ಅಮಿತ್ ಶಾ 
ದೇಶ

RJD ಬಿಹಾರವನ್ನು ಅಪಹರಣ, ಸುಲಿಗೆಯ ಕೇಂದ್ರವನ್ನಾಗಿ ಮಾಡಿದೆ: ಅಮಿತ್ ಶಾ

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ಅಧಿಕಾರಕ್ಕೆ ಮರಳಿದರೆ ಮುಂದೆ ಬಿಹಾರದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಸಬಹುದು ಎಂದು ಶಾ ಹೇಳಿದರು.

ಪಾಟ್ನಾ: ಲಾಲು ಪ್ರಸಾದ್ ನೇತೃತ್ವದ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ವಿರುದ್ಧದ ತಮ್ಮ ದಾಳಿಯನ್ನು ತೀಕ್ಷ್ಣಗೊಳಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರ್‌ಜೆಡಿ ಆಳ್ವಿಕೆಯಲ್ಲಿ ಬಿಹಾರದಲ್ಲಿ ಕೇವಲ ಒಂದು "ಉದ್ಯಮ" ಮಾತ್ರ ಪ್ರವರ್ಧಮಾನಕ್ಕೆ ಬಂದಿತು - ಅದು "ಅಪಹರಣ, ಸುಲಿಗೆ, ಸುಪಾರಿ ಹತ್ಯೆಗಳು ಮತ್ತು ಡಕಾಯಿತಿ" ಎಂದು ಆರೋಪಿಸಿದರು.

"ಆರ್‌ಜೆಡಿ ಆಳ್ವಿಕೆಯಲ್ಲಿ ರಾಜ್ಯದಲ್ಲಿ ಎಲ್ಲಾ ಕೈಗಾರಿಕಾ ಘಟಕಗಳು ಮುಚ್ಚಲ್ಪಟ್ಟವು" ಎಂದು ಕೇಂದ್ರ ಗೃಹ ಸಚಿವರು ದೂರಿದರು.

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ಅಧಿಕಾರಕ್ಕೆ ಮರಳಿದರೆ ಮುಂದೆ ಬಿಹಾರದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಸಬಹುದು ಎಂದು ಶಾ ಹೇಳಿದರು.

ನಳಂದ ಜಿಲ್ಲೆಯ ಬಿಹಾರ್‌ಶರೀಫ್‌ನಲ್ಲಿ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಎನ್‌ಡಿಎನ ಉತ್ತಮ ಆಡಳಿತದ ದಾಖಲೆಯು ಬಿಹಾರದಲ್ಲಿ ಮತದಾನದ ಹಂತಗಳನ್ನು ಈಗಾಗಲೇ ಕಡಿಮೆ ಮಾಡಿದೆ ಎಂದು ತಿಳಿಸಿದರು.

"ಮುಂದಿನ ಬಾರಿ, ನಾವು ಅಧಿಕಾರಕ್ಕೆ ಮರಳಿದರೆ ಕೇವಲ ಒಂದು ಹಂತದಲ್ಲಿ ಚುನಾವಣೆಗಳು ನಡೆಯುತ್ತವೆ" ಎಂದು ಅಮಿತ್ ಶಾ ಹೇಳಿದರು.

ಇದೇ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಶ್ಲಾಘಿಸಿದ ಶಾ, ಅವರ ನಾಯಕತ್ವದಲ್ಲಿ ಎನ್‌ಡಿಎ ರಾಜ್ಯವನ್ನು 'ಜಂಗಲ್ ರಾಜ್' ಮತ್ತು ನಕ್ಸಲಿಸಂನ ಪಿಡುಗಿನಿಂದ ಮುಕ್ತಗೊಳಿಸಿದೆ ಎಂದರು.

"ಕೇಂದ್ರದಲ್ಲಿರುವ ನಮ್ಮ ಸರ್ಕಾರ ಇಡೀ ದೇಶವನ್ನು ನಕ್ಸಲ್ ಪಿಡುಗಿನಿಂದ ಮುಕ್ತಗೊಳಿಸಲು ದೃಢನಿಶ್ಚಯ ಹೊಂದಿದೆ" ಎಂದು ಶಾ ಪ್ರತಿಪಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಚೀನಾದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಸಂಚು: ಕಾರಲ್ಲಿ ಕರೆದೊಯ್ದು ಪಾರುಮಾಡಿದ ಪುಟಿನ್; ಢಾಕಾದಲ್ಲಿ US ಅಧಿಕಾರಿ ನಿಗೂಢ ಸಾವು ಬಿಚ್ಚಿಟ್ಟ ಸ್ಫೋಟಕ ರಹಸ್ಯ!

ನನ್ನ ಹೇಳಿಕೆಗೆ ನಾನೂ ಈಗಲೂ ಬದ್ಧ, ಆದ್ರೆ ಸಿದ್ದರಾಮಯ್ಯ 5 ವರ್ಷ ಸಿಎಂ: ಯತೀಂದ್ರ

Musharraf ನ್ನು ಲಕ್ಷಾಂತರ ಡಾಲರ್ ಎಸೆದು ಖರೀದಿಸಿದ್ದೆವು, ಪಾಕಿಸ್ತಾನ ಸಂಪೂರ್ಣ ಅಣ್ವಸ್ತ್ರ ನಿಯಂತ್ರಣವನ್ನು ಅಮೆರಿಕಾಗೆ ಒಪ್ಪಿಸಿತ್ತು : ಮಾಜಿ ಸಿಐಎ ಅಧಿಕಾರಿ

ಬೆಂಗಳೂರು ಟನಲ್ ವಿರುದ್ಧ ಪ್ರಕಾಶ್ ಬೆಳವಾಡಿ ಅರ್ಜಿ; ತೇಜಸ್ವಿ ಸೂರ್ಯ ವಾದ ಮಂಡನೆ

Cricket: ಟೀಂ ಇಂಡಿಯಾಗೆ ಗಾಯದ ಭೀತಿ, ಶ್ರೇಯಸ್ ಅಯ್ಯರ್ ಆಸ್ಪತ್ರೆಗೆ ದೌಡು.. 'ಸೂಪರ್ ಕ್ಯಾಚ್' ಬಳಿಕ ಆಗಿದ್ದೇನು?

SCROLL FOR NEXT