ಗಿರಿರಾಜ್ ಸಿಂಗ್  
ದೇಶ

'ನಮಕ್ ಹರಾಮ್‌ಗಳ ಮತಗಳು ಬೇಡ': ಬಿಹಾರ ರ್‍ಯಾಲಿಯಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿಕೆ!

ಬಿಹಾರದ ಅರ್ವಾಲ್ ಜಿಲ್ಲೆಯಲ್ಲಿ ಸಾರ್ವಜನಿಕ ರ್‍ಯಾಲಿಯನ್ನುದ್ದೇಶಿಸಿ ಮಾತನಾಡುವ ವೇಳೆ ಅವರು, ಒಮ್ಮೆ ನಾನು ಮೌಲ್ವಿ ಅವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಇದೆಯೇ ಎಂದು ಕೇಳಿದೆ.

ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಮುಸ್ಲಿಂ ಸಮುದಾಯದ ವಿರುದ್ಧ ಕಟುವಾದ ಹೇಳಿಕೆ ನೀಡಿ ಮತ್ತೊಮ್ಮೆ ವಿವಾದಕ್ಕೆ ಕಾರಣರಾಗಿದ್ದಾರೆ. ನಮಕ್ ಹರಾಮ್‌ಗಳ (ದ್ರೋಹಿಗಳ) ಮತಗಳು ನಮಗೆ ಅಗತ್ಯವಿಲ್ಲ ಎಂದಿದ್ದಾರೆ.

ಬಿಹಾರದ ಅರ್ವಾಲ್ ಜಿಲ್ಲೆಯಲ್ಲಿ ಸಾರ್ವಜನಿಕ ರ್‍ಯಾಲಿಯನ್ನುದ್ದೇಶಿಸಿ ಮಾತನಾಡುವ ವೇಳೆ ಅವರು, ಒಮ್ಮೆ ನಾನು ಮೌಲ್ವಿ ಅವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಇದೆಯೇ ಎಂದು ಕೇಳಿದೆ. ಅದಕ್ಕವರು ಇದೆ ಎಂದರು. ಅಂತಹ ಕಾರ್ಡ್ ಗಳನ್ನು ಹಿಂದೂ-ಮುಸ್ಲಿಂ ಆಧಾರದ ಮೇಲೆ ನಾವು ನೀಡಿದ್ದೇವೆಯೇ ಎಂದು ಕೇಳಿದಾಗ ನಕಾರಾತ್ಮಕವಾಗಿ ಉತ್ತರಿಸಿದರು.

ನಮಕ್ ಹರಾಮ್ ಗಳು

ನನಗೆ ಮತ ಹಾಕಿದ್ದೀರಾ ಎಂದು ಕೇಳಿದಾಗ, ಹೌದು ಎಂದು ಉತ್ತರಿಸಿದರು. ಆಗ ನಾನು ಅವರನ್ನು ಖುದಾ (ದೇವರ) ಮೇಲೆ ಪ್ರಮಾಣ ಮಾಡಿ ಹೇಳಿ ಎಂದಾಗ ಇಲ್ಲ ಎಂದರು. ಮುಸಲ್ಮಾನರು ಎಲ್ಲಾ ಕೇಂದ್ರ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಾರೆ ಆದರೆ ನಮಗೆ ಮತ ಹಾಕುವುದಿಲ್ಲ. ಅಂತಹ ಜನರನ್ನು 'ನಮಕ್ ಹರಾಮ್' ಎಂದು ಕರೆಯಲಾಗುತ್ತದೆ. ನಾನು ಮೌಲ್ವಿ ಸಹಾಬ್‌ಗೆ 'ನಮಕ್ ಹರಾಮ್‌ಗಳ' ಮತಗಳು ನನಗೆ ಬೇಡ ಎಂದು ಹೇಳಿದ್ದೇನೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ಎಂದಾದರೂ ನಿಂದಿಸಿದ್ದಾರೆಯೇ ಎಂದು ಮುಸ್ಲಿಂ ಧರ್ಮಗುರುವನ್ನು ಕೇಳಿದ್ದೆ ಎಂದು ಕೇಳಿದಾಗ ಧರ್ಮಗುರು ಇಲ್ಲ ಎಂದು ಉತ್ತರಿಸಿದರು.

ನಾನು ಅವರನ್ನು ಅವಮಾನಿಸಿದ್ದೇನೆಯೇ ಎಂದು ಕೇಳಿದೆ, ಅದಕ್ಕೆ ಅವರು 'ಇಲ್ಲ' ಎಂದು ಹೇಳಿದರು. ನನಗೆ ಮತ ಹಾಕದಿರಲು ನನ್ನ ತಪ್ಪೇನು ಎಂದು ಕೇಳಿದೆ. ದಯೆಯನ್ನು ಒಪ್ಪಿಕೊಳ್ಳದ ವ್ಯಕ್ತಿಯನ್ನು 'ನಮಕ್ ಹರಾಮ್' ಎಂದು ಕರೆಯಲಾಗುತ್ತದೆ ಎಂದು ಕೇಂದ್ರ ಸಚಿವರು ಹೇಳಿದರು.

ಮುಸ್ಲಿಮರು ಬಿಜೆಪಿಗೆ ಮತ ಹಾಕುವುದಿಲ್ಲ

ಬಿಹಾರದ ಒಟ್ಟಾರೆ ಅಭಿವೃದ್ಧಿಗಾಗಿ ಎನ್‌ಡಿಎ ವ್ಯಾಪಕವಾದ ಮೂಲಸೌಕರ್ಯ ಕಾರ್ಯಗಳನ್ನು ನಡೆಸುತ್ತಿದ್ದರೂ ಮುಸ್ಲಿಮರು ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಆರೋಪಿಸಿದರು. ಎನ್‌ಡಿಎ ಸರ್ಕಾರ ಬಿಹಾರದ ಒಟ್ಟಾರೆ ಅಭಿವೃದ್ಧಿಗಾಗಿ ಸಾಕಷ್ಟು ಮೂಲಸೌಕರ್ಯ ಕಾರ್ಯಗಳನ್ನು ಮಾಡಿದೆ. ಬಿಹಾರದಲ್ಲಿ ಎನ್‌ಡಿಎ ನಾಯಕರು ಮತ್ತು ಕಾರ್ಮಿಕರಿಗಾಗಿ ಮಾತ್ರವಲ್ಲದೆ ಜನಸಾಮಾನ್ಯರಿಗೂ ರಸ್ತೆಗಳನ್ನು ನಿರ್ಮಿಸಲಾಗಿದೆ. ಬಿಹಾರ ಈಗ ಬದಲಾಗಿದೆ ಎಂದು ಅವರು ಹೇಳಿದರು.

ಎನ್‌ಡಿಎ ಸರ್ಕಾರ ಸಮಾಜದ ಪ್ರತಿಯೊಂದು ವರ್ಗಕ್ಕೂ ಕೆಲಸ ಮಾಡುತ್ತದೆ, ಆದರೆ ಮುಸ್ಲಿಮರು ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಅವರು ಹೇಳಿದ್ದಾರೆ.

ಗಿರಿರಾಜ್ ಸಿಂಗ್ ಅವರ ಹೇಳಿಕೆಗಳನ್ನು ಟೀಕಿಸಿದ ಆರ್‌ಜೆಡಿ ರಾಜ್ಯ ಘಟಕದ ವಕ್ತಾರ ಮೃತ್ಯುಂಜಯ್ ತಿವಾರಿ, ಬಿಜೆಪಿ ನಾಯಕರು ಹಿಂದೂ-ಮುಸ್ಲಿಂ ಹೊರತುಪಡಿಸಿ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.

ಬಿಜೆಪಿ ನಾಯಕರು ಹಿಂದೂ-ಮುಸ್ಲಿಂ ಹೊರತುಪಡಿಸಿ ಏನನ್ನೂ ಹೇಳಲು ಸಾಧ್ಯವಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯ. ಅವರು ಹೆಚ್ಚುತ್ತಿರುವ ನಿರುದ್ಯೋಗ, ಬೆಲೆ ಏರಿಕೆ, ಉತ್ತಮ ಶಿಕ್ಷಣ ಮತ್ತು ವೈದ್ಯಕೀಯ ಸೌಲಭ್ಯಗಳ ಬಗ್ಗೆ ಮಾತನಾಡಲು ಸಾಧ್ಯವಿಲ್ಲ. ನೀವು ಅವರೊಂದಿಗೆ ಅಭಿವೃದ್ಧಿಯ ಬಗ್ಗೆ ಮಾತನಾಡಿದಾಗಲೆಲ್ಲಾ, ಅವರು ಹಿಂದೂ-ಮುಸ್ಲಿಂ ಸಮಸ್ಯೆಗಳ ಕುರಿತು ಚರ್ಚೆಗಳನ್ನು ಪ್ರಾರಂಭಿಸುತ್ತಾರೆ. ಜನರ ಗಮನವನ್ನು ಮೂಲ ಸಮಸ್ಯೆಗಳಿಂದ ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಾರೆ ಎಂದರು.

ಗಿರಿರಾಜ್ ಸಿಂಗ್ ಅವರು ಈ ಹಿಂದೆ ತಮ್ಮ ಹೇಳಿಕೆಗಳಿಗೆ ಹಲವಾರು ಸಂದರ್ಭಗಳಲ್ಲಿ ವಿವಾದವನ್ನು ಸೃಷ್ಟಿಸಿದ್ದರು. 243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

Ranji Trophy final: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಮತ್ತು ಕಾಶ್ಮೀರದ ನಾಯಕ, Video

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

SCROLL FOR NEXT