ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಂದರ್ಭಿಕ ಚಿತ್ರ 
ದೇಶ

Flood Relief: ಕರ್ನಾಟಕ, ಮಹಾರಾಷ್ಟ್ರಕ್ಕೆ 1,950 ಕೋಟಿ ರೂ ಬಿಡುಗಡೆಗೆ ಕೇಂದ್ರ ಸರ್ಕಾರ ಅನುಮೋದನೆ!

ಈ ವರ್ಷ ಕೇಂದ್ರ ಸರ್ಕಾರವು ಈಗಾಗಲೇ ಎಸ್‌.ಡಿ.ಆರ್‌.ಎಫ್‌ ಅಡಿಯಲ್ಲಿ 27 ರಾಜ್ಯಗಳಿಗೆ ₹13,603.20 ಕೋಟಿ ಮತ್ತು ಎನ್.ಡಿ.ಆರ್‌.ಎಫ್‌ ಅಡಿಯಲ್ಲಿ 15 ರಾಜ್ಯಗಳಿಗೆ ₹2,189.28 ಕೋಟಿ ಬಿಡುಗಡೆ ಮಾಡಿದೆ.

ನವದೆಹಲಿ: 2025-26ನೇ ಸಾಲಿಗೆ ಕರ್ನಾಟಕ ಮತ್ತು ಮಹಾರಾಷ್ಟ್ರ ಕ್ಕೆ ಎಸ್‌.ಡಿ.ಆರ್‌.ಎಫ್‌ ನ ಎರಡನೇ ಕಂತಾಗಿ ರೂ.1,950.80 ಕೋಟಿ ಮುಂಗಡ ಬಿಡುಗಡೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಈ ವರ್ಷದ ನೈಋತ್ಯ ಮುಂಗಾರಿನಲ್ಲಿ ಅತಿ ಹೆಚ್ಚು ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಜನರಿಗೆ ತಕ್ಷಣದ ಪರಿಹಾರ ನೆರವು ನೀಡಲು ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಒಟ್ಟು ರೂ.1,950.80 ಕೋಟಿ ಬಿಡುಗಡೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅನುಮೋದನೆ ನೀಡಿರುವುದಾಗಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

ಒಟ್ಟು ರೂ.1,950.80 ಕೋಟಿಯಲ್ಲಿ ಕರ್ನಾಟಕಕ್ಕೆ 384.40 ಕೋಟಿ ರೂ. ಮತ್ತು ಮಹಾರಾಷ್ಟ್ರಕ್ಕೆ 1,566.40 ಕೋಟಿ ರೂ. ಬಿಡುಗಡೆಗೆ ಅನುಮೋದಿಸಲಾಗಿದೆ.

ಪ್ರವಾಹ, ಭೂಕುಸಿತ ಮತ್ತು ಮೇಘಸ್ಫೋಟದಿಂದ ಹಾನಿಗೊಳಗಾದ ರಾಜ್ಯಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಹೇಳಿದೆ.

ಈ ವರ್ಷ ಕೇಂದ್ರ ಸರ್ಕಾರವು ಈಗಾಗಲೇ ಎಸ್‌.ಡಿ.ಆರ್‌.ಎಫ್‌ ಅಡಿಯಲ್ಲಿ 27 ರಾಜ್ಯಗಳಿಗೆ ₹13,603.20 ಕೋಟಿ ಮತ್ತು ಎನ್.ಡಿ.ಆರ್‌.ಎಫ್‌ ಅಡಿಯಲ್ಲಿ 15 ರಾಜ್ಯಗಳಿಗೆ ₹2,189.28 ಕೋಟಿ ಬಿಡುಗಡೆ ಮಾಡಿದೆ. ಇದಲ್ಲದೆ, ರಾಜ್ಯ ವಿಪತ್ತು ತಗ್ಗಿಸುವಿಕೆ ನಿಧಿಯಿಂದ (ಎಸ್‌.ಡಿ.ಎಂ.ಎಫ್) 21 ರಾಜ್ಯಗಳಿಗೆ ₹4,571.30 ಕೋಟಿ ಮತ್ತು ರಾಷ್ಟ್ರೀಯ ವಿಪತ್ತು ತಗ್ಗಿಸುವಿಕೆ ನಿಧಿಯಿಂದ (ಎನ್.ಡಿ.ಎಂ.ಎಫ್) 9 ರಾಜ್ಯಗಳಿಗೆ ₹372.09 ಕೋಟಿ ಬಿಡುಗಡೆ ಮಾಡಲಾಗಿದೆ.

ಕೇಂದ್ರ ಸರ್ಕಾರವು ಪ್ರವಾಹ, ಭೂಕುಸಿತ, ಮೇಘಸ್ಫೋಟದಿಂದ ಬಾಧಿತವಾದ ರಾಜ್ಯಗಳಿಗೆ ಅಗತ್ಯವಿರುವ ಎನ್.ಡಿ.ಆರ್‌.ಎಫ್ ತಂಡಗಳು, ಸೇನಾ ತಂಡಗಳು ಮತ್ತು ವಾಯುಪಡೆಯ ಬೆಂಬಲ ಸೇರಿದಂತೆ ಎಲ್ಲಾ ಲಾಜಿಸ್ಟಿಕ್ ಸಹಾಯವನ್ನು ಒದಗಿಸಿದೆ. ಈ ವರ್ಷದ ಮುಂಗಾರು ಸಮಯದಲ್ಲಿ, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗಾಗಿ 30 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಗರಿಷ್ಠ 199 ಎನ್.ಡಿ.ಆರ್‌.ಎಫ್ ತಂಡಗಳನ್ನು ನಿಯೋಜಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Women World Cup 2025: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ರನ್‌ಗಳ ವಿರೋಚಿತ ಸೋಲು; ಸೆಮಿಸ್‌ಗಾಗಿ ಕಿವೀಸ್ ಜೊತೆ ಸೆಣೆಸಾಟ!

ಮುಸ್ಲಿಂ ಯುವಕರನ್ನು ಮದುವೆಯಾದರೆ ಅಂತಹ ಮಗಳ ಕಾಲು ಮುರಿಯಿರಿ: ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್

ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಅವಹೇಳನ: ರಮೇಶ್ ಕತ್ತಿಗೆ ಸಂಕಷ್ಟ; ಅಟ್ರಾಸಿಟಿ ಪ್ರಕರಣ ದಾಖಲು!

News headlines 19-10-2025 | ಖರ್ಗೆ ತವರಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ; ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಹೊಡೆದಾಟ; DK Shivakumar- Kiran Majumdar ನಡುವೆ ನಿಲ್ಲದ ವಾಕ್ಸಮರ

ಮಳವಳ್ಳಿ: ಮೂರು KSRTC ಬಸ್​​ಗಳ ನಡುವೆ ಡಿಕ್ಕಿ; ಮೂವರು ಸಾವು, ಹಲವರಿಗೆ ಗಾಯ

SCROLL FOR NEXT