ಸಂಭಾಜಿನಗರ ರೈಲು ನಿಲ್ದಾಣ 
ದೇಶ

ಮಹಾರಾಷ್ಟ್ರ: ಔರಂಗಾಬಾದ್ ರೈಲು ನಿಲ್ದಾಣಕ್ಕೆ ಮರು ನಾಮಕರಣ; ಛತ್ರಪತಿ ಶಿವಾಜಿ ಮಹಾರಾಜರ ಪುತ್ರನ ಹೆಸರು!

ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಔರಂಗಾಬಾದ್ ನಗರವನ್ನು ಛತ್ರಪತಿ ಸಂಭಾಜಿನಗರ ಎಂದು ಮರುನಾಮಕರಣ ಮಾಡಿದ ಸುಮಾರು ಮೂರು ವರ್ಷಗಳ ನಂತರ ಇದೀಗ ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಲಾಗಿದೆ.

ಔರಂಗಾಬಾದ್: ಮಹಾರಾಷ್ಟ್ರದ ಔರಂಗಾಬಾದ್ ರೈಲು ನಿಲ್ದಾಣವನ್ನು ಛತ್ರಪತಿ ಸಂಭಾಜಿನಗರ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ.

ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಔರಂಗಾಬಾದ್ ನಗರವನ್ನು ಛತ್ರಪತಿ ಸಂಭಾಜಿನಗರ ಎಂದು ಮರುನಾಮಕರಣ ಮಾಡಿದ ಸುಮಾರು ಮೂರು ವರ್ಷಗಳ ನಂತರ ಇದೀಗ ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಲಾಗಿದೆ.

ಈ ಹಿಂದೆ ಮೊಘಲ್ ಚಕ್ರವರ್ತಿ ಔರಂಗಜೇಬನ ಹೆಸರನ್ನು ಇಡಲಾಗಿದ್ದ ನಗರಕ್ಕೆ ಮರಾಠಾ ದೊರೆ ಛತ್ರಪತಿ ಶಿವಾಜಿ ಮಹಾರಾಜರ ಮಗನ ಗೌರವಾರ್ಥವಾಗಿ ಸಂಭಾಜಿನಗರ ಎಂದು ಮರು ನಾಮಕರಣ ಮಾಡಲಾಗಿದೆ.

ಹಿಂದಿನ ಉದ್ಧವ್ ಠಾಕ್ರೆ ನೇತೃತ್ವದ MVA ಸರ್ಕಾರದಿಂದ ಮೂಲ ಹೆಸರು ಬದಲಾವಣೆ ಪ್ರಾರಂಭಿಸಲಾಯಿತು. ಭಾರತೀಯ ಜನತಾ ಪಾರ್ಟಿ ನೇತೃತ್ವದ ಮಹಾಯುತಿ ಸರ್ಕಾರವು ಅಕ್ಟೋಬರ್ 15 ರಂದು ಔರಂಗಾಬಾದ್ ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಲು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಔರಂಗಾಬಾದ್ ರೈಲು ನಿಲ್ದಾಣವನ್ನು 1900 ರಲ್ಲಿ ಆರಂಭಿಸಲಾಗಿದೆ. ಇದನ್ನು ಹೈದರಾಬಾದ್‌ನ 7 ನೇ ನಿಜಾಮ್ ಮೀರ್ ಒಸ್ಮಾನ್ ಅಲಿ ಖಾನ್ ನಿರ್ಮಿಸಿದ್ದರು. ಈ ರೈಲು ನಿಲ್ದಾಣ ಕಾಚೆಗುಡ ಮನ್ಮಾಡ್ ವಿಭಾಗದಲ್ಲಿದ್ದು, ದಕ್ಷಿಣ ಮಧ್ಯ ರೈಲ್ವೆ ವಲಯದ ನಾಂದೇಡ್ ವಿಭಾಗದಡಿ ಕಾರ್ಯನಿರ್ವಹಿಸುತ್ತದೆ. ಇದು ದೇಶದ ಪ್ರಮುಖ ನಗರಗಳೊಂದಿಗೆ ರೈಲು ಸಂಪರ್ಕವನ್ನು ಹೊಂದಿದೆ.

ಛತ್ರಪತಿ ಸಂಭಾಜಿನಗರ ನಗರವು ಪ್ರವಾಸಿ ಕೇಂದ್ರವಾಗಿದ್ದು, ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳಾದ ಅಜಂತಾ ಗುಹೆಗಳು ಮತ್ತು ಎಲ್ಲೋರಾ ಗುಹೆಗಳು ಸೇರಿದಂತೆ ಅನೇಕ ಐತಿಹಾಸಿಕ ಸ್ಮಾರಕಗಳಿಂದ ಹೆಸರುವಾಸಿಯಾಗಿದೆ. ಇದನ್ನು ಸಿಟಿ ಆಫ್ ಗೇಟ್ಸ್ ಎಂದೂ ಕರೆಯುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel