ಅಪಘಾತಕ್ಕೊಳಗಾದ ಕಾರು 
ದೇಶ

ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ: ಟ್ರಕ್‌ನ ಟೈರ್ ಸಿಡಿದು ಕಾರಿಗೆ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಸಚಿವೆ ಪಾರು!

ಲಕ್ನೋಗೆ ತೆರಳುತ್ತಿದ್ದಾಗ ಸಚಿವೆಯ ಕಾರಿನ ಮುಂದೆ ಸಾಗುತ್ತಿದ್ದ ಟ್ರಕ್‌ನ ಒಂದು ಟೈರ್ ಇದ್ದಕ್ಕಿದ್ದಂತೆ ಸಿಡಿದಿದೆ. ಬಳಿಕ ನಿಯಂತ್ರಣ ತಪ್ಪಿ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ. ಚಾಲಕ ಚಾಣಾಕ್ಷ್ಯತನದಿಂದ ಕಾರನ್ನು ಬದಿಗೆ ತಂದಿದ್ದು ಭಾರೀ ಅಪಘಾತ ತಪ್ಪಿದಂತಾಗಿದೆ.

ಲಕ್ನೋ: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉತ್ತರ ಪ್ರದೇಶದ ಮಹಿಳಾ ಕಲ್ಯಾಣ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಬೇಬಿ ರಾಣಿ ಮೌರ್ಯ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಶುಕ್ರವಾರ ರಾತ್ರಿ ಲಕ್ನೋಗೆ ತೆರಳುತ್ತಿದ್ದಾಗ ಸಚಿವೆಯ ಕಾರಿನ ಮುಂದೆ ಸಾಗುತ್ತಿದ್ದ ಟ್ರಕ್‌ನ ಒಂದು ಟೈರ್ ಇದ್ದಕ್ಕಿದ್ದಂತೆ ಸಿಡಿದಿದೆ. ಬಳಿಕ ನಿಯಂತ್ರಣ ತಪ್ಪಿ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ. ಚಾಲಕ ಚಾಣಾಕ್ಷ್ಯತನದಿಂದ ಕಾರನ್ನು ಬದಿಗೆ ತಂದಿದ್ದು ಭಾರೀ ಅಪಘಾತ ತಪ್ಪಿದಂತಾಗಿದೆ.

ಅಪಘಾತಲ್ಲಿ ಕಾರಿಗೆ ಭಾರೀ ಹಾನಿಯಾಗಿದ್ದು, ಸಚಿವೆ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಹತ್ರಾಸ್ ಜಿಲ್ಲೆಯ ಹಲವೆಡೆ ಆಯೋಜಿಸಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅವರು ಲಕ್ನೋಗೆ ವಾಪಸ್‌ ಆಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಘಟನೆಯ ನಂತರ ಪೊಲೀಸರು ಟ್ರಕ್‌ನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಬೇಬಿ ರಾಣಿ ಮೌರ್ಯ ಅವರನ್ನು ಮತ್ತೊಂದು ವಾಹನದಲ್ಲಿ ಲಕ್ನೋಗೆ ಕಳುಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಚೀನಾದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಸಂಚು: ಕಾರಲ್ಲಿ ಕರೆದೊಯ್ದು ಪಾರುಮಾಡಿದ ಪುಟಿನ್; ಢಾಕಾದಲ್ಲಿ US ಅಧಿಕಾರಿ ನಿಗೂಢ ಸಾವು ಬಿಚ್ಚಿಟ್ಟ ಸ್ಫೋಟಕ ರಹಸ್ಯ!

ನನ್ನ ಹೇಳಿಕೆಗೆ ನಾನೂ ಈಗಲೂ ಬದ್ಧ, ಆದ್ರೆ ಸಿದ್ದರಾಮಯ್ಯ 5 ವರ್ಷ ಸಿಎಂ: ಯತೀಂದ್ರ

Musharraf ನ್ನು ಲಕ್ಷಾಂತರ ಡಾಲರ್ ಎಸೆದು ಖರೀದಿಸಿದ್ದೆವು, ಪಾಕಿಸ್ತಾನ ಸಂಪೂರ್ಣ ಅಣ್ವಸ್ತ್ರ ನಿಯಂತ್ರಣವನ್ನು ಅಮೆರಿಕಾಗೆ ಒಪ್ಪಿಸಿತ್ತು : ಮಾಜಿ ಸಿಐಎ ಅಧಿಕಾರಿ

ಬೆಂಗಳೂರು ಟನಲ್ ವಿರುದ್ಧ ಪ್ರಕಾಶ್ ಬೆಳವಾಡಿ ಅರ್ಜಿ; ತೇಜಸ್ವಿ ಸೂರ್ಯ ವಾದ ಮಂಡನೆ

Cricket: ಟೀಂ ಇಂಡಿಯಾಗೆ ಗಾಯದ ಭೀತಿ, ಶ್ರೇಯಸ್ ಅಯ್ಯರ್ ಆಸ್ಪತ್ರೆಗೆ ದೌಡು.. 'ಸೂಪರ್ ಕ್ಯಾಚ್' ಬಳಿಕ ಆಗಿದ್ದೇನು?

SCROLL FOR NEXT