ದೇಶ

ಅಕ್ರಮ ಗಣಿಗಾರಿಕೆ ವಿರೋಧಿಸಿದ್ದಕ್ಕೆ ದಲಿತ ವ್ಯಕ್ತಿ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ!

ಮಧ್ಯಪ್ರದೇಶದ ಕಟ್ನಿ ಜಿಲ್ಲಾ ಕೇಂದ್ರದಿಂದ ಸುಮಾರು 45 ಕಿಲೋಮೀಟರ್ ದೂರದಲ್ಲಿರುವ ಬಹೋರಿಬಂದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮತ್ವಾರಾ ಗ್ರಾಮದಲ್ಲಿ ಅಕ್ಟೋಬರ್ 14 ರಂದು ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.

ಭೋಪಾಲ್: ಅಕ್ರಮ ಗಣಿಗಾರಿಕೆಯನ್ನು ವಿರೋಧಿಸುತ್ತಿದ್ದ ದಲಿತ ಯುವಕನನ್ನು ನಾಲ್ವರು ವ್ಯಕ್ತಿಗಳು ಥಳಿಸಿ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಮಧ್ಯಪ್ರದೇಶದ ಕಟ್ನಿ ಜಿಲ್ಲಾ ಕೇಂದ್ರದಿಂದ ಸುಮಾರು 45 ಕಿಲೋಮೀಟರ್ ದೂರದಲ್ಲಿರುವ ಬಹೋರಿಬಂದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮತ್ವಾರಾ ಗ್ರಾಮದಲ್ಲಿ ಅಕ್ಟೋಬರ್ 14 ರಂದು ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.

"ರಾಮಾನುಜ್ ಪಾಂಡೆ, ರಾಮ್ ಬಿಹಾರಿ ಪಾಂಡೆ, ಪವನ್ ಪಾಂಡೆ ಮತ್ತು ಸತೀಶ್ ಪಾಂಡೆ ರಾಜ್‌ಕುಮಾರ್ ಚೌಧರಿಯ ಮೇಲೆ ಹಲ್ಲೆ ನಡೆಸಿ ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಐವರೂ ಮತ್ವಾರಾ ಗ್ರಾಮದ ನಿವಾಸಿಗಳಾಗಿದ್ದಾರೆ. ಇಂದು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ನಾಲ್ವರು ತಲೆಮರೆಸಿಕೊಂಡಿದ್ದಾರೆ ಮತ್ತು ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ" ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಡೆಹರಿಯಾ ಹೇಳಿದರು.

ಗ್ರಾಮದ ಸರಪಂಚರ ಮಗನಾದ ಪವನ್ ಪಾಂಡೆ ತನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿ, ಜಾತಿ ನಿಂದನೆ ಮಾಡಿ, ಪೊಲೀಸರನ್ನು ಸಂಪರ್ಕಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚೌಧರಿ ಆರೋಪಿಸಿದ್ದಾರೆ.

ಆರೋಪಿಗಳು ತಮ್ಮ ಜಮೀನಿನ ಬಳಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದರು ಎಂದು ಚೌಧರಿ ಹೇಳಿಕೊಂಡಿದ್ದಾರೆ, ಅದನ್ನು ಅವರು ವಿರೋಧಿಸಿದ್ದರು.

ಕಾಕತಾಳೀಯವೆಂದರೆ, 2023 ರಲ್ಲಿ ಕಟ್ನಿಯಿಂದ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ಸಿಧಿ ಜಿಲ್ಲೆಯಲ್ಲಿ ನಡೆದ ಇದೇ ರೀತಿಯ ಘಟನೆಯು ರಾಷ್ಟ್ರೀಯ ಸುದ್ದಿಗಳನ್ನು ಗಳಿಸಿತ್ತು ಮತ್ತು ಆ ವರ್ಷದ ಕೊನೆಯಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರಮುಖ ವಿಷಯವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ; ಕೆಲಹೊತ್ತು ಧ್ಯಾನ

ಕಾವೇರಿ ಕಿಚ್ಚಿನ ನಡುವೆಯೇ ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ, ಶಾಲಾ-ಕಾಲೇಜುಗಳಿಗೆ ರಜೆ! ಹಾರಂಗಿ ಭರ್ತಿ, Video

Commonwealth Games 2026: ಭಾರತಕ್ಕೆ ಡಬಲ್ ಧಮಾಕ; ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಪ್ರೀತಿ, ಜೈಸ್ಮಿನ್, ಭಾರತಕ್ಕೆ ಒಟ್ಟು 27 ಪದಕ!

ಏರ್ಪೋರ್ಟ್ to ಸೆಮಿಕಂಡಕ್ಟರ್‌, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಮೈಸೂರಿನಲ್ಲಿ ‘ಗೋ ಬ್ಯಾಕ್ ಮೋದಿ’ ಪ್ರತಿಭಟನೆಗೆ ಯತ್ನ; DSS ಮುಖಂಡರು ಪೊಲೀಸ್ ವಶಕ್ಕೆ