ರಣಧೀರ್ ಜೈಸ್ವಾಲ್ 
ದೇಶ

ರಷ್ಯಾದಿಂದ ತೈಲ ಖರೀದಿ: ಡೊನಾಲ್ಡ್ ಟ್ರಂಪ್ ಹೇಳಿಕೆ ಕುರಿತು ಭಾರತ ಹೇಳಿದ್ದು ಏನು?

ಅಸ್ಥಿರ ಇಂಧನ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದು ಸ್ಥಿರ ಆದ್ಯತೆಯಾಗಿದೆ ಎಂದು ಹೇಳಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದಾರೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಕುರಿತು ಭಾರತ ಪ್ರತಿಕ್ರಿಯಿಸಿದೆ.

ಅಸ್ಥಿರ ಇಂಧನ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದು ಸ್ಥಿರ ಆದ್ಯತೆಯಾಗಿದೆ ಎಂದು ಹೇಳಿದೆ.

ಭಾರತ ತೈಲ ಮತ್ತು ಅನಿಲದ ಗಮನಾರ್ಹ ಆಮದುದಾರ. ಅಸ್ಥಿರ ಇಂಧನದ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದು ನಮ್ಮ ಸ್ಥಿರ ಆದ್ಯತೆಯಾಗಿದೆ. ನಮ್ಮ ಆಮದು ನೀತಿಗಳು ಸಂಪೂರ್ಣವಾಗಿ ಈ ಉದ್ದೇಶದಿಂದ ನಿರೂಪಿತವಾಗಿರುತ್ತವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ಸ್ಥಿರ ಇಂಧನ ಬೆಲೆಗಳು ಮತ್ತು ಸುರಕ್ಷಿತ ಪೂರೈಕೆ ಖಾತ್ರಿ ನಮ್ಮ ಇಂಧನ ನೀತಿಯ ಅವಳಿ ಗುರಿಗಳಾಗಿವೆ. ಇದು ನಮ್ಮ ಇಂಧನ ಮೂಲ ಮತ್ತು ಮಾರುಕಟ್ಟೆ ಪರಿಸ್ಥಿತಿಯನ್ನು ಆಧರಿಸುತ್ತದೆ. ಅಮೆರಿಕ ಕಾಳಜಿ ವಹಿಸುತ್ತಿರುವಂತೆ ನಾವು ನಮ್ಮ ಇಂಧನ ಸಂಗ್ರಹಣೆಯನ್ನು ವಿಸ್ತರಿಸಲು ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದೇವೆ. ಇದು ಕಳೆದ ದಶಕದಲ್ಲಿ ಸ್ಥಿರವಾಗಿ ಪ್ರಗತಿ ಸಾಧಿಸಿದೆ. ಹಾಲಿ ಸರ್ಕಾರ ಭಾರತದೊಂದಿಗೆ ಇಂಧನ ಸಹಕಾರವನ್ನು ಮತ್ತಷ್ಟು ಉತ್ತಮಗೊಳಿಸಲು ಆಸಕ್ತಿಯನ್ನು ತೋರಿಸಿದೆ. ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿಕೆಯಲ್ಲಿ ಅವರು ಹೇಳಿದ್ದಾರೆ.

ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷರು ಹೇಳಿಕೊಂಡ ನಂತರ ಜೈಸ್ವಾಲ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ರಷ್ಯಾದಿಂದ ಯಾವುದೇ ತೈಲ ಖರೀದಿಗಳಿಲ್ಲ ಎಂದು ಮೋದಿ ನನಗೆ ಭರವಸೆ ನೀಡಿದ್ದಾರೆ. ಅವರು ಅದನ್ನು ತಕ್ಷಣವೇ ನಿಲ್ಲಿಸಲು ಸಾಧ್ಯವಿಲ್ಲ. ಇದು ಸ್ವಲ್ಪ ಪ್ರಕ್ರಿಯೆಯಾಗಿದೆ, ಆದರೆ ಪ್ರಕ್ರಿಯೆಯು ಶೀಘ್ರದಲ್ಲೇ ಮುಗಿಯಲಿದೆ" ಎಂದು ಟ್ರಂಪ್ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಸತ್ ಚಳಿಗಾಲದ ಅಧಿವೇಶನ: SIR ಬಗ್ಗೆ ಚರ್ಚೆಗೆ ವಿಪಕ್ಷಗಳ ಪ್ರತಿಭಟನೆ, ಗದ್ದಲ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ

ಸಂಸತ್ ಚಳಿಗಾಲದ ಅಧಿವೇಶನ: ಸೋಲಿನ ಭೀತಿ ಚರ್ಚೆಗೆ ಕಾರಣವಾಗಬಾರದು- ವಿಪಕ್ಷಗಳಿಗೆ ಪ್ರಧಾನಿ ಮೋದಿ ಒತ್ತಾಯ

ಇಶಾ ಯೋಗ ಕೇಂದ್ರದಲ್ಲಿ ರಾಜ್ ನಿಡಿಮೋರು ಜೊತೆ ಎರಡನೇ ಮದುವೆಯಾದ ನಟಿ ಸಮಂತಾ ರುತ್ ಪ್ರಭು!

'ಈ ಜಗತ್ತಿನಲ್ಲಿ ಯಾವುದೂ ಅಸಾಧ್ಯವಲ್ಲ, ಇಚ್ಛಾಶಕ್ತಿಯೇ ದೊಡ್ಡ ಸಂಪತ್ತು': ಅಂಧ ಕ್ರಿಕೆಟ್ ಆಟಗಾರ್ತಿಯ ಯಶೋಗಾಥೆ!

ಜಗತ್ತಿನ ಗಮನ ಸೆಳೆಯಲಿದೆ ಪುಟಿನ್ ದೆಹಲಿ ಭೇಟಿ (ಜಾಗತಿಕ ಜಗಲಿ)

SCROLL FOR NEXT