ಬಿಜೆಪಿ ಗೆಲುವಿನ ಸಂಭ್ರಮ 
ದೇಶ

ಕಾಶ್ಮೀರ: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು; 3 ಸ್ಥಾನಗಳಲ್ಲಿ ಗೆದ್ದು ಬೀಗಿದ NC

370ನೇ ವಿಧಿ ರದ್ದುಪಡಿಸಿದ ನಂತರ, 2021ರಿಂದ ಖಾಲಿ ಇದ್ದ ಜಮ್ಮು ಮತ್ತು ಕಾಶ್ಮೀರದ ನಾಲ್ಕು ರಾಜ್ಯಸಭಾ ಸ್ಥಾನಗಳನ್ನು ಭರ್ತಿ ಮಾಡಲು ದ್ವೈವಾರ್ಷಿಕ ಚುನಾವಣೆ ನಡೆಯಿತು.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಡ್ಡ ಮತದಾನದ ಮೂಲಕ ಒಂದು ಸ್ಥಾನವನ್ನು ಗೆದ್ದು ಅಚ್ಚರಿ ಮೂಡಿಸಿದೆ. ಆಡಳಿತಾರೂಢ ಎನ್‌ಸಿ ಉಳಿದ ಮೂರು ಸ್ಥಾನಗಳನ್ನು ಗೆದ್ದು ಬೀಗಿದೆ.

370ನೇ ವಿಧಿ ರದ್ದುಪಡಿಸಿದ ನಂತರ, 2021ರಿಂದ ಖಾಲಿ ಇದ್ದ ಜಮ್ಮು ಮತ್ತು ಕಾಶ್ಮೀರದ ನಾಲ್ಕು ರಾಜ್ಯಸಭಾ ಸ್ಥಾನಗಳನ್ನು ಭರ್ತಿ ಮಾಡಲು ದ್ವೈವಾರ್ಷಿಕ ಚುನಾವಣೆ ನಡೆಯಿತು.

ಶಾಸಕರು ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ವಿಧಾನಸಭೆ ಸಂಕೀರ್ಣದಲ್ಲಿರುವ ಮೂರು ಪ್ರತ್ಯೇಕ ಮತಗಟ್ಟೆಗಳಲ್ಲಿ ತಮ್ಮ ಮತ ಚಲಾಯಿಸಿದರು. 90 ಸದಸ್ಯರನ್ನು ಹೊಂದಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ, 89 ಶಾಸಕರು ಮತ ಚಲಾಯಿಸಿದರೆ, ಪೀಪಲ್ಸ್ ಕಾನ್ಫರೆನ್ಸ್ ಅಧ್ಯಕ್ಷ ಮತ್ತು ಶಾಸಕ ಸಜದ್ ಗನಿ ಲೋನ್ ಮತದಾನದಿಂದ ದೂರ ಉಳಿದರು. ಪಿಎಸ್ಎ ಅಡಿಯಲ್ಲಿ ಬಂಧಿತರಾಗಿ ಕಥುವಾ ಜೈಲಿನಲ್ಲಿರುವ ದೋಡಾದ ಎಎಪಿ ಶಾಸಕ ಮೆಹ್ರಾಜ್ ಮಲಿಕ್ ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಿದರು.

ಎನ್‌ಸಿ ನಾಲ್ಕು ಅಭ್ಯರ್ಥಿಗಳನ್ನು - ಚೌಧರಿ ಮುಹಮ್ಮದ್ ರಂಜಾನ್, ಶಮ್ಮಿ ಒಬೆರಾಯ್, ಸಜಾದ್ ಕಿಚ್ಲೂ ಮತ್ತು ಇಮ್ರಾನ್ ನಬಿ ದಾರ್ - ಕಣಕ್ಕಿಳಿಸಿತ್ತು. ಬಿಜೆಪಿ ಮೂರು ಸ್ಥಾನಗಳಿಗೆ ಅಲಿ ಮೊಹಮ್ಮದ್ ಮಿರ್, ರಾಕೇಶ್ ಮಹಾಜನ್ ಮತ್ತು ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ಸತ್ ಶರ್ಮಾ ಅವರನ್ನು ಕಣಕ್ಕಿಳಿಸಿತ್ತು.

ಮೂರು ಸ್ಥಾನಗಳನ್ನು ಖಚಿತವಾಗಿ ಗೆಲ್ಲುವ ಸಾಮರ್ಥ್ಯ ಹೊಂದಿದ್ದ ಎನ್‌ಸಿ ಅವುಗಳನ್ನು ಪಡೆದುಕೊಂಡಿತು. ಆದರೆ ಬಿಜೆಪಿಯ ಸತ್ ಶರ್ಮಾ ನಾಲ್ಕನೇ ಸ್ಥಾನವನ್ನು ಗೆದ್ದರು. ಇದರಲ್ಲಿ ಅಡ್ಡ ಮತದಾನ ಮಾಡಿರವುದು ಕಂಡುಬಂದಿತು. ಬಿಜೆಪಿಯ 28 ಮತಗಳ ವಿರುದ್ಧ, ಶರ್ಮಾ ಹೆಚ್ಚುವರಿ ಮತಗಳನ್ನು ಪಡೆದರು.

ಎನ್‌ಸಿ ಪಾಳಯದ ಯಾವ ಶಾಸಕರು ಬಿಜೆಪಿಯ ಸತ್ ಶರ್ಮಾ ಪರವಾಗಿ ಅಡ್ಡಮತ ಹಾಕಿದರು ಎಂಬುದನ್ನು ಕಂಡುಹಿಡಿಯುವುದು ಈಗ ಆಸಕ್ತಿದಾಯಕವಾಗಿದೆ. ಎಲ್ಲಾ ವಿರೋಧ ಪಕ್ಷದ ಶಾಸಕರ ಬೆಂಬಲ ಹೊಂದಿದ್ದ ಆಡಳಿತಾರೂಢ ಎನ್‌ಸಿ ನಾಲ್ಕೂ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು. ಆದರೆ ಅಡ್ಡ ಮತದಾನದಿಂದ ಒಂದು ಸ್ಥಾನ ಕಳೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವ್ಯಾಪಾರ ಒಪ್ಪಂದ ಮಾತುಕತೆ ಪುನರಾರಂಭವಾಗುತ್ತಿದ್ದಂತೆ ಅಮೆರಿಕದಿಂದ ಮಿಶ್ರ ಪ್ರತಿಕ್ರಿಯೆ

Goa nightclub fire: ಥೈಲ್ಯಾಂಡ್ ನಲ್ಲಿ ನೈಟ್ ಕ್ಲಬ್ ಮಾಲೀಕರಾದ ಸೈರಬ್- ಗೌರವ್ ಲುತ್ರಾ ಸೋದರರ ಬಂಧನ

ಹೈಕೋರ್ಟ್‌ನಲ್ಲಿ ಮುಟ್ಟಿನ ರಜೆ ಸಮರ್ಥಿಸಿಕೊಂಡ ಸರ್ಕಾರ; ವಿಚಾರಣೆ ಜನವರಿ 20 ಕ್ಕೆ ಮುಂದೂಡಿಕೆ

ಕೇಂದ್ರ ಅರಣ್ಯ ಇಲಾಖೆಯಿಂದ ಸಿಗದ ಅನುಮತಿ: ಎತ್ತಿನ ಹೊಳೆ ಯೋಜನೆ ಮತ್ತಷ್ಟು ವಿಳಂಬ

ಹೊರಟ್ಟಿ ವಿರುದ್ಧ ಭ್ರಷ್ಟಾಚಾರ ಆರೋಪ: ಯಾದವ್ ಹೇಳಿಕೆ ಬಗ್ಗೆ ತನಿಖೆಗೆ ಒತ್ತಾಯಿಸಲು ಒಗ್ಗಟ್ಟಾದ ಪರಿಷತ್ ಸದಸ್ಯರು!

SCROLL FOR NEXT