ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ 
ದೇಶ

ಅಮೃತಸರ: ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ; ಹೊತ್ತಿ ಉರಿದ ಬೋಗಿಗಳು; Video

ಪಂಜಾಬ್‌ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಬೆಳಗ್ಗೆ 7:30ರ ಸುಮಾರಿಗೆ ರೈಲು ಸಂಖ್ಯೆ 12204 ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್‌ನ ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಚಂಡೀಗಢ: ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ ರೈಲಿನಲ್ಲಿ (ರೈಲು ಸಂಖ್ಯೆ 12204) ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಉರಿದ ಪಂಜಾಬ್‌ನಲ್ಲಿ ನಡೆದಿದೆ. ಓರ್ವ ಮಹಿಳಾ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದೆ, ಗಾಯಾಳು ಮಹಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಸಮಯದಲ್ಲಿ ರೈಲು ಅಮೃತಸರದಿಂದ ಪ್ರಯಾಣಿಸುತ್ತಿತ್ತು. ಆದ್ರೆ ಪ್ರಯಾಣಿಕರಿಗೆ ಯಾವುದೇ ಹಾನಿಯಾಗದೇ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಘಟನೆ ಬಳಿಕ ಭಯದ ವಾತಾವರಣ ಮೂಡಿದೆ. ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯ ಪ್ರಕಾರ, ಬೆಂಕಿ ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾಗಿದೆ.

ಪಂಜಾಬ್‌ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಬೆಳಗ್ಗೆ 7:30ರ ಸುಮಾರಿಗೆ ರೈಲು ಸಂಖ್ಯೆ 12204 ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್‌ನ ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದೆ. ರೈಲಿನ 2-3, ಜಿ -19 ಎಸಿ ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಪ್ರಯಾಣಿಕರೊಬ್ಬರು ಕೂಡಲೇ ಸರಪಳಿ ಎಳೆದು ರೈಲನ್ನು ನಿಲ್ಲಿಸಿದರು.

ತಕ್ಷಣ, ಪೈಲಟ್ (ಚಾಲಕ) ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಇಳಿಯುವಂತೆ ಕೇಳಿಕೊಂಡರು ಮತ್ತು ಬೆಂಕಿಯ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು. ಸದ್ಯ ಕೋಚ್‌ನಲ್ಲಿದ್ದ ಪ್ರಯಾಣಿಕರನ್ನ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ರೈಲ್ವೆ ನಿಲ್ದಾಣದ ಅಧಿಕಾರಿಗಳು, ನೌಕರರು, ಜಿಆರ್‌ಪಿ, ಆರ್‌ಪಿಎಫ್ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ತಲುಪಿದವು. ಅಗ್ನಿಶಾಮಕ ದಳದವರನ್ನೂ ಸಹ ಘಟನಾ ಸ್ಥಳಕ್ಕೆ ತಂದು ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಹೆಚ್ಚಿನ ಹಾನಿಯನ್ನು ತಡೆಗಟ್ಟಿದ ರೈಲ್ವೆ ಸಿಬ್ಬಂದಿ ಮತ್ತು ಸ್ಥಳೀಯ ಅಧಿಕಾರಿಗಳು ಬೆಂಕಿಯನ್ನು ತ್ವರಿತವಾಗಿ ನಂದಿಸಿದರು. ಅಪಘಾತದಲ್ಲಿ ಯಾವುದೇ ಸಾವುನೋವುಗಳು ಅಥವಾ ಗಾಯಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT