ಪ್ರಧಾನಿ ನರೇಂದ್ರ ಮೋದಿ- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ online desk
ದೇಶ

ನಮ್ಮ ಆದ್ಯತೆಗಳಿಗೆ ತಕ್ಕಂತೆ ವ್ಯವಹಾರ: ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಭಾರತದ ತಿರುಗೇಟು!

ಅಸ್ಥಿರ ಇಂಧನ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದು ಭಾರತದ ನಿರಂತರ ಆದ್ಯತೆಯಾಗಿದೆ ಎಂದು ವಿದೇಶಾಂಗ ಇಲಾಖೆ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸ್ಪಷ್ಟವಾದ ಉತ್ತರ ನೀಡಿದೆ.

ನವದೆಹಲಿ: ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಭಾರತದ ಪ್ರಧಾನಿ ಮೋದಿ ನನಗೆ ಭರವಸೆ ನೀಡಿದ್ದರು ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ಭಾರತ ಪ್ರತಿಕ್ರಿಯೆ ನೀಡಿದೆ.

ಅಸ್ಥಿರ ಇಂಧನ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದು ಭಾರತದ ನಿರಂತರ ಆದ್ಯತೆಯಾಗಿದೆ ಎಂದು ವಿದೇಶಾಂಗ ಇಲಾಖೆ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸ್ಪಷ್ಟವಾದ ಉತ್ತರ ನೀಡಿದೆ.

"ಭಾರತ ತೈಲ ಮತ್ತು ಅನಿಲದ ಗಮನಾರ್ಹ ಆಮದುದಾರ. ಅಸ್ಥಿರ ಇಂಧನ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದು ನಮ್ಮ ಸ್ಥಿರ ಆದ್ಯತೆಯಾಗಿದೆ. ನಮ್ಮ ಆಮದು ನೀತಿಗಳು ಸಂಪೂರ್ಣವಾಗಿ ಈ ಉದ್ದೇಶದಿಂದಲೇ ನಡೆಯುತ್ತದೆ" ಎಂದು ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

"ಸ್ಥಿರ ಇಂಧನ ಬೆಲೆಗಳು ಮತ್ತು ಸುರಕ್ಷಿತ ಪೂರೈಕೆಗಳನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಇಂಧನ ನೀತಿಯ ಅವಳಿ ಗುರಿಗಳಾಗಿವೆ. ಇದರಲ್ಲಿ ನಮ್ಮ ಇಂಧನ ಮೂಲವನ್ನು ವಿಶಾಲ ಆಧಾರದ ಮೇಲೆ ಪಡೆಯುವುದು ಮತ್ತು ಮಾರುಕಟ್ಟೆ ಪರಿಸ್ಥಿತಿಗಳನ್ನು ಪೂರೈಸಲು ಸೂಕ್ತವಾದಂತೆ ವೈವಿಧ್ಯಗೊಳಿಸುವ ಉದ್ದೇಶವೂ ಸೇರಿದೆ" ಎಂದು ವಿದೇಶಾಂಗ ಇಲಾಖೆ ಹೇಳಿದೆ.

"ಯುಎಸ್‌ಗೆ ಸಂಬಂಧಿಸಿದಂತೆ, ನಾವು ಹಲವು ವರ್ಷಗಳಿಂದ ನಮ್ಮ ಇಂಧನ ಸಂಗ್ರಹಣೆಯನ್ನು ವಿಸ್ತರಿಸಲು ಪ್ರಯತ್ನಿಸುತ್ತಿದ್ದೇವೆ. ಇದು ಕಳೆದ ದಶಕದಲ್ಲಿ ಸ್ಥಿರವಾಗಿ ಪ್ರಗತಿ ಸಾಧಿಸಿದೆ. ಪ್ರಸ್ತುತ ಆಡಳಿತವು ಭಾರತದೊಂದಿಗೆ ಇಂಧನ ಸಹಕಾರವನ್ನು ಗಾಢವಾಗಿಸಲು ಆಸಕ್ತಿ ತೋರಿಸಿದೆ. ಚರ್ಚೆಗಳು ನಡೆಯುತ್ತಿವೆ" ಎಂದು ವಿದೇಶಾಂಗ ಇಲಾಖೆ ಅಮೆರಿಕ ಅಧ್ಯಕ್ಷರಿಗೆ ತಿರುಗೇಟು ನೀಡಿದೆ.

ರಷ್ಯಾದಿಂದ ಭಾರತ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷರು ಹೇಳಿದ ನಂತರ ವಿದೇಶಾಂಗ ಇಲಾಖೆ ಬಂದಿದೆ. "ರಷ್ಯಾದಿಂದ ತೈಲ ಖರೀದಿ ಇರುವುದಿಲ್ಲ ಎಂದು ಅವರು ನನಗೆ ಭರವಸೆ ನೀಡಿದ್ದಾರೆ. ಅವರು ಅದನ್ನು ತಕ್ಷಣ ಮಾಡಲು ಸಾಧ್ಯವಿಲ್ಲ. ಇದು ಸ್ವಲ್ಪ ದೀರ್ಘ ಪ್ರಕ್ರಿಯೆ, ಆದರೆ ಈ ಪ್ರಕ್ರಿಯೆಯು ಶೀಘ್ರದಲ್ಲೇ ಮುಗಿಯಲಿದೆ" ಎಂದು ಟ್ರಂಪ್ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎರಡನೇ ಬಾರಿಗೆ ಭೇಟಿ: ಸತೀಶ್ ಜಾರಕಿಹೊಳಿ ಬಳಿ ಬೆಂಬಲ ಕೇಳಿದ್ರಾ ಡಿಕೆ ಶಿವಕುಮಾರ್!

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!

ಅಬಕಾರಿ ಇಲಾಖೆಗೆ 43,000 ಕೋಟಿ ರೂ ತೆರಿಗೆ ಸಂಗ್ರಹದ ಗುರಿ! ವಾಣಿಜ್ಯ ಇಲಾಖೆಗೆ 'ಟಾರ್ಗೆಟ್' ಎಷ್ಟು?

‘ಡೆವಿಲ್': ನಾಳೆ ಮಧ್ಯಾಹ್ನ 1:05 ರಿಂದ ಅಡ್ವಾನ್ಸ್ ಬುಕ್ಕಿಂಗ್ ಓಪನ್ಸ್‌ ! ಈಗಿನಿಂದಲೇ ಅಭಿಮಾನಿಗಳ ಭರ್ಜರಿ ಸಿದ್ಧತೆ, Video

ಪಾಕಿಸ್ತಾದ 'ನ್ಯೂಕ್ಲಿಯರ್ ಬಟನ್' ಈಗ ಅಸಿಮ್ ಮುನೀರ್ ಕೈಯಲ್ಲಿ! ಭಾರತದ ವಿರುದ್ಧ ಸೇಡಿಗೆ ಮುಂದಾಗ್ತಾರಾ?

SCROLL FOR NEXT