ರಾಷ್ಟ್ರಪತಿ ದ್ರೌಪದಿ ಮುರ್ಮು  
ದೇಶ

ಅಕ್ಟೋಬರ್ 22 ರಂದು ಶಬರಿಮಲೆ ದೇವಸ್ಥಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ರಾಷ್ಟ್ರಪತಿಗಳು ಅಕ್ಟೋಬರ್ 21 ರ ಸಂಜೆ ರಾಜ್ಯ ರಾಜಧಾನಿ ತಿರುವನಂತಪುರಂ ತಲುಪಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆಯಿಂದ ನಾಲ್ಕು ದಿನಗಳ ಕಾಲ ಕೇರಳ ಪ್ರವಾಸ ಕೈಗೊಳ್ಳುಲಿದ್ದು, ಈ ವೇಳೆ ಅವರು ಶಬರಿಮಲೆ ದೇವಸ್ಥಾನಕ್ಕೂ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಸೋಮವಾರ ತಿಳಿಸಿದೆ.

ರಾಷ್ಟ್ರಪತಿಗಳು ಅಕ್ಟೋಬರ್ 21 ರ ಸಂಜೆ ರಾಜ್ಯ ರಾಜಧಾನಿ ತಿರುವನಂತಪುರಂ ತಲುಪಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.

"ಅಕ್ಟೋಬರ್ 22 ರಂದು ರಾಷ್ಟ್ರಪತಿಗಳು ಶಬರಿಮಲೆ ದೇವಸ್ಥಾನದಲ್ಲಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಆರತಿ ಮಾಡಲಿದ್ದಾರೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗುರುವಾರ ತಿರುವನಂತಪುರದ ರಾಜಭವನದಲ್ಲಿ ಮಾಜಿ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರ ಪ್ರತಿಮೆಯನ್ನು ದ್ರೌಪದಿ ಮುರ್ಮು ಅವರು ಅನಾವರಣಗೊಳಿಸಲಿದ್ದಾರೆ.

ನಂತರ, ವರ್ಕಲಾದ ಶಿವಗಿರಿ ಮಠದಲ್ಲಿ ನಾರಾಯಣ ಗುರುಗಳ ಮಹಾಸಮಾಧಿ ಶತಮಾನೋತ್ಸವ ಉದ್ಘಾಟಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

ಮುರ್ಮು ಪಲೈನ ಸೇಂಟ್ ಥಾಮಸ್ ಕಾಲೇಜಿನ ಪ್ಲಾಟಿನಂ ಜುಬಿಲಿ ಆಚರಣೆಯ ಸಮಾರೋಪ ಸಮಾರಂಭದಲ್ಲಿಯೂ ಭಾಗವಹಿಸಲಿದ್ದಾರೆ.

"ಅಕ್ಟೋಬರ್ 24 ರಂದು ರಾಷ್ಟ್ರಪತಿಗಳು ಎರ್ನಾಕುಲಂನ ಸೇಂಟ್ ತೆರೇಸಾ ಕಾಲೇಜಿನ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!