ಸಾಂದರ್ಭಿಕ ಚಿತ್ರ online desk
ದೇಶ

ದೆಹಲಿ: ಮಾಜಿ ಲಿವ್ ಇನ್ ಸಂಗಾತಿಯಿಂದ ಗರ್ಭಿಣಿ ಸಾವು; ಪತಿಯಿಂದ ದಾಳಿಕೋರನ ಹತ್ಯೆ

ಶಾಲಿನಿಯ ಪತಿ 23 ವರ್ಷದ ಆಕಾಶ್ ತನ್ನ ಪತ್ನಿಯನ್ನು ಉಳಿಸಲು ಪ್ರಯತ್ನಿಸುವಾಗ ಬಹು ಇರಿತದ ಗಾಯಗಳಿಗೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ನಿಧಿನ್ ವಲ್ಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನವದೆಹಲಿ: ದೆಹಲಿಯ ನಬಿ ಕರೀಮ್ ಪ್ರದೇಶದಲ್ಲಿ ಗರ್ಭಿಣಿಯೊಬ್ಬರನ್ನು ಆಕೆಯ ಮಾಜಿ ಲಿವ್-ಇನ್ ರಿಲೇಷನ್ ಸಂಗಾತಿ ಇರಿದು ಕೊಂದ ಘಟನೆ ನಡೆದಿದೆ, ನಂತರ ಆಕೆಯ ಪತಿ ಹತ್ಯೆಗೀಡುಮಾಡಿದವನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮೃತರನ್ನು 22 ವರ್ಷದ ಶಾಲಿನಿ ಮತ್ತು 34 ವರ್ಷದ ಆಶು ಅಲಿಯಾಸ್ ಶೈಲೇಂದ್ರ ಎಂದು ಗುರುತಿಸಲಾಗಿದೆ. ಶೈಲೇಂದ್ರ ನಬಿ ವಿರುದ್ಧ ಕರೀಮ್ ಪೊಲೀಸ್ ಠಾಣೆಯಲ್ಲಿ ಹಲವು ಕೇಸುಗಳು ದಾಖಲಾಗಿದ್ದವು.

ಶಾಲಿನಿಯ ಪತಿ 23 ವರ್ಷದ ಆಕಾಶ್ ತನ್ನ ಪತ್ನಿಯನ್ನು ಉಳಿಸಲು ಪ್ರಯತ್ನಿಸುವಾಗ ಬಹು ಇರಿತದ ಗಾಯಗಳಿಗೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ನಿಧಿನ್ ವಲ್ಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಿನ್ನೆ ರಾತ್ರಿ ಆಗಿದ್ದೇನು?

ನಿನ್ನೆ ಶನಿವಾರ ರಾತ್ರಿ 10:15 ರ ಸುಮಾರಿಗೆ ಆಕಾಶ್ ಮತ್ತು ಶಾಲಿನಿ ಕುತುಬ್ ರಸ್ತೆಯಲ್ಲಿ ತನ್ನ ತಾಯಿ ಶೀಲಾಳನ್ನು ಭೇಟಿಯಾಗಲು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಆಶು ಇದ್ದಕ್ಕಿದ್ದಂತೆ ಅಲ್ಲಿಗೆ ಬಂದು ಆಕಾಶ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಆಕಾಶ್ ಮೊದಲ ಹೊಡೆತವನ್ನು ತಪ್ಪಿಸುವಲ್ಲಿ ಯಶಸ್ವಿಯಾದರು, ಆದರೆ ಆಶು ನಂತರ ರಿಕ್ಷಾದಲ್ಲಿ ಕುಳಿತಿದ್ದ ಶಾಲಿನಿಯ ಕಡೆಗೆ ತಿರುಗಿ, ಆಕೆಗೆ ಹಲವು ಬಾರಿ ಇರಿದಿದ್ದಾನೆ.

ಆಕಾಶ್ ಅವಳನ್ನು ರಕ್ಷಿಸಲು ಧಾವಿಸಿದಾಗ ಅವನ ಮೇಲೆ ಕೂಡ ಚಾಕುವಿನಿಂದ ಇರಿದಿದ್ದಾನೆ. ಆದರೂ ಆಶುವಿನ ಕೈಯಿಂದ ಚಾಕುವನ್ನು ಕಸಿದುಕೊಂಡು ಗಲಾಟೆಯ ಸಮಯದಲ್ಲಿ ಅವನಿಗೆ ಇರಿದನು.

ಶಾಲಿನಿಯ ಸಹೋದರ ರೋಹಿತ್ ಮತ್ತು ಕೆಲವು ಸ್ಥಳೀಯ ನಿವಾಸಿಗಳು ಮೂವರನ್ನೂ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಶಾಲಿನಿ ಮತ್ತು ಆಶು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ವಿಚಾರಣೆಯ ಸಮಯದಲ್ಲಿ, ಶಾಲಿನಿ ಸಾಯುವ ಸಮಯದಲ್ಲಿ ಗರ್ಭಿಣಿಯಾಗಿದ್ದರು ಎಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುತುಬ್ ರಸ್ತೆಯ ಬಳಿಯ ಜನನಿಬಿಡ ಪ್ರದೇಶದಲ್ಲಿ ಈ ಘಟನೆ ಸಾರ್ವಜನಿಕರ ಸಮ್ಮುಖದಲ್ಲಿ ನಡೆದಿದ್ದು, ಆ ಪ್ರದೇಶದಲ್ಲಿ ಸದ್ಯ ಭೀತಿ ಮೂಡಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶಾಲಿನಿ ಮತ್ತು ಆಕಾಶ್ ಸಂಬಂಧ ಕೆಲ ಸಮಯಗಳ ಹಿಂದೆ ಹದಗೆಟ್ಟಿತ್ತು, ಆ ಸಮಯದಲ್ಲಿ ಆಕೆ ಆಶು ಜೊತೆ ಲಿವ್-ಇನ್ ಸಂಬಂಧ ಮಾಡಿಕೊಂಡರು. ನಂತರ, ಆಕಾಶ್ ಜೊತೆ ಸಂಬಂಧ ಸುಧಾರಿಸಿಕೊಂಡು ಇಬ್ಬರು ಮಕ್ಕಳೊಂದಿಗೆ ಚೆನ್ನಾಗಿ ಜೀವನ ನಡೆಸಿಕೊಂಡು ಹೋಗುತ್ತಿದ್ದರು ಎಂದು ಆಕೆಯ ತಾಯಿ ಶೀಲಾ ಹೇಳಿದ್ದಾರೆ.

ಇದು ಆಶುಗೆ ಅಸಮಾಧಾನ ತರಿಸಿತ್ತು, ಶಾಲಿನಿ ಗರ್ಭವತಿಯಾಗಿದ್ದು ಅದರ ತಂದೆ ನಾನೇ ಎಂದು ಆಶು ಹೇಳಿಕೊಂಡಿದ್ದನಂತೆ. ಆಶುವಿನ ಮೇಲೆ ಹಲವು ಕ್ರಿಮಿನಲ್ ಕೇಸುಗಳು ದಾಖಲಾಗಿದ್ದವು. ಆಕಾಶ್ ಕೂಡ ಮೂರು ಹಿಂದಿನ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದರು.

ಶೀಲಾ ಅವರ ದೂರಿನ ಆಧಾರದ ಮೇಲೆ, ನಬಿ ಕರೀಮ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 103-1 (ಕೊಲೆ) ಮತ್ತು 109-1 (ಕೊಲೆಯ ಪ್ರಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ನನಗೆ ಬೇಕಿರುವುದು ಅದೊಂದೆ...": ರಷ್ಯಾ-ಯುಕ್ರೇನ್ ಯುದ್ಧ ಕೊನೆಗೊಳಿಸಲು ಟ್ರಂಪ್ ಗೆ ಪುತಿನ್ ಷರತ್ತು; ಈಡೇರುತ್ತಾ 11 ವರ್ಷಗಳ ಗುರಿ?

Ro-Ko ಕಟ್ಟಿಹಾಕಿದ ಆಸೀಸ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ ಸೋತ Team India

ದೊಡ್ಡಬಳ್ಳಾಪುರ: "ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ"; ಕೃತಿ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ!

ದೊಡ್ಡವರ ಮನೆಗೆ ಹೋಗಬಾರದಿತ್ತು: ಶಾರುಖ್ ಖಾನ್ ಮನೆ ಪಾರ್ಟಿಯಲ್ಲಿ ಆದ ಕಹಿ ಅನುಭವ ಬಿಚ್ಚಿಟ್ಟ ನಟ ಗುಲ್ಶನ್ ದೇವಯ್ಯ!

ಬೆಳಗಾವಿ 'ಡಿಸಿಸಿ ಬ್ಯಾಂಕ್' ಚುನಾವಣೆ: ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಮಾರಾಮಾರಿ!

SCROLL FOR NEXT