ಕೊಚ್ಚಿ ಕೆನರಾ ಬ್ಯಾಂಕ್ ಆವರಣದಲ್ಲಿ ಬೀಫ್ ಫೆಸ್ಟಿವಲ್ 
ದೇಶ

Kerala: ಕ್ಯಾಂಟೀನ್ ನಲ್ಲಿ ಗೋಮಾಂಸ ನಿಷೇಧ; ಆಕ್ರೋಶಿತ ಸಿಬ್ಬಂದಿಗಳಿಂದ ಬ್ಯಾಂಕ್ ಆವರಣದಲ್ಲೇ beef fest ಆಯೋಜನೆ!

ಕೇರಳದ ಕೊಚ್ಚಿಯ ಕೆನರಾ ಬ್ಯಾಂಕ್ (Canara Bank) ಶಾಖೆಯಲ್ಲಿ ಈ ಘಟನೆ ನಡೆದಿದ್ದು, ರೀಜನಲ್ ಮ್ಯಾನೇಜರ್‌ನಿಂದ ಕ್ಯಾಂಟೀನ್‌ನಲ್ಲಿ ಗೋಮಾಂಸ ನಿಷೇಧಿಸಿದ ಆದೇಶದ ವಿರುದ್ಧ ಬ್ಯಾಂಕ್ ಉದ್ಯೋಗಿಗಳು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದ್ದಾರೆ.

ಕೊಚ್ಚಿನ್: ಕ್ಯಾಂಟೀನ್ ನಲ್ಲಿ ಗೋಮಾಂಸ ನಿಷೇಧಿಸಿದ ಮ್ಯಾನೇಜರ್ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೆನರಾ ಬ್ಯಾಂಕ್ ಸಿಬ್ಬಂದಿ ‘beef fest’ ಆಯೋಜನೆ ಮಾಡಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ.

ಕೇರಳದ ಕೊಚ್ಚಿಯ ಕೆನರಾ ಬ್ಯಾಂಕ್ (Canara Bank) ಶಾಖೆಯಲ್ಲಿ ಈ ಘಟನೆ ನಡೆದಿದ್ದು, ರೀಜನಲ್ ಮ್ಯಾನೇಜರ್‌ನಿಂದ ಕ್ಯಾಂಟೀನ್‌ನಲ್ಲಿ ಗೋಮಾಂಸ ನಿಷೇಧಿಸಿದ ಆದೇಶದ ವಿರುದ್ಧ ಬ್ಯಾಂಕ್ ಉದ್ಯೋಗಿಗಳು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದ್ದಾರೆ.

ಈ ಆದೇಶವನ್ನು ವಿರೋಧಿಸಿ, ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ ಆಫ್ ಇಂಡಿಯಾ (BEFI) ನೇತೃತ್ವದಲ್ಲಿ ಉದ್ಯೋಗಿಗಳು ಬ್ಯಾಂಕ್ ಕಟ್ಟಡದ ಮುಂಭಾಗದಲ್ಲಿ 'ಗೋಮಾಂಸ ಪಾರ್ಟಿ' (Beef Fest) ಆಯೋಜಿಸಿ, ಗೋಮಾಂಸ ಮತ್ತು ಪರೋಟವನ್ನು (Beef Party) ಸೇವಿಸುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

ಈ ಕ್ಯಾಂಟೀನ್‌ನಲ್ಲಿ ವಾರದ ಕೆಲವು ದಿನಗಳಲ್ಲಿ ಗೋಮಾಂಸವನ್ನು ಒಳಗೊಂಡಂತೆ ಸಸ್ಯಾಹಾರಿ ಮತ್ತು ಮಾಂಸಾಹಾರಿ ಖಾದ್ಯಗಳನ್ನು ಸರಬರಾಜು ಮಾಡಲಾಗುತ್ತಿತ್ತು. ಆದರೆ, ಹೊಸದಾಗಿ ನೇಮಕಗೊಂಡ ಮ್ಯಾನೇಜರ್ ತಾನು ಗೋಮಾಂಸ ಸೇವಿಸದ ಕಾರಣ, ಕ್ಯಾಂಟೀನ್‌ನಲ್ಲಿ ಇದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಉದ್ಯೋಗಿಗಳು ದೂರಿದ್ದಾರೆ.

ಮೂಲಗಳ ಪ್ರಕಾರ ಬಿಹಾರ ಮೂಲದ ಅಶ್ವಿನಿ ಕುಮಾರ್ ಎಂಬುವವರು ಇತ್ತೀಚೆಗೆ ಕೇರಳದ ಕೊಚ್ಚಿಯಲ್ಲಿ ಕೆನರಾ ಬ್ಯಾಂಕ್ ಶಾಖೆಗೆ ರೀಜನಲ್ ಮ್ಯಾನೇಜರ್ ಆಗೆ ಬಂದಿದ್ದರು. ಈ ವೇಳೆ ಕಚೇರಿ ಕ್ಯಾಂಟೀನ್ ನಲ್ಲಿ ಗೋಮಾಂಸ ನಿಷೇಧಿಸಿದ್ದರು. ಇದು ಬ್ಯಾಂಕಿನ ಕೆಲ ಸಿಬ್ಬಂದಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ನೇರವಾಗಿ ಸಿಬ್ಬಂದಿಗಳು "ಗೋಮಾಂಸ ಉತ್ಸವ"ವನ್ನು ಆಯೋಜಿಸಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಬ್ಯಾಂಕ್ ಸಿಬ್ಬಂದಿಗಳಿಗೆ BEFI ಸಾಥ್

ಇನ್ನು ಬ್ಯಾಂಕ್ ಮಾನೇಜರ್ ನಡೆಯನ್ನು ಖಂಡಿಸಿದ್ದ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ ಆಫ್ ಇಂಡಿಯಾ (BEFI) ನೌಕರರ ಪ್ರತಿಭಟನೆಗೆ ಸಾಥ್ ನೀಡಿತ್ತು. ಅಲ್ಲದೆ ಈ ಮ್ಯಾನೇಜರ್‌ನ ವಿರುದ್ಧ ಮಾನಸಿಕ ಕಿರುಕುಳ ಮತ್ತು ಅವಮಾನಕರ ವರ್ತನೆಯ ಆರೋಪದ ಮೇಲೆ ಪ್ರತಿಭಟನೆ ಆಯೋಜಿಸಿತ್ತು. ಆದರೆ, ಗೋಮಾಂಸ ನಿಷೇಧದ ಸುದ್ದಿ ತಿಳಿದ ನಂತರ, ಪ್ರತಿಭಟನೆಯ ಗಮನವು ಈ ವಿಷಯಕ್ಕೆ ಕೇಂದ್ರೀಕೃತವಾಯಿತು.

ಈ ಕುರಿತು ಮಾತನಾಡಿರುವ BEFI ನಾಯಕ ಎಸ್.ಎಸ್. ಅನಿಲ್, "ಈ ಬ್ಯಾಂಕ್ ಭಾರತದ ಸಂವಿಧಾನದ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುತ್ತದೆ. ಆಹಾರವು ವೈಯಕ್ತಿಕ ಆಯ್ಕೆಯಾಗಿದೆ. ಭಾರತದಲ್ಲಿ ಪ್ರತಿಯೊಬ್ಬರಿಗೂ ತಾವು ಇಚ್ಛಿಸಿದ ಆಹಾರವನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ. ಯಾರಿಗೂ ಗೋಮಾಂಸವನ್ನು ತಿನ್ನಲು ಒತ್ತಾಯಿಸುತ್ತಿಲ್ಲ, ಆದರೆ ಇದು ನಮ್ಮ ಪ್ರತಿಭಟನೆಯ ರೂಪವಾಗಿದೆ," ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT