ಸ್ಥಳದಿಂದ ದೃಶ್ಯ 
ದೇಶ

ದೆಹಲಿ ಎನ್ ಕೌಂಟರ್: 'ಸಿಗ್ಮಾ ಗ್ಯಾಂಗ್' ನ ನಾಲ್ವರು ಮೋಸ್ಟ್ ವಾಂಟೆಡ್ ದರೋಡೆಕೋರರ ಹತ್ಯೆ

ದೆಹಲಿ ಮತ್ತು ಬಿಹಾರ ಪೊಲೀಸರ ತಂಡಗಳು ಮತ್ತು ಗ್ಯಾಂಗ್​ಸ್ಟರ್​ಗಳ ನಡುವೆ ವಾಯುವ್ಯ ದೆಹಲಿಯಲ್ಲಿ ಬೆಳಗಿನ ಜಾವ 2.20 ಕ್ಕೆ ಗುಂಡಿನ ಚಕಮಕಿ ನಡೆಯಿತು.

ನವದೆಹಲಿ: ದೆಹಲಿಯ ರೋಹಿಣಿಯಲ್ಲಿ ಬೆಳಗಿನ ಜಾವ ಪೊಲೀಸ್ ಎನ್​​ಕೌಂಟರ್ ನಲ್ಲಿ ಸಿಗ್ಮಾ ಗ್ಯಾಂಗ್​​ನ ನಾಲ್ವರು ಮೋಸ್ಟ್​ ವಾಂಟೆಡ್ ಗ್ಯಾಂಗ್​ಸ್ಟರ್​ಗಳನ್ನು ಹತ್ಯೆ ಮಾಡಲಾಗಿದೆ.

ದೆಹಲಿ ಮತ್ತು ಬಿಹಾರ ಪೊಲೀಸರ ತಂಡಗಳು ಮತ್ತು ಗ್ಯಾಂಗ್​ಸ್ಟರ್​ಗಳ ನಡುವೆ ವಾಯುವ್ಯ ದೆಹಲಿಯಲ್ಲಿ ಬೆಳಗಿನ ಜಾವ 2.20 ಕ್ಕೆ ಗುಂಡಿನ ಚಕಮಕಿ ನಡೆಯಿತು.

ಪೊಲೀಸರು ಗ್ಯಾಂಗ್ ಸದಸ್ಯರನ್ನು ತಡೆಯಲು ಪ್ರಯತ್ನಿಸಿದಾಗ ಎನ್‌ಕೌಂಟರ್ ನಡೆಯಿತು. ಗ್ಯಾಂಗ್​ಸ್ಟರ್​ಗಳು ಪೊಲೀಸರ ಮೇಲೆ ಗುಂಡು ಹಾರಿಸಿದಾಗ ಅವರು ಕೂಡ ಪ್ರತೀಕಾರದ ದಾಳಿ ನಡೆಸಿದರು. ನಾಲ್ವರು ಆರೋಪಿಗಳಿಗೂ ಗುಂಡೇಟಿನ ಗಾಯಗಳಾಗಿದ್ದು, ಅವರನ್ನು ರೋಹಿಣಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅಲ್ಲಿ ಎಲ್ಲಾ ನಾಲ್ವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಗ್ಯಾಂಗ್​ಸ್ಟರ್​ ರಂಜನ್ ಪಾಠಕ್ (25 ವರ್ಷ), ಬಿಮ್ಲೇಶ್ ಮಹ್ತೊ (25 ವರ್ಷ), ಮನೀಶ್ ಪಾಠಕ್ (33 ವರ್ಷ) ಮತ್ತು ಅಮನ್ ಠಾಕೂರ್ (21 ವರ್ಷ) ಎಂದು ಗುರುತಿಸಲಾಗಿದೆ. ರಂಜನ್ ಪಾಠಕ್ ಅವರ ನಾಯಕನಾಗಿದ್ದ. ಸಿಗ್ಮಾ ಗ್ಯಾಂಗ್ ಬಿಹಾರದಾದ್ಯಂತ ಸುಲಿಗೆ ಮತ್ತು ಗುತ್ತಿಗೆ ಹತ್ಯೆಗಳಲ್ಲಿ ಭಾಗಿಯಾಗಿಯಾಗಿದ್ದ.

ಈ ನಾಲ್ವರು ವ್ಯಕ್ತಿಗಳು ಬಿಹಾರದಲ್ಲಿ ಕೊಲೆ, ಸುಲಿಗೆ ಮತ್ತು ಸಂಘಟಿತ ಅಪರಾಧ ಚಟುವಟಿಕೆಗಳು ಸೇರಿದಂತೆ ಹಲವಾರು ಘೋರ ಅಪರಾಧಗಳಲ್ಲಿ ಪೊಲೀಸರಿಗೆ ಬೇಕಾಗಿದ್ದರು ಎಂದು ದೆಹಲಿ ಪೊಲೀಸ್ ಮೂಲಗಳು ದೃಢಪಡಿಸಿವೆ. ಪಾಠಕ್‌ನನ್ನು ಹಿಡಿದುಕೊಟ್ಟವರಿಗೆ 25,000 ರೂ. ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು .

ಸೀತಾಮರ್ಹಿ ಮತ್ತು ಬಿಹಾರದ ಪಕ್ಕದ ಜಿಲ್ಲೆಗಳಲ್ಲಿ ನಡೆದ ಐದು ಪ್ರಮುಖ ಕೊಲೆಗಳು ಸೇರಿದಂತೆ ಎಂಟು ಕ್ರಿಮಿನಲ್ ಪ್ರಕರಣಗಳಲ್ಲಿ ಪಾಠಕ್ ಬೇಕಾಗಿದ್ದ. ಪಾಠಕ್ ಸಾಮಾಜಿಕ ಮಾಧ್ಯಮ ಮತ್ತು ಆಡಿಯೊ ಸಂದೇಶಗಳ ಮೂಲಕ ಪೊಲೀಸರಿಗೆ ಬಹಿರಂಗವಾಗಿ ಸವಾಲು ಹಾಕುತ್ತಿದ್ದ ಎಂದು ದೆಹಲಿ ಪೊಲೀಸ್ ಮೂಲವೊಂದು ಬಹಿರಂಗಪಡಿಸಿದೆ.

ಇತ್ತೀಚೆಗೆ ಪತ್ತೆಯಾಗಿರುವ ಆಡಿಯೊ ಕ್ಲಿಪ್ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಗ್ಯಾಂಗ್ ರೂಪಿಸುತ್ತಿದ್ದ ಪ್ರಮುಖ ಪಿತೂರಿಯ ವಿವರಗಳನ್ನು ಬಹಿರಂಗಪಡಿಸಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾಲೂರು ಕ್ಷೇತ್ರ: ಮರು ಮತ ಎಣಿಕೆ, ಕಾಂಗ್ರೆಸ್ ನ ನಂಜೇಗೌಡರೇ ಗೆಲುವು! ಸುಪ್ರೀಂಕೋರ್ಟ್ ಮಹತ್ವದ ತೀರ್ಪು!

ಪ್ರಧಾನಿ ಮೋದಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯ ಅಂಗೀಕಾರ; ವಿಪಕ್ಷಗಳ ತೀವ್ರ ಗದ್ದಲ, ಮಧ್ಯಾಹ್ನ 3 ಗಂಟೆಗೆ ಲೋಕಸಭೆ ಕಲಾಪ ಮುಂದೂಡಿಕೆ

ದುಬೈ ಬಿಗ್ ಟಿಕೆಟ್ ಲಕ್ಕಿ ಡ್ರಾ: ಉಡುಪಿಯ ಯುವಕನಿಗೆ ಹೊಡೆಯಿತು ಭರ್ಜರಿ 49 ಕೋಟಿ ರೂ. ಲಾಟ್ರಿ!

ಭಾರತೀಯ ವಾಯುಪಡೆಗೆ ಹಸ್ತಾಂತರಿಸಲು 5 ತೇಜಸ್ ಜೆಟ್‌ಗಳು ಸಿದ್ಧ: HAL

Thank you, Pakistan: ಭಾರತದ ವಿರುದ್ಧ ಬಾಂಗ್ಲಾದೇಶದ ಹಗೆತನ ಬಟ್ಟ ಬಯಲು!

SCROLL FOR NEXT