ಬಿಹಾರ ಪೊಲೀಸರ ಸಾಂದರ್ಭಿಕ ಚಿತ್ರ 
ದೇಶ

Bihar Poll: ಮತದಾನಕ್ಕೆ ಕೆಲವೇ ದಿನ ಬಾಕಿ ಇರುವಾಗಲೇ 'ಜನ್ ಸುರಾಜ್‌' ಪಕ್ಷದ ಬೆಂಬಲಿಗ ನಿಗೂಢ ಸಾವು!

ಮೊಕಮಾ ತಾಲ್ ಪ್ರದೇಶದಲ್ಲಿ ಪ್ರಚಾರದ ವೇಳೆ ಅಭ್ಯರ್ಥಿಯೊಬ್ಬರ ಬೆಂಬಲಿಗರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ಮೃತದೇಹವನ್ನು ಪೊಲೀಸರಿಗೆ ಹಸ್ತಾಂತರಿಸದ ಕಾರಣ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಇನ್ನೂ ಕೇವಲ 6 ದಿನ ಬಾಕಿಯಿರುವಂತೆಯೇ ಜನ್ ಸುರಾಜ್‌ ಪಕ್ಷದ ಬೆಂಬಲಿಗರೊಬ್ಬರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.

ಪಾಟ್ನಾದ ಮೊಕಾಮಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ದುಲಾರ್ ಚಂದ್ ಯಾದವ್ ಎಂದು ಗುರುತಿಸಲಾಗಿದೆ. ಅವರು ಜನ್ ಸುರಾಜ್‌ ಪಕ್ಷದ ಅಭ್ಯರ್ಥಿ ಪಿಯೂಷ್ ಪ್ರಿಯದರ್ಶಿ ಪರ ಪ್ರಚಾರ ಮಾಡುತ್ತಿದ್ದಾಗ ಸಾವನ್ನಪ್ಪಿದ್ದಾರೆ.

"ಮೊಕಮಾ ತಾಲ್ ಪ್ರದೇಶದಲ್ಲಿ ಪ್ರಚಾರದ ವೇಳೆ ಅಭ್ಯರ್ಥಿಯೊಬ್ಬರ ಬೆಂಬಲಿಗರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ಮೃತದೇಹವನ್ನು ಪೊಲೀಸರಿಗೆ ಹಸ್ತಾಂತರಿಸದ ಕಾರಣ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಬುಲೆಟ್ ಗಾಯದಿಂದ ಸಾವನ್ನಪ್ಪಿದ್ದಾರೋ ಅಥವಾ ಆಕಸ್ಮಿಕ ಸಾವೋ ಎಂಬುದು ಪೊಲೀಸರು ಶವ ಪಡೆದ ನಂತರವೇ ತಿಳಿಯಬಹುದು" ಎಂದು ಪಾಟ್ನಾ ಎಸ್‌ಎಸ್‌ಪಿ ಕಾರ್ತಿಕೇಯ ಕೆ ಶರ್ಮಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. ಈ ಕ್ಷೇತ್ರದಲ್ಲಿ ಜೆಡಿಯು ನಿಂದ ಅನಂತ್ ಸಿಂಗ್ ಕಣಕ್ಕಿಳಿದಿದ್ದು, ವೀಣಾದೇವಿ RJD ಅಭ್ಯರ್ಥಿಯಾಗಿದ್ದಾರೆ. ನವೆಂಬರ್ 6 ರಂದು ಮೊಕಾಮಾದಲ್ಲಿ ಮತದಾನ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

Op Sindoor: ವಿಶ್ವಭೂಪಟದಿಂದ ಪಾಕ್ ನಿರ್ನಾಮಕ್ಕೆ ಕೆಲವೇ ನಿಮಿಷಗಳ ಅಂತರದಲ್ಲಿದ್ದೆವು, ಆದ್ರೆ ಅವರು ತಡೆದರು...: ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ

IPL 2026: ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್; ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ

IPL 2026: ಯಾರ್ ಮೇಲಾದ್ರೂ 5 ಸಾವಿರ ಹೂಡಿಕೆ ಮಾಡಿ ನೋಡಿ: LSG ಮಾಲೀಕರ ಕುರಿತು Mohammed Shami ಹೇಳಿಕೆ ವೈರಲ್!

ದೇಶದಲ್ಲೇ ಮೊದಲ ಬಾರಿಗೆ ಡ್ರಗ್ಸ್, ಸಾಮಾಜಿಕ–ಆರ್ಥಿಕ ಜನಗಣತಿ ಆರಂಭಿಸಿದ ಪಂಜಾಬ್: ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ

SCROLL FOR NEXT