ಮನೋಜ್ ಜಾರಂಗೆ 
ದೇಶ

ನಾಳೆ ಮಧ್ಯಾಹ್ನದೊಳಗೆ ಮುಂಬೈನ ಎಲ್ಲಾ ರಸ್ತೆಗಳನ್ನು ತೆರವುಗೊಳಿಸಿ: ಜಾರಂಗೆಗೆ ಬಾಂಬೆ ಹೈಕೋರ್ಟ್

ಮಂಗಳವಾರ ಮಧ್ಯಾಹ್ನದೊಳಗೆ ಪರಿಸ್ಥಿತಿಯನ್ನು ಸರಿಪಡಿಸಬೇಕು ಮತ್ತು ನಗರದ ಎಲ್ಲಾ ಬೀದಿಗಳನ್ನು ಖಾಲಿ ಮಾಡುವಂತೆ ಜಾರಂಗೆ ಹಾಗೂ ಅವರ ಬೆಂಬಲಿಗರಿಗೆ ಹೈಕೋರ್ಟ್ ಆದೇಶಿಸಿದೆ.

ಮುಂಬೈ: ಮನೋಜ್ ಜಾರಂಗೆ ನೇತೃತ್ವದಲ್ಲಿ ನಡೆಯುತ್ತಿರುವ ಮರಾಠಾ ಮೀಸಲಾತಿ ಹೋರಾಟದಿಂದಾಗಿ ಇಡೀ ಮುಂಬೈ ನಗರ ಸ್ತಬ್ಧಗೊಂಡಿದೆ ಮತ್ತು ಪ್ರತಿಭಟನೆ ಶಾಂತಿಯುತವಾಗಿಲ್ಲ ಹಾಗೂ ಎಲ್ಲಾ ಷರತ್ತುಗಳನ್ನು ಉಲ್ಲಂಘಿಸಿದೆ ಎಂದು ಬಾಂಬೆ ಹೈಕೋರ್ಟ್ ಸೋಮವಾರ ಆಕ್ರೋಶ ವ್ಯಕ್ತಪಡಿಸಿದೆ.

ಮುಂಬೈನಲ್ಲಿ ಸಾಮಾನ್ಯ ಸ್ಥಿತಿ ಮರಳಬೇಕೆಂದ ಹೈಕೋರ್ಟ್, ಮಂಗಳವಾರ ಮಧ್ಯಾಹ್ನದೊಳಗೆ ಪರಿಸ್ಥಿತಿಯನ್ನು ಸರಿಪಡಿಸಬೇಕು ಮತ್ತು ನಗರದ ಎಲ್ಲಾ ಬೀದಿಗಳನ್ನು ಖಾಲಿ ಮಾಡುವಂತೆ ಜಾರಂಗೆ ಹಾಗೂ ಅವರ ಬೆಂಬಲಿಗರಿಗೆ ಆದೇಶಿಸಿದೆ.

ಇತರ ಹಿಂದುಳಿದ ವರ್ಗಗಳ(ಒಬಿಸಿ) ಅಡಿಯಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠಾ ಸಮುದಾಯಕ್ಕೆ ಶೇಕಡಾ 10 ರಷ್ಟು ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಜಾರಂಗೆ ಅವರು ಕಳೆದ ಶುಕ್ರವಾರದಿಂದ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಸೋಮವಾರದಿಂದ ಜಾರಂಗೆ ಅವರು ನೀರು ಕುಡಿಯುವುದನ್ನೂ ನಿಲ್ಲಿಸಿದ್ದಾರೆ ಎಂದು ಅವರ ಬೆಂಬಲಿಗರು ಹೇಳಿದ್ದಾರೆ.

ವಿಶೇಷ ವಿಚಾರಣೆಯಲ್ಲಿ ನ್ಯಾಯಮೂರ್ತಿಗಳಾದ ರವೀಂದ್ರ ಘುಗೆ ಮತ್ತು ಗೌತಮ್ ಅಂಕದ್ ಅವರ ಪೀಠವು, ಪ್ರತಿಭಟನಾಕಾರರು ಗೊತ್ತುಪಡಿಸಿದ ಸ್ಥಳವಾದ ಆಜಾದ್ ಮೈದಾನದಲ್ಲೇ ಧರಣಿ ನಡೆಸಬೇಕು. ನಗರದ ಎಲ್ಲಾ ರಸ್ತೆಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದೆ.

ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್(ಸಿಎಸ್‌ಎಂಟಿ) ಮತ್ತು ಚರ್ಚ್‌ಗೇಟ್ ರೈಲು ನಿಲ್ದಾಣ, ಮರೀನ್ ಡ್ರೈವ್ ವಾಯುವಿಹಾರಿ ಮತ್ತು ಹೈಕೋರ್ಟ್ ಕಟ್ಟಡದಂತಹ ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದಾರೆ ಎಂದು ಕೋರ್ಟ್ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಮೃತಪಟ್ಟ ಎಲ್ಲಾ ಏಳು ಮಂದಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ-Video

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ

ಜಾರ್ಖಂಡ್‌ ಸಮೀಪ ಚಾತ್ರಾದಲ್ಲಿ ಪತನಗೊಂಡ ರಾಂಚಿ–ದೆಹಲಿ ಏರ್ ಆಂಬ್ಯುಲೆನ್ಸ್: ಎಲ್ಲಾ 7 ಮಂದಿ ಸಾವು-Video

Road Rage Shocker: ಕ್ಷುಲ್ಲಕ ಜಗಳ, ಕುಟುಂಬದ ಮೇಲೆ ಕಾರು ಹರಿಸಿದ ಡಿಎಂಕೆ ನಾಯಕನ ಪುತ್ರ, ಓರ್ವ ಸಾವು, ಹಲವರಿಗೆ ಗಾಯ

CM ಪಟ್ಟ ಜಟಾಪಟಿ: ಮತ್ತಷ್ಟು ಹರಿತವಾಯ್ತು ದಲಿತ ಸಿಎಂ ಅಸ್ತ್ರ, DKS ವಿರುದ್ಧ ಸಿದ್ದು ಬಣ ಪ್ರತಿತಂತ್ರ..!

SCROLL FOR NEXT