ದೇಶ

ಜೈಪುರ: 'ಹೈಟೆನ್ಷನ್‌' ವಿದ್ಯುತ್ ತಂತಿ ತಗುಲಿ ಖಾಸಗಿ ಬಸ್‌ ಗೆ ಬೆಂಕಿ; ಇಬ್ಬರು ಸಾವು, ಹಲವರಿಗೆ ಗಾಯ! Video

ಉತ್ತರ ಪ್ರದೇಶದ ಪಿಲಿಭಿತ್‌ನಿಂದ ಮನೋಹರಪುರದ ಇಟ್ಟಿಗೆ ಭಟ್ಟಿಗೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿತ್ತು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತೇಜ್‌ಪಾಲ್ ಸಿಂಗ್ ಹೇಳಿದ್ದಾರೆ.

ಜೈಪುರ: ಹೈಟೆನ್ಷನ್‌ ವಿದ್ಯುತ್ ತಂತಿ ತಗುಲಿ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ಜೈಪುರದ ಮನೋಹರಪುರ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.

ಉತ್ತರ ಪ್ರದೇಶದ ಪಿಲಿಭಿತ್‌ನಿಂದ ಮನೋಹರಪುರದ ಇಟ್ಟಿಗೆ ಭಟ್ಟಿಗೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿತ್ತು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತೇಜ್‌ಪಾಲ್ ಸಿಂಗ್ ಹೇಳಿದ್ದಾರೆ.

ಮನೋಹರಪುರದ ಹಳ್ಳಿಯೊಂದರ ಬಳಿಯ ರಸ್ತೆಯಿಂದ ಬಸ್ ಹಾದು ಹೋಗುವಾಗ ಬಸ್‌ನ ಮೇಲ್ಭಾಗದಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ಗಳು ಮತ್ತು ಇತರ ಗೃಹೋಪಯೋಗಿ ವಸ್ತುಗಳು ಹೈ ಟೆನ್ಷನ್ ವಿದ್ಯುತ್ ತಂತಿಗೆ ತಾಗಿವೆ ಎಂದು ಸಿಂಗ್ ತಿಳಿಸಿದ್ದಾರೆ.

11,000-ವೋಲ್ಟ್ ಸಾಮರ್ಥ್ಯದ ವಿದ್ಯುತ್ ತಂತಿ ಬಸ್ ಗೆ ತಲುಗಿಲಿದೆ. ಇದರಿಂದ ಭಾರಿ ಬೆಂಕಿ ಹೊತ್ತುಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಸುಟ್ಟುಹೋಗಿದೆ. ನಂತರ ಬೆಂಕಿಯನ್ನು ನಂದಿಸಲಾಯಿತು. ಗಾಯಾಳುಗಳನ್ನು ಶಹಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಾಳುಗಳಲ್ಲಿ ಆರು ಮಂದಿಯನ್ನು ಸುಟ್ಟ ಗಾಯಗಳೊಂದಿಗೆ ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಕೆಲವರಿಗೆ ಶಹಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಕೆಲ ಕಾರ್ಮಿಕರು ಬಸ್‌ನಿಂದ ಜಿಗಿದಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಪ್ರೇಮ್ ಚಂದ್ ಬೈರ್ವಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

Op Sindoor: ವಿಶ್ವಭೂಪಟದಿಂದ ಪಾಕ್ ನಿರ್ನಾಮಕ್ಕೆ ಕೆಲವೇ ನಿಮಿಷಗಳ ಅಂತರದಲ್ಲಿದ್ದೆವು, ಆದ್ರೆ ಅವರು ತಡೆದರು...: ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ

IPL 2026: ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್; ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ

IPL 2026: ಯಾರ್ ಮೇಲಾದ್ರೂ 5 ಸಾವಿರ ಹೂಡಿಕೆ ಮಾಡಿ ನೋಡಿ: LSG ಮಾಲೀಕರ ಕುರಿತು Mohammed Shami ಹೇಳಿಕೆ ವೈರಲ್!

ದೇಶದಲ್ಲೇ ಮೊದಲ ಬಾರಿಗೆ ಡ್ರಗ್ಸ್, ಸಾಮಾಜಿಕ–ಆರ್ಥಿಕ ಜನಗಣತಿ ಆರಂಭಿಸಿದ ಪಂಜಾಬ್: ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ

SCROLL FOR NEXT