ಸಂಭಾಜಿನಗರ ರೈಲು ನಿಲ್ದಾಣ 
ದೇಶ

ಮಹಾರಾಷ್ಟ್ರ: ಔರಂಗಾಬಾದ್ ರೈಲು ನಿಲ್ದಾಣಕ್ಕೆ ಮರು ನಾಮಕರಣ; ಛತ್ರಪತಿ ಶಿವಾಜಿ ಮಹಾರಾಜರ ಪುತ್ರನ ಹೆಸರು!

ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಔರಂಗಾಬಾದ್ ನಗರವನ್ನು ಛತ್ರಪತಿ ಸಂಭಾಜಿನಗರ ಎಂದು ಮರುನಾಮಕರಣ ಮಾಡಿದ ಸುಮಾರು ಮೂರು ವರ್ಷಗಳ ನಂತರ ಇದೀಗ ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಲಾಗಿದೆ.

ಔರಂಗಾಬಾದ್: ಮಹಾರಾಷ್ಟ್ರದ ಔರಂಗಾಬಾದ್ ರೈಲು ನಿಲ್ದಾಣವನ್ನು ಛತ್ರಪತಿ ಸಂಭಾಜಿನಗರ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ.

ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಔರಂಗಾಬಾದ್ ನಗರವನ್ನು ಛತ್ರಪತಿ ಸಂಭಾಜಿನಗರ ಎಂದು ಮರುನಾಮಕರಣ ಮಾಡಿದ ಸುಮಾರು ಮೂರು ವರ್ಷಗಳ ನಂತರ ಇದೀಗ ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಲಾಗಿದೆ.

ಈ ಹಿಂದೆ ಮೊಘಲ್ ಚಕ್ರವರ್ತಿ ಔರಂಗಜೇಬನ ಹೆಸರನ್ನು ಇಡಲಾಗಿದ್ದ ನಗರಕ್ಕೆ ಮರಾಠಾ ದೊರೆ ಛತ್ರಪತಿ ಶಿವಾಜಿ ಮಹಾರಾಜರ ಮಗನ ಗೌರವಾರ್ಥವಾಗಿ ಸಂಭಾಜಿನಗರ ಎಂದು ಮರು ನಾಮಕರಣ ಮಾಡಲಾಗಿದೆ.

ಹಿಂದಿನ ಉದ್ಧವ್ ಠಾಕ್ರೆ ನೇತೃತ್ವದ MVA ಸರ್ಕಾರದಿಂದ ಮೂಲ ಹೆಸರು ಬದಲಾವಣೆ ಪ್ರಾರಂಭಿಸಲಾಯಿತು. ಭಾರತೀಯ ಜನತಾ ಪಾರ್ಟಿ ನೇತೃತ್ವದ ಮಹಾಯುತಿ ಸರ್ಕಾರವು ಅಕ್ಟೋಬರ್ 15 ರಂದು ಔರಂಗಾಬಾದ್ ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಲು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಔರಂಗಾಬಾದ್ ರೈಲು ನಿಲ್ದಾಣವನ್ನು 1900 ರಲ್ಲಿ ಆರಂಭಿಸಲಾಗಿದೆ. ಇದನ್ನು ಹೈದರಾಬಾದ್‌ನ 7 ನೇ ನಿಜಾಮ್ ಮೀರ್ ಒಸ್ಮಾನ್ ಅಲಿ ಖಾನ್ ನಿರ್ಮಿಸಿದ್ದರು. ಈ ರೈಲು ನಿಲ್ದಾಣ ಕಾಚೆಗುಡ ಮನ್ಮಾಡ್ ವಿಭಾಗದಲ್ಲಿದ್ದು, ದಕ್ಷಿಣ ಮಧ್ಯ ರೈಲ್ವೆ ವಲಯದ ನಾಂದೇಡ್ ವಿಭಾಗದಡಿ ಕಾರ್ಯನಿರ್ವಹಿಸುತ್ತದೆ. ಇದು ದೇಶದ ಪ್ರಮುಖ ನಗರಗಳೊಂದಿಗೆ ರೈಲು ಸಂಪರ್ಕವನ್ನು ಹೊಂದಿದೆ.

ಛತ್ರಪತಿ ಸಂಭಾಜಿನಗರ ನಗರವು ಪ್ರವಾಸಿ ಕೇಂದ್ರವಾಗಿದ್ದು, ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳಾದ ಅಜಂತಾ ಗುಹೆಗಳು ಮತ್ತು ಎಲ್ಲೋರಾ ಗುಹೆಗಳು ಸೇರಿದಂತೆ ಅನೇಕ ಐತಿಹಾಸಿಕ ಸ್ಮಾರಕಗಳಿಂದ ಹೆಸರುವಾಸಿಯಾಗಿದೆ. ಇದನ್ನು ಸಿಟಿ ಆಫ್ ಗೇಟ್ಸ್ ಎಂದೂ ಕರೆಯುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ನನಗೆ ಬೇಕಿರುವುದು ಅದೊಂದೆ...": ರಷ್ಯಾ-ಯುಕ್ರೇನ್ ಯುದ್ಧ ಕೊನೆಗೊಳಿಸಲು ಟ್ರಂಪ್ ಗೆ ಪುತಿನ್ ಷರತ್ತು; ಈಡೇರುತ್ತಾ 11 ವರ್ಷಗಳ ಗುರಿ?

Ro-Ko ಕಟ್ಟಿಹಾಕಿದ ಆಸೀಸ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ ಸೋತ Team India

ದೊಡ್ಡಬಳ್ಳಾಪುರ: "ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ"; ಕೃತಿ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ!

ದೊಡ್ಡವರ ಮನೆಗೆ ಹೋಗಬಾರದಿತ್ತು: ಶಾರುಖ್ ಖಾನ್ ಮನೆ ಪಾರ್ಟಿಯಲ್ಲಿ ಆದ ಕಹಿ ಅನುಭವ ಬಿಚ್ಚಿಟ್ಟ ನಟ ಗುಲ್ಶನ್ ದೇವಯ್ಯ!

ಬೆಳಗಾವಿ 'ಡಿಸಿಸಿ ಬ್ಯಾಂಕ್' ಚುನಾವಣೆ: ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಮಾರಾಮಾರಿ!

SCROLL FOR NEXT