ಸುಪ್ರೀಂಕೋರ್ಟ್, ರಾಕೇಶ್ ಕಿಶೋರ್ 
ದೇಶ

CJI ವಿರುದ್ಧ ಶೂ ಎಸೆತ: ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಮ ಕೈಬಿಟ್ಟ ಸುಪ್ರೀಂ ಕೋರ್ಟ್; ಇದೇ ನಿಜವಾದ ಕಾರಣ!

ಸಿಜೆಐ ಮೇಲೆ ಶೂ ಎಸೆದ ವಕೀಲರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡುವುದರಿಂದ ಅನಗತ್ಯವಾಗಿ ಪ್ರಾಮುಖ್ಯತೆ ನೀಡಿದಂತಾಗಲಿದೆ ಎಂದು ನ್ಯಾಯಾಲಯವು ಅರ್ಜಿದಾರರಾದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(SCBA) ಗೆ ತಿಳಿಸಿದೆ.

ನವದೆಹಲಿ: ಅಕ್ಟೋಬರ್ 6 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಸುಪ್ರೀಂಕೋರ್ಟ್ ಕೈಬಿಟ್ಟಿದೆ. ಈ ಬಗ್ಗೆ ಒಲವು ಹೊಂದಿಲ್ಲ ಎಂದು ಭಾರತದ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಸ್ವತಃ ಸಿಜೆಐ ಅವರೇ ವಕೀಲರ ವಿರುದ್ಧ ಪ್ರಕ್ರಿಯೆ ಮುಂದುವರಿಯಲು ನಿರಾಕರಿಸಿದ್ದಾರೆ.

ಸಿಜೆಐ ಮೇಲೆ ಶೂ ಎಸೆದ ವಕೀಲರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡುವುದರಿಂದ ಅನಗತ್ಯವಾಗಿ ಪ್ರಾಮುಖ್ಯತೆ ನೀಡಿದಂತಾಗಲಿದೆ ಎಂದು ನ್ಯಾಯಾಲಯವು ಅರ್ಜಿದಾರರಾದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(SCBA) ಗೆ ತಿಳಿಸಿದೆ.

ಅಕ್ಟೋಬರ್ 6 ರಂದು ವಿಷ್ಣು ವಿಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ವಿಚಾರಣೆ ವೇಳೆಯಲ್ಲಿ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆಯಲು ವಕೀಲ ರಾಕೇಶ್ ಕಿಶೋರ್ ಯತ್ನಿಸಿದ್ದರು.

ಅವರ ವಿರುದ್ಧದ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಎಸ್‌ಸಿಬಿಎ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ.

ನ್ಯಾಯಾಲಯದಲ್ಲಿ ಘೋಷಣೆ ಕೂಗುವುದು ಮತ್ತು ಶೂ ಎಸೆಯುವುದು ನ್ಯಾಯಾಂಗ ನಿಂದನೆಯ ಸ್ಪಷ್ಟ ಪ್ರಕರಣಗಳಾಗಿವೆ. ಆದರೆ ಇದು ಸಂಬಂಧಪಟ್ಟ ನ್ಯಾಯಾಧೀಶರ ಮೇಲೆ ಅವಲಂಬಿತವಾಗಿದೆ. ಅಂತಹ ಘಟನೆಗಳನ್ನು ತಡೆಯಲು ಮಾರ್ಗಸೂಚಿಗಳನ್ನು ಹಾಕುವುದನ್ನು ಪರಿಗಣಿಸುವುದಾಗಿ ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಕಾಂಗ್ರೆಸ್ ಹೈಕಮಾಂಡ್ ಒಪ್ಪಿದರೇ 5 ವರ್ಷ ಕಾಲ ನಾನೇ ಮುಖ್ಯಮಂತ್ರಿ': ಸಿದ್ದರಾಮಯ್ಯ ಮಾರ್ಮಿಕ ಹೇಳಿಕೆ!

ಮತ್ತೊಬ್ಬ ಏಕನಾಥ ಶಿಂಧೆ ಹುಟ್ಟಲು ಸಾಧ್ಯವಿಲ್ಲ; 'ನವೆಂಬರ್ ಕ್ರಾಂತಿ'ಗೆ ಕಾಂಗ್ರೆಸ್ ಅವಕಾಶ ನೀಡಲ್ಲ!

ಸಹೋದರಿಯರ AI ಅಶ್ಲೀಲ ಫೋಟೋ-ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌: 19ರ ಯುವಕ ಆತ್ಮಹತ್ಯೆ, 'ಸಾಹಿಲ್, ನೀರಜ್'ಗಾಗಿ ಶೋಧ!

ಎಲೆಕ್ಟ್ರಿಕ್‌ ಬಸ್‌ಗಳಲ್ಲಿ ತಾಂತ್ರಿಕ ಸಮಸ್ಯೆ, ಅಪಘಾತ ಹೆಚ್ಚಳ: ಕುಮಾರಸ್ವಾಮಿಗೆ ಪತ್ರ ಬರೆದ ರಾಮಲಿಂಗಾರೆಡ್ಡಿ

ನಾಳೆಯಿಂದಲೇ ರಾಷ್ಟ್ರವ್ಯಾಪಿ SIR: ಮೊದಲ ಹಂತದಲ್ಲಿ ಕೇರಳ, ತಮಿಳುನಾಡು, ಬಂಗಾಳ ಸೇರಿ 12 ರಾಜ್ಯಗಳಲ್ಲಿ ಮತದಾರರ ಪಟ್ಟಿ ಶುದ್ಧೀಕರಣ

SCROLL FOR NEXT