ಜ್ಞಾನೇಶ್ ಕುಮಾರ್ 
ದೇಶ

ನಾಳೆಯಿಂದಲೇ ರಾಷ್ಟ್ರವ್ಯಾಪಿ SIR: ಮೊದಲ ಹಂತದಲ್ಲಿ ಕೇರಳ, ತಮಿಳುನಾಡು, ಬಂಗಾಳ ಸೇರಿ 12 ರಾಜ್ಯಗಳಲ್ಲಿ ಮತದಾರರ ಪಟ್ಟಿ ಶುದ್ಧೀಕರಣ

"ನಾವು ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ. ಅದರ ಫಲಿತಾಂಶವು ನಿಮ್ಮ ಮುಂದಿದೆ... ಶೂನ್ಯ ಮೇಲ್ಮನವಿಗಳು ಬಂದಿವೆ" ಎಂದು ಹೇಳಿದರು.

ನವದೆಹಲಿ: ಬಿಹಾರದಲ್ಲಿ "ಯಶಸ್ವಿ"ಯಾಗಿ ಪೂರ್ಣಗೊಂಡ ನಂತರ, ವಿವಾದಾತ್ಮಕ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)ಯನ್ನು ದೇಶಾದ್ಯಂತ ನಡೆಸುವುದಾಗಿ ಭಾರತೀಯ ಚುನಾವಣಾ ಆಯೋಗ(ECI) ಸೋಮವಾರ ಘೋಷಿಸಿದೆ.

ನಾಳೆಯಿಂದಲೇ ರಾಷ್ಟ್ರವ್ಯಾಪಿ SIR ಆರಂಭವಾಗಲಿದ್ದು, ಮೊದಲ ಹಂತದಲ್ಲಿ ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ಶುದ್ಧೀಕರಣ ಕಾರ್ಯ ನಡೆಯಲಿದೆ.

ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು, "ನಾವು ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ. ಅದರ ಫಲಿತಾಂಶವು ನಿಮ್ಮ ಮುಂದಿದೆ... ಶೂನ್ಯ ಮೇಲ್ಮನವಿಗಳು ಬಂದಿವೆ" ಎಂದು ಹೇಳಿದರು.

SIRನ ಎರಡನೇ ಹಂತವನ್ನು "12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ" ನಡೆಸಲಾಗುವುದು ಎಂದು CEC ಘೋಷಿಸಿದರು.

ರಾಷ್ಟ್ರವ್ಯಾಪಿ SIRನ ಮೊದಲ ಹಂತದಲ್ಲಿ ಒಳಗೊಳ್ಳುವ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಪಟ್ಟಿಗಳನ್ನು ಸೋಮವಾರ ಮಧ್ಯರಾತ್ರಿ ಸ್ಥಗಿತಗೊಳಿಸಲಾಗುವುದು ಎಂದು ಅವರು ತಿಳಿಸಿದರು.

"ಆ ಪಟ್ಟಿಯಲ್ಲಿರುವ ಎಲ್ಲಾ ಮತದಾರರಿಗೆ ಬಿಎಲ್‌ಒಗಳು ವಿಶಿಷ್ಟ ಎಣಿಕೆ ನಮೂನೆಗಳನ್ನು ನೀಡುತ್ತಾರೆ. ಈ ಎಣಿಕೆ ನಮೂನೆಗಳು ಪ್ರಸ್ತುತ ಮತದಾರರ ಪಟ್ಟಿಯಿಂದ ಅಗತ್ಯವಿರುವ ಎಲ್ಲಾ ವಿವರಗಳನ್ನು ಹೊಂದಿರುತ್ತವೆ. ಬಿಎಲ್‌ಒಗಳು ಅಸ್ತಿತ್ವದಲ್ಲಿರುವ ಮತದಾರರಿಗೆ ಫಾರ್ಮ್‌ಗಳನ್ನು ವಿತರಿಸಲು ಪ್ರಾರಂಭಿಸಿದ ನಂತರ, ಎಣಿಕೆ ನಮೂನೆಗಳಲ್ಲಿ ಹೆಸರುಗಳನ್ನು ಹೊಂದಿರುವ ಎಲ್ಲರೂ ತಮ್ಮ ಹೆಸರುಗಳು 2003ರ ಮತದಾರರ ಪಟ್ಟಿಯಲ್ಲಿವೆಯೇ ಎಂದು ಪರಿಶೀಲಿಸಬೇಕು. ಇದೆ ಎಂದಾದರೆ, ಅವರು ಯಾವುದೇ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿಲ್ಲ" ಎಂದು ಸಿಇಸಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸ್ಪರ್ಧೆಗಳ ಸಂಕೀರ್ಣ ಸಮಯಗಳೊಂದಿಗೆ ಜಗತ್ತು ಹೋರಾಡುತ್ತಿದ್ದು, ಭಯೋತ್ಪಾದನೆ ವಿಚಾರದಲ್ಲಿ ರಾಜಿ ಇಲ್ಲ': ಜೈಶಂಕರ್ ಖಡಕ್ ಸಂದೇಶ

'ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ಕಾಲ ನಾನೇ ಮುಖ್ಯಮಂತ್ರಿ': ಸಿದ್ದರಾಮಯ್ಯ ಮಾರ್ಮಿಕ ಹೇಳಿಕೆ!

ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌: 145 ಕೆಜಿ ತೂಕ ಎತ್ತಿ ಪದಕ ಪಡೆದ 7 ತಿಂಗಳ ಗರ್ಭಿಣಿ; ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ ಸಾಧನೆಗೆ ಅಭಿನಂದನೆಗಳ ಮಹಾಪೂರ!

ಮೊನ್ನೆ ನೇಮಕ ಇಂದು RSS ಕಾರ್ಯಕರ್ತನ ಹೆಸರು ತೆಗೆದು ಹಾಕಿದ ಸರ್ಕಾರ; ಸಿಎಂ ಸಿದ್ದರಾಮಯ್ಯಗೆ ಕ್ಷಮೆ!

Bengaluru: ಡೆಲಿವರಿ ನೆಪದಲ್ಲಿ ಬ್ರೆಜಿಲ್ ಮಾಡೆಲ್ ಗೆ ಲೈಂಗಿಕ ಕಿರುಕುಳ; ಏಜೆಂಟ್ ಬಂಧನ

SCROLL FOR NEXT