ಜಲಪಾತಕ್ಕೆ ಬೀಳುತ್ತಿರುವ ಯುವಕ 
ದೇಶ

ರೀಲ್ಸ್​ ಹುಚ್ಚಿಗೆ ಪ್ರಾಣ ಬಿಟ್ಟ ಯುವಕ: ವಿಡಿಯೋ ವೈರಲ್​

ಚಿತ್ತೂರು ಜಿಲ್ಲೆಯ ಪಲಮನೇರು ಗ್ರಾಮೀಣ ಮಂಡಲದಲ್ಲಿರುವ ರೇವು ಜಲಪಾತದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಚಿತ್ತೂರು: ಇಂದು ರೀಲ್ಸ್‌ ಎನ್ನುವ ಹುಚ್ಚು ಬಹುತೇಕರನ್ನು ಆವರಿಸಿಕೊಂಡು ಬಿಟ್ಟಿದೆ. ದಿಢೀರ್ ಎಂದು ಫೇಮಸ್‌ ಆಗಲು ಕಾಣುವ ಮಾರ್ಗ ಇದೊಂದೇ ಆಗಿ ಬಿಟ್ಟಿದೆ. ಇದರಿಂದ ರೀಲ್ಸ್‌ ಮಾಡುವವರ ಸಂಖ್ಯೆ ಹೆಚ್ಚುತ್ತಿದ್ದಂತೆಯೇ, ಕಾಂಪಿಟೇಷನ್‌ ಕೂಡ ಜಾಸ್ತಿಯಾಗುತ್ತಿದೆ.

ಅದಕ್ಕಾಗಿಯೇ ಕೆಲವರು ವಿಭಿನ್ನ ರೀತಿಯಲ್ಲಿ ರೀಲ್ಸ್‌ ಮಾಡುವ ತವಕದಲ್ಲಿ ಇರುತ್ತಾರೆ. ಇದೇ ಕಾರಣಕ್ಕೆ ಎಷ್ಟೋ ಮಂದಿ ಅಪಾಯಕಾರಿ ಎನ್ನುವ ರೀಲ್ಸ್‌ ಮಾಡಿ ಜೀವ ಕಳೆದುಕೊಂಡವರಿದ್ದಾರೆ, ಕೈ-ಕಾಲು ಮುರಿದುಕೊಂಡು ನರಳುತ್ತಿರುವವರೂ ಇದ್ದಾರೆ. ಇಂಥವರ ಬಗ್ಗೆ ಪ್ರತಿನಿತ್ಯ ಸುದ್ದಿಯಾಗುತ್ತಲೇ ಇರುತ್ತದೆ.

ರೈಲು ಹಳಿಗಳ ಮೇಲೆ ನಿಲ್ಲುವುದು, ಬೆಟ್ಟದ ತುದಿಯಲ್ಲಿ ಹೋಗುವುದು... ಹೀಗೆ ರೀಲ್ಸ್ ಹುಚ್ಚಿಗೆ ಬಲಿಯಾಗಿ ಪ್ರಾಣ ಕಳೆದುಕೊಳ್ಳುವವರು ಒಂದೆಡೆಯಾದರೆ, ಚಿತ್ರ-ವಿಚಿತ್ರವಾಗಿ ರೀಲ್ಸ್‌ ಮಾಡಲು ಹೋಗಿ ಥಳಿತಕ್ಕೆ ಒಳಗಾಗುವವರೂ ಇದ್ದಾರೆ.

ಇದೀಗ ಅಂಥದ್ದೇ ಒಂದು ಭಯಾನಕ ವಿಡಿಯೋ ವೈರಲ್​ ಆಗಿದೆ. ಯುವಕನೊಬ್ಬ ಜಲಪಾತಕ್ಕೆ ಬೀಳುವ ವಿಡಿಯೋ ಇದಾಗಿದೆ. ಜಲಪಾತಕ್ಕೆ ಬಿದ್ದ ಯುವಕ ಸಾವನ್ನಪ್ಪಿದ್ದಾರೆ. ಯುವಕ ಜಲಪಾತಕ್ಕೆ ಬೀಳುತ್ತಿದ್ದಂತೆಯೇ ಮುಳುಗಿ ಸಾವನ್ನಪ್ಪಿದ್ದಾರೆ.

ಚಿತ್ತೂರು ಜಿಲ್ಲೆಯ ಪಲಮನೇರು ಗ್ರಾಮೀಣ ಮಂಡಲದಲ್ಲಿರುವ ರೇವು ಜಲಪಾತದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಮೃತ ಯುವಕನನ್ನು ಯೂನಿಸ್ (23) ಎಂದು ಗುರ್ತಿಸಲಾಗಿದೆ. ವೀಡಿಯೊ ಚಿತ್ರೀಕರಣ ಮಾಡುವಾಗ ಯುವಕ ತನ್ನ ಸ್ನೇಹಿತರ ಮುಂದೆಯೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಗುರುವಾರ ಸಂಜೆ ಯುವಕ ನಾಪತ್ತೆಯಾಗಿದ್ದು, ಮೂರು ದಿನಗಳು ಕಳೆದರೂ ಇನ್ನೂ ಮೃತದೇಹ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ನನಗೆ ಬೇಕಿರುವುದು ಅದೊಂದೆ...": ರಷ್ಯಾ-ಯುಕ್ರೇನ್ ಯುದ್ಧ ಕೊನೆಗೊಳಿಸಲು ಟ್ರಂಪ್ ಗೆ ಪುತಿನ್ ಷರತ್ತು; ಈಡೇರುತ್ತಾ 11 ವರ್ಷಗಳ ಗುರಿ?

ದೊಡ್ಡವರ ಮನೆಗೆ ಹೋಗಬಾರದಿತ್ತು: ಶಾರುಖ್ ಖಾನ್ ಮನೆ ಪಾರ್ಟಿಯಲ್ಲಿ ಆದ ಕಹಿ ಅನುಭವ ಬಿಚ್ಚಿಟ್ಟ ನಟ ಗುಲ್ಶನ್ ದೇವಯ್ಯ!

ಬೆಳಗಾವಿ 'ಡಿಸಿಸಿ ಬ್ಯಾಂಕ್' ಚುನಾವಣೆ: ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಮಾರಾಮಾರಿ!

Belagavi: ದನ ಕಾಯುತ್ತಿದ್ದವ ಈಗ 260 ದೇಶಿಯ ಭತ್ತದ ತಳಿಗಳ ಸಂರಕ್ಷಕ! ಮೌನ ಕ್ರಾಂತಿಯ ರೈತ ಶಂಕರ್ ಲಂಗಟಿ ಯಶೋಗಾಥೆ!

ದೊಡ್ಡಬಳ್ಳಾಪುರ: "ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ"; ಕೃತಿ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ!

SCROLL FOR NEXT