಣದಲ್ಲಿ ಹೊಸ ಮಧ್ಯವರ್ತಿಯೊಬ್ಬರು ಮಧ್ಯಪ್ರವೇಶಿಸಿದ್ದಾರೆ. ಒಂದೇ ಒಂದು ಒಳ್ಳೆಯ ವಿಷಯವೆಂದರೆ, ಯಾವುದೇ ಪ್ರತಿಕೂಲ ಘಟನೆಗಳು ನಡೆಯುತ್ತಿಲ್ಲ' ಎಂದು ವೆಂಕಟರಮಣಿ ಹೇಳಿದರು.

ಅರ್ಜಿದಾರರ ಪರ ವಕೀಲರು ಪ್ರಕರಣವನ್ನು ಮುಂದೂಡಬಹುದು ಎಂದು ಹೇಳಿದರು.

'2026ರ ಜನವರಿಯಲ್ಲಿ ಅರ್ಜಿಯನ್ನು ಪಟ್ಟಿ ಮಾಡಲಾಗಿದೆ. ಅಗತ್ಯವಿದ್ದರೆ ಪಕ್ಷಗಳು ಆರಂಭಿಕ ವಿಚಾರಣೆ ನಡೆಸಲು ಅರ್ಜಿ ಸಲ್ಲಿಸಲು ಮುಕ್ತವಾಗಿರುತ್ತವೆ' ಎಂದು ಪೀಠ ಹೇಳಿದೆ.

2017ರಲ್ಲಿ ಯೆಮೆನ್‌ನಲ್ಲಿ ತನ್ನ ವ್ಯವಹಾರ ಪಾಲುದಾರನನ್ನು ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೊಳಗಾದ 38 ವರ್ಷದ ನರ್ಸ್ ಅನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಉನ್ನತ ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.

ಜುಲೈ 18 ರಂದು ಕೇಂದ್ರ ಸರ್ಕಾರವು ಪ್ರಿಯಾ ಸುರಕ್ಷಿತವಾಗಿ ಹೊರಬರಲು ಪ್ರಯತ್ನಗಳು ನಡೆಯುತ್ತಿವೆ ಮತ್ತು ಸರ್ಕಾರ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು.

ಪ್ರಿಯಾ ಅವರನ್ನು 2017ರಲ್ಲಿ ಅಪರಾಧಿ ಎಂದು ಘೋಷಿಸಲಾಯಿತು. 2020ರಲ್ಲಿ ಮರಣದಂಡನೆ ವಿಧಿಸಲಾಯಿತು ಮತ್ತು 2023ರಲ್ಲಿ ಅವರ ಅಂತಿಮ ಮೇಲ್ಮನವಿಯನ್ನು ತಿರಸ್ಕರಿಸಲಾಯಿತು.

ಕೇರಳದ ಪಾಲಕ್ಕಾಡ್ ಮೂಲದ ಅವರು ಯೆಮೆನ್ ರಾಜಧಾನಿ ಸನಾದಲ್ಲಿರುವ ಜೈಲಿನಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

ಬಿಜೆಪಿ-ಸಿಪಿಐ(ಎಂ) ಹೊಂದಾಣಿಕೆಯಿಂದ ಕೇರಳಕ್ಕೆ ಹೊಸ ಹೆಸರು; ಕೇಂದ್ರ ಬಂಗಾಳವನ್ನು ನಿರ್ಲಕ್ಷಿಸಿದೆ: ಮಮತಾ

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ

SCROLL FOR NEXT