ಪ್ರಾತಿನಿಧಿಕ ಚಿತ್ರ 
ದೇಶ

ಮಳೆ ನೀರು ತುಂಬಿದ್ದ ಗುಂಡಿಯಲ್ಲಿ ಮುಳುಗಿ ಎರಡು ವರ್ಷದ ಮಗು ದುರಂತ ಸಾವು!

'ಈ ಸಂಬಂಧ ನಾವು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ' ಎಂದು ಪೊಲೀಸರು ತಿಳಿಸಿದ್ದಾರೆ.

ಚೆನ್ನೈ: ಮನೆಯ ಸಮೀಪವೇ ಇರುವ ಖಾಲಿ ಜಾಗವೊಂದರಲ್ಲಿ ಮಳೆ ನೀರಿನಿಂದ ತುಂಬಿದ್ದ ಗುಂಡಿಯಲ್ಲಿ ಮುಳುಗಿ ಪುಟ್ಟ ಮಗುವಿನ ದುರಂತ ಸಾವು ಸಂಭವಿಸಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಎರಡು ವರ್ಷ 10 ತಿಂಗಳ ಪ್ರೇಣಿಕಾ ಶ್ರೀ, ಚೆಂಗಲ್ಪಟ್ಟು ಬಳಿಯ ಮಾಂಗಡುವಿನ ಜನನಿ ನಗರದ ನಿವಾಸಿಯಾಗಿದ್ದರು.

ಅಕ್ಟೋಬರ್ 22 ರಂದು, ಮಧ್ಯಾಹ್ನ 2 ಗಂಟೆ ಸುಮಾರಿಗೆ ತಾಯಿ ಪ್ರಿಯದರ್ಶಿನಿ (23) ಮತ್ತು ಮಗು ಇಬ್ಬರೂ ನಿದ್ರೆಗೆ ಜಾರಿದ್ದರು. ಆದರೆ, ಸಂಜೆ 4.30ರ ಸುಮಾರಿಗೆ ತಾಯಿ ಮತ್ತೆ ಎಚ್ಚರವಾದಾಗ, ಪ್ರೇಮಿಕಾ ಅವರ ಪಕ್ಕದಲ್ಲಿ ಇರಲಿಲ್ಲ' ಎಂದು ಮಾಂಗಡು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದರು.

ಆಗ ತಾಯಿ ಮತ್ತು ನೆರೆಹೊರೆಯವರು ಬಾಲಕಿಯನ್ನು ಹುಡುಕಲು ಪ್ರಾರಂಭಿಸಿದ್ದಾರೆ. ಕೊನೆಗೆ ಪಕ್ಕದ ಖಾಲಿ ಜಾಗದಲ್ಲಿ ಮಳೆಯಿಂದಾಗಿ ತುಂಬಿದ್ದ ಗುಂಡಿಯಲ್ಲಿ ಮುಳುಗಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಅವರು ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆ ವೇಳೆಗಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಅಧಿಕಾರಿ ಹೇಳಿದರು.

'ನಾವು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ' ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯ ಹೈಡ್ರಾಮಕ್ಕೆ ತೆರೆ: ಬೆಳಗ್ಗೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣ; ಮೇ 13ಕ್ಕೆ ಬಹುಮತ ಸಾಬೀತು

ತಮಿಳುನಾಡಿನ ನೂತನ ಸಿಎಂ ಆಗಿ TVK ಮುಖ್ಯಸ್ಥ ವಿಜಯ್ ಪದಗ್ರಹಣ ಸಮಾರಂಭಕ್ಕೆ Rahul Gandhi, ಹೊಸ ಮೈತ್ರಿಕೂಟ ರಚನೆ ಸಂಕೇತ!

ಗುಜರಾತ್ ಟೈಟನ್ಸ್‌ಗೆ ಸತತ 4ನೇ ಗೆಲುವು: 77 ರನ್‌ಗಳಿಂದ ರಾಜಸ್ಥಾನಕ್ಕೆ ಹೀನಾಯ ಸೋಲು, 4ನೇ ಸ್ಥಾನಕ್ಕೆ ಕುಸಿದ RCB!

ಪಾಕ್ ISI ಮಾಡ್ಯೂಲ್ ಬಯಲಾದ ಬೆನ್ನಲ್ಲೇ ಉಗ್ರ ದಾಳಿಯ ಬಗ್ಗೆ ಗುಪ್ತಚರ ಎಚ್ಚರಿಕೆ: ದೆಹಲಿಯಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಸಿಎಂ ಆಯ್ಕೆ ಕಗ್ಗಂಟು: ಮೂವರು ಘಟಾನುಘಟಿಗಳ ನೇರ ಹಣಾಹಣಿ, ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್!

SCROLL FOR NEXT