ಸಾಧ್ವಿ ಪ್ರಜ್ಞಾ 
ದೇಶ

ಮುಸ್ಲಿಂ ಯುವಕರನ್ನು ಮದುವೆಯಾದರೆ ಅಂತಹ ಮಗಳ ಕಾಲು ಮುರಿಯಿರಿ: ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಒಬ್ಬ ಹುಡುಗಿ ತನ್ನ ಸ್ವಂತ ಇಚ್ಛೆಯಿಂದ ಬೇರೆ ಧರ್ಮದ ಪುರುಷನನ್ನು ಮದುವೆಯಾಗಲು ಪ್ರಯತ್ನಿಸಿದರೆ ಪೋಷಕರು ಮಗನ ಅಥವಾ ಮಗಳ ಕಾಲುಗಳನ್ನು ಮುರಿಯಲು ಹಿಂಜರಿಯಬಾರದು ಎಂದು ಸಾಧ್ವಿ ಹೇಳಿದರು.

ನಮ್ಮ ಮಗಳು ಮಾತುಗಳನ್ನು ಕೇಳದಿದ್ದರೆ ಅಥವಾ ಮೌಲ್ಯಗಳನ್ನು ಅರ್ಥಮಾಡಿಕೊಳ್ಳದಿದ್ದರೆ ಅವಳಿಗೆ ಕಟ್ಟುನಿಟ್ಟಾಗಿ ಪಾಠ ಕಲಿಸುವುದು ಅವಶ್ಯಕ. ಕೆಲವೊಮ್ಮೆ ಮಗುವಿನ ಯೋಗಕ್ಷೇಮಕ್ಕಾಗಿ ಚಿತ್ರಹಿಂಸೆ ಅಗತ್ಯ. ಅವರ ಭವಿಷ್ಯಕ್ಕಾಗಿ ಹೊಡೆಯುವುದು ತಪ್ಪಿಲ್ಲ ಎಂದು ಸಾಧ್ವಿ ಪ್ರಜ್ಞಾ ಹೇಳಿದರು. ಮಗಳು ಜನಿಸಿದಾಗ ತಾಯಂದಿರು ತುಂಬಾ ಸಂತೋಷಪಡುತ್ತಾರೆ, ಲಕ್ಷ್ಮಿ, ಸರಸ್ವತಿ, ನಮ್ಮ ಮನೆಗೆ ಬಂದಿದ್ದಾಳೆ ಎಂದು ಆನಂದಿಸುತ್ತಾರೆ. ಎಲ್ಲರೂ ಅವಳನ್ನು ಅಭಿನಂದಿಸುತ್ತಾರೆ. ಆದರೆ ಅವಳು ದೊಡ್ಡವಳಾದಾಗ ತನಗೆ ಇಷ್ಟ ಬಂದಂತೆ ನಡೆದುಕೊಳ್ಳುತ್ತಾಳೆ ಎಂದರು.

ಸಾಧ್ವಿ ಪ್ರಜ್ಞಾ ಅವರ ಹೇಳಿಕೆಯಿಂದ ವೇದಿಕೆಯಲ್ಲಿದ್ದ ಅನೇಕರು ಆಘಾತಕ್ಕೊಳಗಾದರೆ ಕೆಲವರು ಚಪ್ಪಾಳೆ ತಟ್ಟಿದರು. ಅವರ ಹೇಳಿಕೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿರೋಧ ಪಕ್ಷಗಳು ಮತ್ತು ಮಹಿಳಾ ಸಂಘಟನೆಗಳು ಇದನ್ನು ಮಹಿಳಾ ಸ್ವಾತಂತ್ರ್ಯ ಮತ್ತು ಕಾನೂನು ಸುವ್ಯವಸ್ಥೆಯ ಮೇಲಿನ ದಾಳಿ ಎಂದು ಖಂಡಿಸಿವೆ. ಆದಾಗ್ಯೂ, ಬಿಜೆಪಿ ಈ ಹೇಳಿಕೆಗೆ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎರಡನೇ ಬಾರಿಗೆ ಭೇಟಿ: ಸತೀಶ್ ಜಾರಕಿಹೊಳಿ ಬಳಿ ಬೆಂಬಲ ಕೇಳಿದ್ರಾ ಡಿಕೆ ಶಿವಕುಮಾರ್!

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!

ಅಬಕಾರಿ ಇಲಾಖೆಗೆ 43,000 ಕೋಟಿ ರೂ ತೆರಿಗೆ ಸಂಗ್ರಹದ ಗುರಿ! ವಾಣಿಜ್ಯ ಇಲಾಖೆಗೆ 'ಟಾರ್ಗೆಟ್' ಎಷ್ಟು?

‘ಡೆವಿಲ್': ನಾಳೆ ಮಧ್ಯಾಹ್ನ 1:05 ರಿಂದ ಅಡ್ವಾನ್ಸ್ ಬುಕ್ಕಿಂಗ್ ಓಪನ್ಸ್‌ ! ಈಗಿನಿಂದಲೇ ಅಭಿಮಾನಿಗಳ ಭರ್ಜರಿ ಸಿದ್ಧತೆ, Video

ಪಾಕಿಸ್ತಾದ 'ನ್ಯೂಕ್ಲಿಯರ್ ಬಟನ್' ಈಗ ಅಸಿಮ್ ಮುನೀರ್ ಕೈಯಲ್ಲಿ! ಭಾರತದ ವಿರುದ್ಧ ಸೇಡಿಗೆ ಮುಂದಾಗ್ತಾರಾ?

SCROLL FOR NEXT