ಸಾಂದರ್ಭಿಕ ಚಿತ್ರ 
ದೇಶ

ನಕಲಿ ನೋಟು ಮುದ್ರಿಸುತ್ತಿದ್ದ ಬೃಹತ್ ಜಾಲ ಪತ್ತೆ, 1 ಕೋಟಿ ರೂ ಮೌಲ್ಯದ fake currency ಪತ್ತೆ

ಕರ್ನಾಟಕ-ಮಹಾರಾಷ್ಟ್ರ ಗಡಿಯ ಬಳಿ ಕಾರ್ಯನಿರ್ವಹಿಸುತ್ತಿದ್ದ ದೊಡ್ಡ ಪ್ರಮಾಣದ ನಕಲಿ ಕರೆನ್ಸಿ ಜಾಲವನ್ನು ಮಹಾರಾಷ್ಟ್ರ ಪೊಲೀಸರು ಭೇದಿಸಿದ್ದು, 1 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಳಗಾವಿ: ರಾಜ್ಯದಲ್ಲಿ ಕೋಟಾ ನೋಟು ಮುದ್ರಿಸುತ್ತಿದ್ದ ಬೃಹತ್ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು, ಬರೊಬ್ಬರಿ 1 ಕೋಟಿ ರೂ ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಗಡಿಯ ಬಳಿ ಕಾರ್ಯನಿರ್ವಹಿಸುತ್ತಿದ್ದ ದೊಡ್ಡ ಪ್ರಮಾಣದ ನಕಲಿ ಕರೆನ್ಸಿ ಜಾಲವನ್ನು ಮಹಾರಾಷ್ಟ್ರ ಪೊಲೀಸರು ಭೇದಿಸಿದ್ದು, 1 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಮಿರಾಜ್‌ನ ಗಾಂಧಿ ಚೌಕ್ ಪೊಲೀಸ್ ಠಾಣೆಯ ವಿಶೇಷ ಪೊಲೀಸ್ ತಂಡವು ಬೆಳಗಾವಿ ತಾಲ್ಲೂಕಿನ ಕಾಗವಾಡದಿಂದ ಸುಮಾರು 15 ಕಿ.ಮೀ ದೂರದಲ್ಲಿ ಮಹಾರಾಷ್ಟ್ರ ಸರಹದ್ದಿನಲ್ಲಿ 500 ರೂ ಮುಖಬೆಲೆಯ ನಕಲಿ ನೋಟುಗಳನ್ನು ಈ ತಂಡ ಸಾಗಣೆ ಮಾಡುತ್ತಿತ್ತು.

ಈ ವೇಳೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ನಕಲಿ ನೋಟುಗಳನ್ನು ಮುದ್ರಿಸುವ ಮತ್ತು ಚಲಾವಣೆ ಮಾಡುವಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ತಂಡ ಬಂಧಿಸಿದೆ.

ಬಂಧಿತರಲ್ಲಿ ಮಹಾರಾಷ್ಟ್ರದ ಮೊಬೈಲ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುವ ಚಾಲಕನೂ ಸೇರಿದ್ದಾನೆ ಎಂದು ಮೂಲಗಳು ತಿಳಿಸಿವೆ. ದಾಳಿಯ ಸಮಯದಲ್ಲಿ ಪೊಲೀಸರು ಒಂದು ಕಾರು, ಮುದ್ರಣ ಯಂತ್ರಗಳು, ವಿಶೇಷ ಕಾಗದ ಮತ್ತು ನಕಲಿ ಕರೆನ್ಸಿ ಮುದ್ರಿಸಲು ಬಳಸುವ ಇತರ ಉಪಕರಣಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.

ಅಲ್ಲದೆ ನಕಲಿ ಕರೆನ್ಸಿ ವ್ಯಾಪಾರದಲ್ಲಿ ಭಾಗಿಯಾಗಿರುವ ವ್ಯಾಪಕ ಜಾಲವನ್ನು ಪತ್ತೆಹಚ್ಚಲು ತನಿಖೆ ಈಗ ಸಾಂಗ್ಲಿ, ಕೊಲ್ಹಾಪುರ ಮತ್ತು ಬೆಳಗಾವಿ ಜಿಲ್ಲೆಗಳ ಗಡಿ ಪ್ರದೇಶಗಳಲ್ಲಿ ವಿಸ್ತರಿಸಿದೆ. ಜಾಲದ ಗಡಿಯಾಚೆಗಿನ ಸಂಪರ್ಕಗಳು ಮತ್ತು ವಿತರಣಾ ಮಾರ್ಗಗಳ ಬಗ್ಗೆ ತನಿಖೆ ಮುಂದುವರೆದಂತೆ ಹೆಚ್ಚಿನ ಬಂಧನಗಳು ನಡೆಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್