ಅಸಾದುದ್ದೀನ್ ಓವೈಸಿ  
ದೇಶ

Hyderabad: ಜುಬಿಲಿ ಹಿಲ್ಸ್ ಉಪ ಚುನಾವಣೆ; ಕಾಂಗ್ರೆಸ್ ಗೆ AIMIM ಬೆಂಬಲ!

ಫಲಿತಾಂಶವು ಹಾಲಿ ಸರ್ಕಾರವನ್ನು ಬೀಳಿಸಲು ಅಥವಾ ಹೊಸ ಸರ್ಕಾರ ತರಲು ಸಾಧ್ಯವಿಲ್ಲ. ನವೀನ್ ಯಾದವರ ನೇತೃತ್ವದಲ್ಲಿ ಅಭಿವೃದ್ಧಿ ಸಾಧ್ಯ ಇರುವುದರಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ಪಕ್ಷ ನಿರ್ಧಾರ.

ಹೈದರಾಬಾದ್: ನವೆಂಬರ್ 11 ರಂದು ನಡೆಯಲಿರುವ ಹೈದರಾಬಾದಿನ ಜುಬಿಲಿ ಹಿಲ್ಸ್ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನವೀನ್ ಯಾದವ್ ಅವರನ್ನು ಪಕ್ಷ ಬೆಂಬಲಿಸಲಿದೆ ಎಂದು AIMIM ಅಧ್ಯಕ್ಷ ಅಸಾದುದ್ದೀನ್ ಓವೈಸಿ ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಫಲಿತಾಂಶವು ಹಾಲಿ ಸರ್ಕಾರವನ್ನು ಬೀಳಿಸಲು ಅಥವಾ ಹೊಸ ಸರ್ಕಾರ ತರಲು ಸಾಧ್ಯವಿಲ್ಲ. ನವೀನ್ ಯಾದವರ ನೇತೃತ್ವದಲ್ಲಿ ಅಭಿವೃದ್ಧಿ ಸಾಧ್ಯ ಇರುವುದರಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ಪಕ್ಷ ನಿರ್ಧರಿಸಿರುವುದಾಗಿ ತಿಳಿಸಿದರು.

ಚುನಾವಣೆ ಫಲಿತಾಂಶದಿಂದ ಸರ್ಕಾರ ಬದಲಾಗುವುದಿಲ್ಲ ಎಂಬುದು ನಮ್ಮ ಜುಬಿಲಿ ಹಿಲ್ಸ್ ಜನರಲ್ಲಿ ನಮ್ಮ ಮನವಿಯಾಗಿದೆ. ಈಗ ಜುಬಿಲಿ ಹಿಲ್ಸ್‌ನಲ್ಲಿ ಅಭಿವೃದ್ಧಿ ಮಾಡಬಲ್ಲ ಯುವ ನವೀನ್ ಯಾದವ್‌ಗೆ ಮತ ನೀಡಿ ಎಂದು ಕಳೆದ ಹತ್ತು ವರ್ಷಗಳಿಂದ ಬಿಆರ್‌ಎಸ್ ಬೆಂಬಲಿಸಿದ ಸುಮಾರು ನಾಲ್ಕು ಲಕ್ಷ ಮತದಾರರಲ್ಲಿ ನಾವು ಮನವಿ ಮಾಡುತ್ತೇವೆ ಎಂದರು.

ಕಳೆದ ಹತ್ತು ವರ್ಷಗಳಿಂದ ಬಿಆರ್‌ಎಸ್ ಪಕ್ಷ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರೂ ಯಾವುದೇ ಅಭಿವೃದ್ಧಿ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ ಓವೈಸಿ, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಎಐಎಂಐಎಂ ವಿಭಿನ್ನ ತಂತ್ರವನ್ನು ಅನುಸರಿಸಬಹುದು ಎಂಬ ಸುಳಿವು ನೀಡಿದರು.

ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನವೆಂಬರ್ 11 ರಂದು ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ. ಈ ವರ್ಷದ ಜೂನ್‌ನಲ್ಲಿ ಬಿಆರ್‌ಎಸ್ ಶಾಸಕ ಮಾಗಂಟಿ ಗೋಪಿನಾಥ್ ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಉಪಚುನಾವಣೆ ಅನಿವಾರ್ಯವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಶ್ವೇತಭವನದಲ್ಲಿ ಅನಿವಾಸಿ ಭಾರತೀಯರೊಂದಿಗೆ ದೀಪಾವಳಿ ಆಚರಣೆ: ಪ್ರಧಾನಿ ಮೋದಿ ‘ಮಹಾನ್ ವ್ಯಕ್ತಿ, ಉತ್ತಮ ಸ್ನೇಹಿತ’ ಎಂದು ಕೊಂಡಾಡಿದ ಡೊನಾಲ್ಡ್ ಟ್ರಂಪ್

Karnataka Weather-ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ವರ್ಷಧಾರೆ, ಅ.29ರವರೆಗೆ ಮಳೆ ಸೂಚನೆ, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹಾಸನಾಂಬೆ ದರ್ಶನ ಇಂದು ಕೊನೆ: 8 ಕಿ.ಮೀ ವರೆಗೆ ಧರ್ಮ ದರ್ಶನ ಸಾಲು

ಮರಳು ಮಾಫಿಯಾ: ಸಿಎಂಗೆ ರಾಯರೆಡ್ಡಿ ಪತ್ರ ಬೆನ್ನಲ್ಲೇ ಕೌಂಟರ್ ಕೊಟ್ಟ ಅಧಿಕಾರಿಗಳು, ಪತ್ರ ಸಮರ ಆರಂಭ

ಅನುದಾನ ವಿಚಾರದಲ್ಲಿ ತಾರತಮ್ಯವಿಲ್ಲ, ಮೋದಿ "ದೀಪಾವಳಿ ಗಿಫ್ಟ್" ಜಾಹಿರಾತಿನಿಂದ ರಾಜ್ಯಕ್ಕೆ 15 ಸಾವಿರ ಕೋಟಿ ರೂ. ನಷ್ಟ; ಸಿಎಂ ಸಿದ್ದರಾಮಯ್ಯ

SCROLL FOR NEXT