ಬಿಹಾರ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಎನ್‌ಡಿಎ 
ದೇಶ

Bihar polls: ಎನ್‌ಡಿಎ ಪ್ರಣಾಳಿಕೆ ಬಿಡುಗಡೆ; ಒಂದು ಕೋಟಿ ಯುವಕರಿಗೆ ಉದ್ಯೋಗ, ಉಚಿತ ಶಿಕ್ಷಣ, ಮೂಲಸೌಕರ್ಯ ಅಭಿವೃದ್ಧಿ ಭರವಸೆ

ಏಳು ಎಕ್ಸ್‌ಪ್ರೆಸ್‌ವೇಗಳು, 10 ಕೈಗಾರಿಕಾ ಪಾರ್ಕ್‌ಗಳು, ಕೆಜಿಯಿಂದ ಪಿಜಿವರೆಗೆ ಗುಣಮಟ್ಟದ ಉಚಿತ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ಎಸ್‌ಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 2000 ರೂ. ನೆರವು ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಎನ್‌ಡಿಎ ಶುಕ್ರವಾರ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಒಂದು ಕೋಟಿ ಯುವಕರಿಗೆ ಉದ್ಯೋಗ, ಒಂದು ಕೋಟಿ ಲಕ್ಷಪತಿ ದೀದಿ, ನಾಲ್ಕು ನಗರಗಳಲ್ಲಿ ಮೆಟ್ರೋ ರೈಲು ಸೇವೆಗಳು ಮತ್ತು ರಾಜ್ಯದಲ್ಲಿ ಏಳು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ನಿರ್ಮಿಸುವ ಭರವಸೆ ನೀಡಿದೆ.

ಏಳು ಎಕ್ಸ್‌ಪ್ರೆಸ್‌ವೇಗಳು, 10 ಕೈಗಾರಿಕಾ ಪಾರ್ಕ್‌ಗಳು, ಕೆಜಿಯಿಂದ ಪಿಜಿವರೆಗೆ ಗುಣಮಟ್ಟದ ಉಚಿತ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ಎಸ್‌ಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 2000 ರೂ. ನೆರವು ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ಎನ್‌ಡಿಎ ಅಧಿಕಾರಕ್ಕೆ ಬಂದರೆ, ವಿಶ್ವ ದರ್ಜೆಯ ವೈದ್ಯಕೀಯ ಕೇಂದ್ರ, ಪ್ರತಿ ಜಿಲ್ಲೆಯಲ್ಲಿ ಒಂದು ವೈದ್ಯಕೀಯ ಕಾಲೇಜು, ಉಚಿತ ಪಡಿತರ, 5 ಲಕ್ಷ ರೂ. ಮೌಲ್ಯದ ಉಚಿತ ಚಿಕಿತ್ಸೆ ಮತ್ತು 50 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಸ್ಥಾಪಿಸುವುದಾಗಿ 69 ಪುಟಗಳ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಜಿತನ್ ರಾಮ್ ಮಾಂಝಿ, ಚಿರಾಗ್ ಪಾಸ್ವಾನ್ ಮತ್ತು ಮೈತ್ರಿಕೂಟದ ಇತರ ಪಕ್ಷಗಳ ನಾಯಕರು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Mind Your...": "ಹಸಿದ ರಾಷ್ಟ್ರ" ಟ್ರಂಪ್ ಹೇಳಿಕೆ ವಿರುದ್ಧ ಇರಾನ್ ಕಿಡಿ!

ಖಮೇನಿಗೆ ಅಂತಿಮ ವಿದಾಯ: ಬಿಕ್ಕಿಬಿಕ್ಕಿ ಅತ್ತ ಇರಾನ್ ಸ್ಪೀಕರ್, ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ! Video

ಭಯೋತ್ಪಾದನೆ ಕೊನೆಗೊಳಿಸಿ ನಂತರ ಸಿಂಧೂ ಜಲ ಒಪ್ಪಂದದ ಬಗ್ಗೆ ಮಾತುಕತೆ: ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ

ರಾಮಮಂದಿರಕ್ಕೆ ನಾನು ಕೊಟ್ಟ 1.11 ಲಕ್ಷ ದೇಣಿಗೆ ಹಣ ವಾಪಸ್‌ ಕೊಡಿ, ಇಲ್ಲ ಕೋರ್ಟಿಗೆ ಹೋಗ್ತೀನಿ: ದಿಗ್ವಿಜಯ್ ಸಿಂಗ್

ಭಾರತದಲ್ಲಿ ಇದ್ದಿದ್ದರೆ ಈ ಕೊಳಕು ವ್ಯವಸ್ಥೆಯಲ್ಲಿ ಎಂದಿಗೂ ನಾನು CEO ಆಗುತ್ತಿರಲಿಲ್ಲ: ಇಂದ್ರಾ ನೂಯಿ