ರಾಷ್ಟ್ರಪತಿ ದ್ರೌಪದಿ ಮುರ್ಮು  
ದೇಶ

ಅಕ್ಟೋಬರ್ 22 ರಂದು ಶಬರಿಮಲೆ ದೇವಸ್ಥಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ರಾಷ್ಟ್ರಪತಿಗಳು ಅಕ್ಟೋಬರ್ 21 ರ ಸಂಜೆ ರಾಜ್ಯ ರಾಜಧಾನಿ ತಿರುವನಂತಪುರಂ ತಲುಪಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆಯಿಂದ ನಾಲ್ಕು ದಿನಗಳ ಕಾಲ ಕೇರಳ ಪ್ರವಾಸ ಕೈಗೊಳ್ಳುಲಿದ್ದು, ಈ ವೇಳೆ ಅವರು ಶಬರಿಮಲೆ ದೇವಸ್ಥಾನಕ್ಕೂ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಸೋಮವಾರ ತಿಳಿಸಿದೆ.

ರಾಷ್ಟ್ರಪತಿಗಳು ಅಕ್ಟೋಬರ್ 21 ರ ಸಂಜೆ ರಾಜ್ಯ ರಾಜಧಾನಿ ತಿರುವನಂತಪುರಂ ತಲುಪಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.

"ಅಕ್ಟೋಬರ್ 22 ರಂದು ರಾಷ್ಟ್ರಪತಿಗಳು ಶಬರಿಮಲೆ ದೇವಸ್ಥಾನದಲ್ಲಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಆರತಿ ಮಾಡಲಿದ್ದಾರೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗುರುವಾರ ತಿರುವನಂತಪುರದ ರಾಜಭವನದಲ್ಲಿ ಮಾಜಿ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರ ಪ್ರತಿಮೆಯನ್ನು ದ್ರೌಪದಿ ಮುರ್ಮು ಅವರು ಅನಾವರಣಗೊಳಿಸಲಿದ್ದಾರೆ.

ನಂತರ, ವರ್ಕಲಾದ ಶಿವಗಿರಿ ಮಠದಲ್ಲಿ ನಾರಾಯಣ ಗುರುಗಳ ಮಹಾಸಮಾಧಿ ಶತಮಾನೋತ್ಸವ ಉದ್ಘಾಟಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

ಮುರ್ಮು ಪಲೈನ ಸೇಂಟ್ ಥಾಮಸ್ ಕಾಲೇಜಿನ ಪ್ಲಾಟಿನಂ ಜುಬಿಲಿ ಆಚರಣೆಯ ಸಮಾರೋಪ ಸಮಾರಂಭದಲ್ಲಿಯೂ ಭಾಗವಹಿಸಲಿದ್ದಾರೆ.

"ಅಕ್ಟೋಬರ್ 24 ರಂದು ರಾಷ್ಟ್ರಪತಿಗಳು ಎರ್ನಾಕುಲಂನ ಸೇಂಟ್ ತೆರೇಸಾ ಕಾಲೇಜಿನ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT