ದೇಶ

5 ಕೋಟಿ ರೂ ಹಣ, ಐಷಾರಾಮಿ ಕಾರು, 1.5 ಕೆಜಿ ಆಭರಣ, 22 ವಾಚು: ಭ್ರಷ್ಟ IPS ಅಧಿಕಾರಿ ಬಂಧನ

ಹರ್‌ಚರಣ್ ಸಿಂಗ್ ಬುಲ್ಲಾರ್ 2009ರ ಬ್ಯಾಚ್‌ನ ಐಪಿಎಸ್ ಅಧಿಕಾರಿ. ಪಂಜಾಬ್‌ನ ರೋಪರ್ ವಲಯದಲ್ಲಿ ಡಿಐಜಿಯಾಗಿದ್ದಾರೆ. 8 ಲಕ್ಷ ರೂಪಾಯಿ ಲಂಚ ಪಡೆದ ಆರೋಪದಲ್ಲಿ ಸಿಬಿಐಗೆ ಬಲೆಗೆಬಿದ್ದಿದ್ದಾರೆ.

ಚಂಡೀಗಡ: ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಪಂಜಾಬ್‌ನ ರೋಪರ್ ವಲಯ ಡಿಐಜಿ ಹರ್‌ಚರಣ್ ಸಿಂಗ್ ಬುಲ್ಲಾರ್​ರನ್ನು ಸಿಬಿಐ ಗುರುವಾರ ಬಂಧಿಸಿದೆ.

ಸಿಬಿಐ ಅಧಿಕಾರಿಗಳು ಭ್ರಷ್ಟಾಚಾರ ಕೇಸ್​ನಲ್ಲಿ ಐಪಿಎಸ್​ ಅಧಿಕಾರಿ ಹರ್ಚರಣ್ ಸಿಂಗ್ ಭುಲ್ಲರ್ ಮನೆ ಮೇಲೆ ದಾಳಿ ನಡೆಸಿದಾಗ ಬರೋಬ್ಬರಿ 5 ಕೋಟಿ ರು. ನಗದು, ಐಷಾರಾಮಿ ವಾಹನಗಳು, 1.5 ಕೆ.ಜಿ. ಆಭರಣಗಳು, 22 ಐಷಾರಾಮಿ ಕೈಗಡಿಯಾರಗಳು, ಆಮದು ಮದ್ಯ ಮತ್ತು ಆಯುಧಗಳಂತಹ ಬೃಹತ್ ಸಂಪತ್ತುಗಳು ಪತ್ತೆಯಾಗಿವೆ. ಈ ಘಟನೆಯು ಪಂಜಾಬ್ ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಚರ್ಚೆಗೆ ಕಾರಣವಾಗಿದ್ದು, ಸಿಬಿಐ ತೀವ್ರ ತನಿಖೆಗೆ ಕೈಹಾಕಿದೆ.

ಹರ್‌ಚರಣ್ ಸಿಂಗ್ ಬುಲ್ಲಾರ್ 2009ರ ಬ್ಯಾಚ್‌ನ ಐಪಿಎಸ್ ಅಧಿಕಾರಿ. ಪಂಜಾಬ್‌ನ ರೋಪರ್ ವಲಯದಲ್ಲಿ ಡಿಐಜಿಯಾಗಿದ್ದಾರೆ. 8 ಲಕ್ಷ ರೂಪಾಯಿ ಲಂಚ ಪಡೆದ ಆರೋಪದಲ್ಲಿ ಸಿಬಿಐಗೆ ಬಲೆಗೆಬಿದ್ದಿದ್ದಾರೆ. ಇವರ ಜೊತೆ ಮಧ್ಯವರ್ತಿ ಕೃಷ್ಣ ಎಂಬಾತನನ್ನು ಬಂಧಿಸಲಾಗಿದೆ. ಆಕಾಶ್ ಬಟ್ಟಾ ಎಂಬ ಸ್ಕ್ರ್ಯಾಪ್ ವ್ಯಾಪಾರಿ ವಿರುದ್ಧ ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಮಧ್ಯವರ್ತಿ ಮೂಲಕ ಲಂಚ ಪಡೆಯುವ ವೇಳೆ ಲಾಕ್ ಆಗಿದ್ದಾರೆ.

8 ಲಕ್ಷ ರೂ. ಲಂಚ ಕೊಡದಿದ್ದರೆ ಕ್ರಿಮಿನಲ್ ಕೇಸ್ ಜೊತೆ ಉದ್ಯಮಕ್ಕೆ ತೊಂದರೆ ಎದುರಿಸಬೇಕಾಗುತ್ತದೆ ಎಂದು ಡಿಐಜಿ ಬೆದರಿಸಿದ್ದರು. ಈ ಬಗ್ಗೆ ಉದ್ಯಮಿ ಆಕಾಶ್ ಸಿಬಿಐಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದಲ್ಲಿ ಅಖಾಡಕ್ಕಿಳಿದ ಸಿಬಿಐ ಅಧಿಕಾರಿಗಳು, ಲಂಚ ಪಡೆಯುವ ವೇಳೆ ರೆಡ್‌ಹ್ಯಾಂಡಾಗಿ ಡಿಐಜಿ ಹರ್‌ಚರಣ್‌ರನ್ನು ಬಂಧಿಸಿದೆ.

5 ಕೋಟಿ ರೂಪಾಯಿಗೂ ಹೆಚ್ಚು ನಗದು ಸಿಕ್ಕಿದೆ. ಇದಲ್ಲದೆ 1.5 ಕೆಜಿ ಚಿನ್ನಾಭರಣ, ನೂರಾರು ಕೋಟಿ ರೂ. ಮೌಲ್ಯದ ನಿವೇಶನ-ಜಮೀನಿನ ದಾಖಲೆಪತ್ರಗಳು, ಐಷಾರಾಮಿ ಮರ್ಸಿಡಿಸ್, ಆಡಿ ಕಾರ್‌ನ ಕೀಗಳು, 22 ದುಬಾರಿ ಬೆಲೆಯ ವಾಚ್‌ಗಳು, 40 ಲೀಟರ್‌ ಇಂಪೋರ್ಟೆಡ್ ಮದ್ಯ, ಡಬಲ್ ಬ್ಯಾರಲ್ ಶಾಟ್‌ಗನ್, ಒಂದು ಪಿಸ್ತೂಲ್, ಒಂದು ರಿವಾಲ್ವರ್ ಮತ್ತು 1 ಏರ್‌ಗನ್ ಅನ್ನು ಸಿಬಿಐ ವಶಕ್ಕೆ ಪಡೆದಿದೆ.

ಇದಲ್ಲದೆ ಲಂಚದ ಡೀಲ್ ಕುದುರುಸಿದ್ದ ಮಧ್ಯವರ್ತಿ ಕೃಷ್ಣ ಎಂಬಾತನಿಂದ 21 ಲಕ್ಷ ರೂಪಾಯಿ ಜಪ್ತಿ ಮಾಡಲಾಗಿದೆ. ಡಿಜಿಐ ಮನೆಯಲ್ಲಿ ರಾತ್ರಿಯಿಡೀ ಶೋಧ ಮುಂದುವರಿದಿದ್ದು, ಬಂಧಿತರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ, ಸಂವಿಧಾನದ ಸ್ಪಷ್ಟ ಉಲ್ಲಂಘನೆ, ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಲು ಪರಿಶೀಲನೆ- ಸಿಎಂ ಸಿದ್ದರಾಮಯ್ಯ

ಒಂದೇ ಸಾಲು, ಎರಡೇ ಮಾತು: ಭಾಷಣ ಅರ್ಧಕ್ಕೇ ಮೊಟಕುಗೊಳಿಸಿ ಸದನ ಬಿಟ್ಟು ನಿರ್ಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್-Video

ಧಾರ್‌- ಭೋಜ್‌ಶಾಲಾ ವಿವಾದ: ವಸಂತ ಪಂಚಮಿಯಂದು ಹಿಂದೂ-ಮುಸ್ಲಿಮರ ಪ್ರಾರ್ಥನೆಗೆ 'ಸುಪ್ರೀಂ' ಅವಕಾಶ

ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಟ್ರಂಪ್ ದಿಢೀರ್ ಯೂ-ಟರ್ನ್: ಯುರೋಪಿನ 8 ರಾಷ್ಟ್ರಗಳ ಮೇಲೆ ಶೇ.10ರಷ್ಟು ಸುಂಕ ವಿಧಿಸದಿರಲು ನಿರ್ಧಾರ..!

ಪ್ರಧಾನಿ ಮೋದಿ 'ಅದ್ಭುತ ನಾಯಕ, ನನ್ನ ಉತ್ತಮ ಸ್ನೇಹಿತ, ಭಾರತದೊಂದಿಗೆ ಸದ್ಯದಲ್ಲೇ ಸುಗಮ ಒಪ್ಪಂದ': Donald Trump

SCROLL FOR NEXT