ಕೊಚ್ಚಿ ಕೆನರಾ ಬ್ಯಾಂಕ್ ಆವರಣದಲ್ಲಿ ಬೀಫ್ ಫೆಸ್ಟಿವಲ್ 
ದೇಶ

Kerala: ಕ್ಯಾಂಟೀನ್ ನಲ್ಲಿ ಗೋಮಾಂಸ ನಿಷೇಧ; ಆಕ್ರೋಶಿತ ಸಿಬ್ಬಂದಿಗಳಿಂದ ಬ್ಯಾಂಕ್ ಆವರಣದಲ್ಲೇ beef fest ಆಯೋಜನೆ!

ಕೇರಳದ ಕೊಚ್ಚಿಯ ಕೆನರಾ ಬ್ಯಾಂಕ್ (Canara Bank) ಶಾಖೆಯಲ್ಲಿ ಈ ಘಟನೆ ನಡೆದಿದ್ದು, ರೀಜನಲ್ ಮ್ಯಾನೇಜರ್‌ನಿಂದ ಕ್ಯಾಂಟೀನ್‌ನಲ್ಲಿ ಗೋಮಾಂಸ ನಿಷೇಧಿಸಿದ ಆದೇಶದ ವಿರುದ್ಧ ಬ್ಯಾಂಕ್ ಉದ್ಯೋಗಿಗಳು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದ್ದಾರೆ.

ಕೊಚ್ಚಿನ್: ಕ್ಯಾಂಟೀನ್ ನಲ್ಲಿ ಗೋಮಾಂಸ ನಿಷೇಧಿಸಿದ ಮ್ಯಾನೇಜರ್ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೆನರಾ ಬ್ಯಾಂಕ್ ಸಿಬ್ಬಂದಿ ‘beef fest’ ಆಯೋಜನೆ ಮಾಡಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ.

ಕೇರಳದ ಕೊಚ್ಚಿಯ ಕೆನರಾ ಬ್ಯಾಂಕ್ (Canara Bank) ಶಾಖೆಯಲ್ಲಿ ಈ ಘಟನೆ ನಡೆದಿದ್ದು, ರೀಜನಲ್ ಮ್ಯಾನೇಜರ್‌ನಿಂದ ಕ್ಯಾಂಟೀನ್‌ನಲ್ಲಿ ಗೋಮಾಂಸ ನಿಷೇಧಿಸಿದ ಆದೇಶದ ವಿರುದ್ಧ ಬ್ಯಾಂಕ್ ಉದ್ಯೋಗಿಗಳು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದ್ದಾರೆ.

ಈ ಆದೇಶವನ್ನು ವಿರೋಧಿಸಿ, ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ ಆಫ್ ಇಂಡಿಯಾ (BEFI) ನೇತೃತ್ವದಲ್ಲಿ ಉದ್ಯೋಗಿಗಳು ಬ್ಯಾಂಕ್ ಕಟ್ಟಡದ ಮುಂಭಾಗದಲ್ಲಿ 'ಗೋಮಾಂಸ ಪಾರ್ಟಿ' (Beef Fest) ಆಯೋಜಿಸಿ, ಗೋಮಾಂಸ ಮತ್ತು ಪರೋಟವನ್ನು (Beef Party) ಸೇವಿಸುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

ಈ ಕ್ಯಾಂಟೀನ್‌ನಲ್ಲಿ ವಾರದ ಕೆಲವು ದಿನಗಳಲ್ಲಿ ಗೋಮಾಂಸವನ್ನು ಒಳಗೊಂಡಂತೆ ಸಸ್ಯಾಹಾರಿ ಮತ್ತು ಮಾಂಸಾಹಾರಿ ಖಾದ್ಯಗಳನ್ನು ಸರಬರಾಜು ಮಾಡಲಾಗುತ್ತಿತ್ತು. ಆದರೆ, ಹೊಸದಾಗಿ ನೇಮಕಗೊಂಡ ಮ್ಯಾನೇಜರ್ ತಾನು ಗೋಮಾಂಸ ಸೇವಿಸದ ಕಾರಣ, ಕ್ಯಾಂಟೀನ್‌ನಲ್ಲಿ ಇದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಉದ್ಯೋಗಿಗಳು ದೂರಿದ್ದಾರೆ.

ಮೂಲಗಳ ಪ್ರಕಾರ ಬಿಹಾರ ಮೂಲದ ಅಶ್ವಿನಿ ಕುಮಾರ್ ಎಂಬುವವರು ಇತ್ತೀಚೆಗೆ ಕೇರಳದ ಕೊಚ್ಚಿಯಲ್ಲಿ ಕೆನರಾ ಬ್ಯಾಂಕ್ ಶಾಖೆಗೆ ರೀಜನಲ್ ಮ್ಯಾನೇಜರ್ ಆಗೆ ಬಂದಿದ್ದರು. ಈ ವೇಳೆ ಕಚೇರಿ ಕ್ಯಾಂಟೀನ್ ನಲ್ಲಿ ಗೋಮಾಂಸ ನಿಷೇಧಿಸಿದ್ದರು. ಇದು ಬ್ಯಾಂಕಿನ ಕೆಲ ಸಿಬ್ಬಂದಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ನೇರವಾಗಿ ಸಿಬ್ಬಂದಿಗಳು "ಗೋಮಾಂಸ ಉತ್ಸವ"ವನ್ನು ಆಯೋಜಿಸಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಬ್ಯಾಂಕ್ ಸಿಬ್ಬಂದಿಗಳಿಗೆ BEFI ಸಾಥ್

ಇನ್ನು ಬ್ಯಾಂಕ್ ಮಾನೇಜರ್ ನಡೆಯನ್ನು ಖಂಡಿಸಿದ್ದ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ ಆಫ್ ಇಂಡಿಯಾ (BEFI) ನೌಕರರ ಪ್ರತಿಭಟನೆಗೆ ಸಾಥ್ ನೀಡಿತ್ತು. ಅಲ್ಲದೆ ಈ ಮ್ಯಾನೇಜರ್‌ನ ವಿರುದ್ಧ ಮಾನಸಿಕ ಕಿರುಕುಳ ಮತ್ತು ಅವಮಾನಕರ ವರ್ತನೆಯ ಆರೋಪದ ಮೇಲೆ ಪ್ರತಿಭಟನೆ ಆಯೋಜಿಸಿತ್ತು. ಆದರೆ, ಗೋಮಾಂಸ ನಿಷೇಧದ ಸುದ್ದಿ ತಿಳಿದ ನಂತರ, ಪ್ರತಿಭಟನೆಯ ಗಮನವು ಈ ವಿಷಯಕ್ಕೆ ಕೇಂದ್ರೀಕೃತವಾಯಿತು.

ಈ ಕುರಿತು ಮಾತನಾಡಿರುವ BEFI ನಾಯಕ ಎಸ್.ಎಸ್. ಅನಿಲ್, "ಈ ಬ್ಯಾಂಕ್ ಭಾರತದ ಸಂವಿಧಾನದ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುತ್ತದೆ. ಆಹಾರವು ವೈಯಕ್ತಿಕ ಆಯ್ಕೆಯಾಗಿದೆ. ಭಾರತದಲ್ಲಿ ಪ್ರತಿಯೊಬ್ಬರಿಗೂ ತಾವು ಇಚ್ಛಿಸಿದ ಆಹಾರವನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ. ಯಾರಿಗೂ ಗೋಮಾಂಸವನ್ನು ತಿನ್ನಲು ಒತ್ತಾಯಿಸುತ್ತಿಲ್ಲ, ಆದರೆ ಇದು ನಮ್ಮ ಪ್ರತಿಭಟನೆಯ ರೂಪವಾಗಿದೆ," ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ

ಎರಡು ಗಂಟೆ ಮಳೆ - 20 ಕಿ.ಮೀ. ಟ್ರಾಫಿಕ್ ಜಾಮ್: ಮಿಲೇನಿಯಮ್ ಸಿಟಿ ನಗರಾಭಿವೃದ್ಧಿ ಟ್ರಿಪಲ್ ಎಂಜಿನ್ ಮಾದರಿ: BJP ಕಾಲೆಳೆದ ಕಾಂಗ್ರೆಸ್!

'ಸ್ವಾತಂತ್ರ್ಯ ಹೋರಾಟದಲ್ಲಿ ಯಾರ ಮನೆ ನಾಯಿ ಭಾಗವಹಿಸಿತ್ತೆಂದು ಬಹಿರಂಗ ಪಡಿಸಲಿ: ರಾಜ್ಯ ಸರ್ಕಾರದಲ್ಲಿ ಬಚ್ಚಲುಬಾಯಿ ಮಂತ್ರಿಗಳು!'

SCROLL FOR NEXT