ಆದಾಯ ತೆರಿಗೆ 
ದೇಶ

PAN card Scam: ಸಣ್ಣ ದಿನಸಿ ಅಂಗಡಿಯಲ್ಲಿ 141 ಕೋಟಿ ರೂ ಮೌಲ್ಯದ ಮಾರಾಟ; ನೋಟಿಸ್‌ ಕಂಡು ಮಾಲೀಕನಿಗೆ ದಿಗ್ಭ್ರಮೆ!

ಅನಿರೀಕ್ಷಿತ ತೆರಿಗೆ ನೋಟಿಸ್‌ಗಳು ಅಥವಾ ವಸೂಲಾತಿ ಕರೆಗಳನ್ನು ಸ್ವೀಕರಿಸಿದ ನಂತರವೇ ಸಂತ್ರಸ್ತರಿಗೆ ವಂಚನೆ ಮಾಡಿರುವುದು ತಿಳಿಯುತ್ತದೆ.

ಬುಲಂದ್‌ಶಹರ್ (ಉತ್ತರ ಪ್ರದೇಶ): ಬುಲಂದ್‌ಶಹರ್‌ನ ಸಣ್ಣ ದಿನಸಿ ಅಂಗಡಿಯ ಮಾಲೀಕರೊಬ್ಬರು 141 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಮಾರಾಟದ ಕುರಿತು ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಪಡೆದಿದ್ದು, ದೆಹಲಿಯಲ್ಲಿ ಆರು ಕಂಪನಿಗಳನ್ನು ಸ್ಥಾಪಿಸಲು ತಮ್ಮ ಪ್ಯಾನ್ ಕಾರ್ಡ್ ಅನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಖುರ್ಜಾದ ನಯಾಗಂಜ್ ಪ್ರದೇಶದ ನಿವಾಸಿ ಸುಧೀರ್, ತಮ್ಮ ಮನೆಯಿಂದಲೇ ಸಾಧಾರಣ ದಿನಸಿ ಅಂಗಡಿಯನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು.

2022ರಲ್ಲಿ ತನಗೆ ಮೊದಲು ನೋಟಿಸ್ ನೀಡಲಾಗಿತ್ತು. ನಂತರ ನಾನು ತೆರಿಗೆ ಅಧಿಕಾರಿಗಳಿಗೆ ಆ ಕಂಪನಿಗಳೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾಗಿ ವಿವರಿಸಿದರು.

'ಈ ವರ್ಷ ಜುಲೈ 10 ರಂದು, ನಾನು 1,41,38,47,126 ರೂ.ಗಳ ಮಾರಾಟ ಮಾಡಿರುವುದಾಗಿ ಹೇಳುವ ಮತ್ತೊಂದು ನೋಟಿಸ್ ಬಂದಾಗ ನನಗೆ ಆಘಾತವಾಯಿತು. ದೆಹಲಿಯಲ್ಲಿ ಅನೇಕ ಸಂಸ್ಥೆಗಳನ್ನು ಸ್ಥಾಪಿಸಲು ತನ್ನ ಪ್ಯಾನ್ ಅನ್ನು ವಂಚನೆಯಿಂದ ಬಳಸಲಾಗಿದೆ' ಎಂದು ಸುಧೀರ್ ಆರೋಪಿಸಿದರು.

ಖುರ್ಜಾ ಪೊಲೀಸ್ ಠಾಣೆಯ ಉಸ್ತುವಾರಿ ಪಂಕಜ್ ರೈ, ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಬ್ಯಾಂಕ್ ಖಾತೆಗಳನ್ನು ತೆರೆಯಲು, ನಕಲಿ ಕಂಪನಿಗಳನ್ನು ಸ್ಥಾಪಿಸಲು, ಸಾಲಗಳನ್ನು ಪಡೆಯಲು ಅಥವಾ ತೆರಿಗೆಗಳನ್ನು ತಪ್ಪಿಸಲು ಯಾರಾದರೂ ಇನ್ನೊಬ್ಬ ವ್ಯಕ್ತಿಯ ಪ್ಯಾನ್ ವಿವರಗಳನ್ನು ಅಕ್ರಮವಾಗಿ ಬಳಸಿದಾಗ ಪ್ಯಾನ್ ಕಾರ್ಡ್ ವಂಚನೆ ಸಂಭವಿಸುತ್ತದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಅನಿರೀಕ್ಷಿತ ತೆರಿಗೆ ನೋಟಿಸ್‌ಗಳು ಅಥವಾ ವಸೂಲಾತಿ ಕರೆಗಳನ್ನು ಸ್ವೀಕರಿಸಿದ ನಂತರವೇ ಸಂತ್ರಸ್ತರಿಗೆ ವಂಚನೆ ಮಾಡಿರುವುದು ತಿಳಿಯುತ್ತದೆ. ಇಂತಹ ಅಪಾಯಗಳನ್ನು ಕಡಿಮೆ ಮಾಡಲು ಕ್ರೆಡಿಟ್ ಸ್ಕೋರ್ ಅನ್ನು ನಿಯಮಿತವಾಗಿ ಪರಿಶೀಲಿಸಲು ಮತ್ತು ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ತಜ್ಞರು ಸಲಹೆ ನೀಡುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!