ರಿಯಾಜ್  
ದೇಶ

ತೆಲಂಗಾಣ: ಕಾನ್‌ಸ್ಟೆಬಲ್‌ ಹತ್ಯೆ ಮಾಡಿದ್ದ ರೌಡಿ ಶೀಟರ್ ಪೊಲೀಸ್ ಎನ್‌ಕೌಂಟರ್‌ಗೆ ಬಲಿ

ಪೊಲೀಸ್ ಕಾನ್‌ಸ್ಟೆಬಲ್‌ನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಶೀಟರ್ ರಿಯಾಜ್ ಭಾನುವಾರ ಮತ್ತೊಬ್ಬ ವ್ಯಕ್ತಿಗೆ ಚಾಕುವಿನಿಂದ ಇರಿಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದನು.

ನಿಜಾಮಾಬಾದ್: ನಿಜಾಮಾಬಾದ್‌ನ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ(ಜಿಜಿಹೆಚ್) ಸೋಮವಾರ ಬೆಳಗ್ಗೆ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ರಿಯಾಜ್ ಎಂಬ ರೌಡಿ ಶೀಟರ್ ಸಾವನ್ನಪ್ಪಿದ್ದಾನೆ.

ಪೊಲೀಸ್ ಕಾನ್‌ಸ್ಟೆಬಲ್‌ನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಶೀಟರ್ ರಿಯಾಜ್ ಭಾನುವಾರ ಮತ್ತೊಬ್ಬ ವ್ಯಕ್ತಿಗೆ ಚಾಕುವಿನಿಂದ ಇರಿಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದನು.

ಘರ್ಷಣೆಯಲ್ಲಿ ಗಾಯಗೊಂಡಿದ್ದ ರಿಯಾಜ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ ರಿಯಾಜ್, ಕಾನ್‌ಸ್ಟೆಬಲ್‌ನ ಬಂದೂಕನ್ನು ಕಸಿದುಕೊಳ್ಳಲು ಪ್ರಯತ್ನಿಸಿದಾಗ, ಆಸ್ಪತ್ರೆ ಸಿಬ್ಬಂದಿ ಮತ್ತು ರೋಗಿಗಳನ್ನು ರಕ್ಷಿಸಲು ಪೊಲೀಸರು ಗುಂಡು ಹಾರಿಸಿದರು, ಈ ಸಂದರ್ಭದಲ್ಲಿ ರಿಯಾಜ್ ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಈಗಾಗಲೇ ಕಾನ್‌ಸ್ಟೆಬಲ್‌ನನ್ನು ಕೊಂದು ಇತರರನ್ನು ಗಾಯಗೊಳಿಸಿದ್ದ ಆರೋಪಿ, ಪೊಲೀಸರ ಬಂದೂಕನ್ನು ಕಸಿದುಕೊಳ್ಳಲು ಯತ್ನಿಸಿದ್ದರಿಂದ ಆತನ ಮೇಲೆ ಗುಂಡು ಹಾರಿಸಲಾತಿಯಿತು. ಇಲ್ಲದಿದ್ದರೆ ಆಸ್ಪತ್ರೆಯೊಳಗೆ ರಕ್ತಪಾತವಾಗುತ್ತಿತ್ತು ಎಂದು ಹೈದರಾಬಾದ್‌ನಲ್ಲಿ, ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಶಿವಧರ್ ರೆಡ್ಡಿ ಅವರು ಹೇಳಿದ್ದಾರೆ.

ಶುಕ್ರವಾರ ಪೊಲೀಸ್ ಕಾನ್‌ಸ್ಟೆಬಲ್ ಇ. ಪ್ರಮೋದ್ ಅವರನ್ನು ಇರಿದು ಕೊಂದ ರಿಯಾಜ್, ನಂತರ ಮತ್ತೊಬ್ಬ ಅಧಿಕಾರಿ ಎಸ್‌ಐ ವಿಠಲ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ.

ಪೊಲೀಸ್ ದಾಖಲೆಗಳ ಪ್ರಕಾರ, ರಿಯಾಜ್ ನಿಜಾಮಾಬಾದ್ ಜಿಲ್ಲೆಯ ಏಳು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಸುಮಾರು 37 ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಇತ್ತೀಚಿನ ತಿಂಗಳುಗಳಲ್ಲಿ ತನ್ನ ಅಪರಾಧ ಕೃತ್ಯಗಳನ್ನು ಹೆಚ್ಚಿಸುತ್ತಿದ್ದ ರಿಯಾಜ್ ಸಾವು ಇತರ ರೌಡಿ ಶೀಟರ್‌ಗಳಿಗೆ ಒಂದು ಗಂಭೀರ ಎಚ್ಚರಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಂದೇ ಸಾಲು, ಎರಡೇ ಮಾತು: ಭಾಷಣ ಅರ್ಧಕ್ಕೇ ಮೊಟಕುಗೊಳಿಸಿ ಸದನ ಬಿಟ್ಟು ನಿರ್ಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್-Video

ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಟ್ರಂಪ್ ದಿಢೀರ್ ಯೂ-ಟರ್ನ್: ಯುರೋಪಿನ 8 ರಾಷ್ಟ್ರಗಳ ಮೇಲೆ ಶೇ.10ರಷ್ಟು ಸುಂಕ ವಿಧಿಸದಿರಲು ನಿರ್ಧಾರ..!

ಪ್ರಧಾನಿ ಮೋದಿ 'ಅದ್ಭುತ ನಾಯಕ, ನನ್ನ ಉತ್ತಮ ಸ್ನೇಹಿತ, ಭಾರತದೊಂದಿಗೆ ಸದ್ಯದಲ್ಲೇ ಸುಗಮ ಒಪ್ಪಂದ': Donald Trump

'ಸರಸ್ವತಿ ನಮಸ್ತುಭ್ಯಂ ವರದೇ ಕಾಮರೂಪಿಣಿ, ವಿದ್ಯಾರಂಭಂ ಕರಿಷ್ಯಾಮಿ...': ವಸಂತ ಪಂಚಮಿ -ಶಾರದಾ ದೇವಿ ಜನ್ಮ ದಿನ; ಅಕ್ಷರಾಭ್ಯಾಸಕ್ಕೆ ಶುಭದಿನ

ಹೊಂದಾಣಿಕೆ ರಾಜಕೀಯ, ಕಾರ್ಯಕರ್ತರ ಕಡೆಗಣನೆ: ನಾಯಕರ ಭಿನ್ನಮತದಿಂದ ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು; ಸಂದರ್ಶನದಲ್ಲಿ ರಮೇಶ್ ಕತ್ತಿ

SCROLL FOR NEXT