ಕರೂರಿನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸುವ ಮೊದಲು ಸಭೆಯನ್ನುದ್ದೇಶಿಸಿ ಮಾತನಾಡುತ್ತಿರುವ ನಟ ವಿಜಯ್  
ದೇಶ

ಕರೂರ್ ಕಾಲ್ತುಳಿತ: ನಟ ವಿಜಯ್ ಸೋಮವಾರ ಸಂತ್ರಸ್ತ ಕುಟುಂಬಗಳ ಭೇಟಿ

ಸೆಪ್ಟೆಂಬರ್ 27 ರಂದು ವಿಜಯ್ ಅವರ ಟಿವಿಕೆ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ಚೆನ್ನೈ: ಕರೂರ್ ಕಾಲ್ತುಳಿತ ದುರಂತ ನಡೆದು ಒಂದು ತಿಂಗಳ ನಂತರ, ಅಕ್ಟೋಬರ್ 27 ರಂದು ಚೆನ್ನೈ ಬಳಿಯ ಮಹಾಬಲಿಪುರಂನಲ್ಲಿ ಸಂತ್ರಸ್ತ ಕುಟುಂಬಗಳನ್ನು ನಟ-ರಾಜಕಾರಣಿ ವಿಜಯ್ ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸಂಬಂಧ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ), ರೆಸಾರ್ಟ್‌ನಲ್ಲಿ ಸಭೆ ಏರ್ಪಡಿಸಿದ್ದು, ಅಲ್ಲಿ ಪಕ್ಷವು 50 ಕೊಠಡಿಗಳನ್ನು ಕಾಯ್ದಿರಿಸಿದೆ. ವಿಜಯ್ ಅವರು ದುಃಖಿತ ಕುಟುಂಬಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಸಂತಾಪ ಸೂಚಿಸಲಿದ್ದಾರೆ ಎನ್ನಲಾಗಿದೆ.

ರೆಸಾರ್ಟ್‌ಗೆ ತೆರಳಲು ಅವರು ನಮಗೆ ಬಸ್ ವ್ಯವಸ್ಥೆ ಮಾಡಿದ್ದಾರೆ. ನಮ್ಮಲ್ಲಿ ಹಲವರು ಹೋಗುತ್ತಿದ್ದೇವೆ ಎಂದು ಸಂತ್ರಸ್ತರ ಕುಟುಂಬ ಸದಸ್ಯರಲ್ಲಿ ಒಬ್ಬರು ಕರೂರಿನಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.

ಸೆಪ್ಟೆಂಬರ್ 27 ರಂದು ವಿಜಯ್ ಅವರ ಟಿವಿಕೆ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ತನ್ನ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕಳೆದುಕೊಂಡ ವೇಲುಸಾಮಿಪುರಂನ ಪೆರುಮಾಳ್ ಅವರು, ವರದಿಗಾರರೊಂದಿಗೆ ಮಾತನಾಡಿ, ಸಂತ್ರಸ್ತ ಕುಟುಂಬಗಳು ರೆಸಾರ್ಟ್‌ಗೆ ಹೋಗಿ ಟಿವಿಕೆ ನಾಯಕನನ್ನು ಭೇಟಿ ಮಾಡುವುದು ಸೂಕ್ತವಲ್ಲ. ಅವರೇ ಸಂತ್ರಸ್ತರ ಮನೆಗೆ ಭೇಟಿ ನೀಡಬೇಕು" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಭಾರತ ಜತೆಗಿನ ಸಂಬಂಧಕ್ಕೆ ಧಕ್ಕೆ ತಂದು ಪಾಕ್‌ ಜೊತೆ ಸ್ನೇಹ ಇಲ್ಲ': ಅಮೆರಿಕ ಕಾರ್ಯದರ್ಶಿ ಮಾರ್ಕೋ ರುಬಿಯೋ

ಅಲ್ಬೇನಿಯಾದ ಎಐ ಸಚಿವೆ ಈಗ ಗರ್ಭಿಣಿ, 83 ಮಕ್ಕಳ ತಾಯಿ..: ಅಲ್ಬೇನಿಯಾ ಪ್ರಧಾನಿ ಎಡಿ ರಾಮ ವಿಲಕ್ಷಣ ಘೋಷಣೆ!

ICC Womens World Cup 2025: ಭಾರತ-ಬಾಂಗ್ಲಾದೇಶ ಪಂದ್ಯ ಮಳೆಗಾಹುತಿಚ ಸೆಮೀಸ್ ನಲ್ಲಿ ಇಂಡಿಯಾ-ಆಸಿಸ್ ಮುಖಾಮುಖಿ!

ದೇಶಾದ್ಯಂತ SIR ಪ್ರಯೋಗ: ಮೊದಲ ಹಂತದಲ್ಲಿ ಬಂಗಾಳ, ಕೇರಳ, ತಮಿಳುನಾಡು; ನಾಳೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸುದ್ದಿಗೋಷ್ಠಿ

ಭಯೋತ್ಪಾದಕರ ಪಟ್ಟಿಗೆ Bollywood ನಟ ಸಲ್ಮಾನ್ ಖಾನ್ ಹೆಸರು ಸೇರಿಸಿದ ಪಾಕಿಸ್ತಾನ!

SCROLL FOR NEXT