ಸಾಂದರ್ಭಿಕ ಚಿತ್ರ 
ದೇಶ

'Sameer' dies: ತಿರುಪತಿ ಮೃಗಾಲಯದಲ್ಲಿ ಬಿಳಿ ಹುಲಿ ಸಾವು!

'ಸಮೀರ್' ಎಂದು ಕರೆಯಲಾಗುತ್ತಿದ್ದ ಹುಲಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ತಿರುಪತಿ: ಆಂಧ್ರ ಪ್ರದೇಶದ ಪ್ರವಾಸಿಗರ ಆಕರ್ಷಣೀಯ ಸ್ಥಳಗಳಲ್ಲಿ ಒಂದಾದ ಶ್ರೀ ವೆಂಕಟೇಶ್ವರ ಝೂಲಾಜಿಕಲ್ ಪಾರ್ಕ್‌ನಲ್ಲಿ 19 ವರ್ಷದ ಬಿಳಿ ಹುಲಿಯೊಂದು ಭಾನುವಾರ ಸಾವನ್ನಪ್ಪಿದೆ.

'ಸಮೀರ್' ಎಂದು ಕರೆಯಲಾಗುತ್ತಿದ್ದ ಹುಲಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. 2011 ರಲ್ಲಿ ಈ ಹುಲಿಗೆ ಐದು ವರ್ಷ ಆಗಿದ್ದಾಗ ಹೈದರಾಬಾದ್‌ನ ನೆಹರು ಝೂಲಾಜಿಕಲ್ ಪಾರ್ಕ್‌ನಿಂದ ತಿರುಪತಿ ಮೃಗಾಲಯಕ್ಕೆ ಸ್ಥಳಾಂತರಿಸಲಾಗಿತ್ತು.

ಸುಮಾರು 19 ವರ್ಷದ ಹಿರಿಯ ಬಿಳಿ ಹುಲಿ ಸಮೀರ್‌ ಸಾವನ್ನಪ್ಪಿರುವ ಕುರಿತು ಮೃಗಾಲಯದ ಆಡಳಿತ ಮಂಡಳಿ ತೀವ್ರ ವಿಷಾದ ವ್ಯಕ್ತಪಡಿಸಿದೆ. ವಯಸ್ಸಿಗೆ ಸಂಬಂಧಿಸಿದ ತೊಂದರೆಗಳಿಗಾಗಿ ಸಮೀರ್ ತೀವ್ರ ನಿಗಾದಲ್ಲಿತ್ತು. ಕಳೆದ ಮೂರು ತಿಂಗಳಿನಿಂದ ಅದರ ಆರೋಗ್ಯ ಕ್ಷೀಣಿಸಿತು. ಇದು ಸಂಪೂರ್ಣ ನಿತ್ರಾಣಕ್ಕೆ ಕಾರಣವಾಯಿತು ಎಂದು ಮೃಗಾಲಯದ ಮೇಲ್ವಿಚಾರಕ ಸೆಲ್ವಂ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೃಗಾಲಯದ ಪಶುವೈದ್ಯಕೀಯ ಮತ್ತು ಪಶುಪಾಲನಾ ಸಿಬ್ಬಂದಿಯಿಂದ ದೈನಂದಿನ ಮೇಲ್ವಿಚಾರಣೆ ಮತ್ತು ಕಾಳಜಿಯ ಹೊರತಾಗಿಯೂ, ಸಮೀರ್ ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ. ಇಂದು ಬೆಳಿಗ್ಗೆ ಮೃತಪಟ್ಟಿದೆ.

ತಿರುಪತಿಯ ಎಸ್‌ವಿ ಪಶುವೈದ್ಯಕೀಯ ವಿಶ್ವವಿದ್ಯಾನಿಲಯದ ತಜ್ಞ ರೋಗಶಾಸ್ತ್ರಜ್ಞರು ನಡೆಸಿದ ಮರಣೋತ್ತರ ಪರೀಕ್ಷೆಯಲ್ಲಿ ವಯಸ್ಸಿಗೆ ಸಂಬಂಧಿಸಿದ ಕಾಯಿಲೆಯೇ ಸಾವಿಗೆ ಕಾರಣ ಎಂಬುದು ದೃಢಪಟ್ಟಿದೆ ಎಂದು ಕ್ಯುರೇಟರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Women World Cup 2025: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ರನ್‌ಗಳ ವಿರೋಚಿತ ಸೋಲು; ಸೆಮಿಸ್‌ಗಾಗಿ ಕಿವೀಸ್ ಜೊತೆ ಸೆಣೆಸಾಟ!

ಮುಸ್ಲಿಂ ಯುವಕರನ್ನು ಮದುವೆಯಾದರೆ ಅಂತಹ ಮಗಳ ಕಾಲು ಮುರಿಯಿರಿ: ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್

ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಅವಹೇಳನ: ರಮೇಶ್ ಕತ್ತಿಗೆ ಸಂಕಷ್ಟ; ಅಟ್ರಾಸಿಟಿ ಪ್ರಕರಣ ದಾಖಲು!

Flood Relief: ಕರ್ನಾಟಕ, ಮಹಾರಾಷ್ಟ್ರಕ್ಕೆ 1,950 ಕೋಟಿ ರೂ ಬಿಡುಗಡೆಗೆ ಕೇಂದ್ರ ಸರ್ಕಾರ ಅನುಮೋದನೆ!

News headlines 19-10-2025 | ಖರ್ಗೆ ತವರಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ; ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಹೊಡೆದಾಟ; DK Shivakumar- Kiran Majumdar ನಡುವೆ ನಿಲ್ಲದ ವಾಕ್ಸಮರ

SCROLL FOR NEXT