ಆದಾಯ ತೆರಿಗೆ 
ದೇಶ

PAN card Scam: ಸಣ್ಣ ದಿನಸಿ ಅಂಗಡಿಯಲ್ಲಿ 141 ಕೋಟಿ ರೂ ಮೌಲ್ಯದ ಮಾರಾಟ; ನೋಟಿಸ್‌ ಕಂಡು ಮಾಲೀಕನಿಗೆ ದಿಗ್ಭ್ರಮೆ!

ಅನಿರೀಕ್ಷಿತ ತೆರಿಗೆ ನೋಟಿಸ್‌ಗಳು ಅಥವಾ ವಸೂಲಾತಿ ಕರೆಗಳನ್ನು ಸ್ವೀಕರಿಸಿದ ನಂತರವೇ ಸಂತ್ರಸ್ತರಿಗೆ ವಂಚನೆ ಮಾಡಿರುವುದು ತಿಳಿಯುತ್ತದೆ.

ಬುಲಂದ್‌ಶಹರ್ (ಉತ್ತರ ಪ್ರದೇಶ): ಬುಲಂದ್‌ಶಹರ್‌ನ ಸಣ್ಣ ದಿನಸಿ ಅಂಗಡಿಯ ಮಾಲೀಕರೊಬ್ಬರು 141 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಮಾರಾಟದ ಕುರಿತು ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಪಡೆದಿದ್ದು, ದೆಹಲಿಯಲ್ಲಿ ಆರು ಕಂಪನಿಗಳನ್ನು ಸ್ಥಾಪಿಸಲು ತಮ್ಮ ಪ್ಯಾನ್ ಕಾರ್ಡ್ ಅನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಖುರ್ಜಾದ ನಯಾಗಂಜ್ ಪ್ರದೇಶದ ನಿವಾಸಿ ಸುಧೀರ್, ತಮ್ಮ ಮನೆಯಿಂದಲೇ ಸಾಧಾರಣ ದಿನಸಿ ಅಂಗಡಿಯನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು.

2022ರಲ್ಲಿ ತನಗೆ ಮೊದಲು ನೋಟಿಸ್ ನೀಡಲಾಗಿತ್ತು. ನಂತರ ನಾನು ತೆರಿಗೆ ಅಧಿಕಾರಿಗಳಿಗೆ ಆ ಕಂಪನಿಗಳೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾಗಿ ವಿವರಿಸಿದರು.

'ಈ ವರ್ಷ ಜುಲೈ 10 ರಂದು, ನಾನು 1,41,38,47,126 ರೂ.ಗಳ ಮಾರಾಟ ಮಾಡಿರುವುದಾಗಿ ಹೇಳುವ ಮತ್ತೊಂದು ನೋಟಿಸ್ ಬಂದಾಗ ನನಗೆ ಆಘಾತವಾಯಿತು. ದೆಹಲಿಯಲ್ಲಿ ಅನೇಕ ಸಂಸ್ಥೆಗಳನ್ನು ಸ್ಥಾಪಿಸಲು ತನ್ನ ಪ್ಯಾನ್ ಅನ್ನು ವಂಚನೆಯಿಂದ ಬಳಸಲಾಗಿದೆ' ಎಂದು ಸುಧೀರ್ ಆರೋಪಿಸಿದರು.

ಖುರ್ಜಾ ಪೊಲೀಸ್ ಠಾಣೆಯ ಉಸ್ತುವಾರಿ ಪಂಕಜ್ ರೈ, ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಬ್ಯಾಂಕ್ ಖಾತೆಗಳನ್ನು ತೆರೆಯಲು, ನಕಲಿ ಕಂಪನಿಗಳನ್ನು ಸ್ಥಾಪಿಸಲು, ಸಾಲಗಳನ್ನು ಪಡೆಯಲು ಅಥವಾ ತೆರಿಗೆಗಳನ್ನು ತಪ್ಪಿಸಲು ಯಾರಾದರೂ ಇನ್ನೊಬ್ಬ ವ್ಯಕ್ತಿಯ ಪ್ಯಾನ್ ವಿವರಗಳನ್ನು ಅಕ್ರಮವಾಗಿ ಬಳಸಿದಾಗ ಪ್ಯಾನ್ ಕಾರ್ಡ್ ವಂಚನೆ ಸಂಭವಿಸುತ್ತದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಅನಿರೀಕ್ಷಿತ ತೆರಿಗೆ ನೋಟಿಸ್‌ಗಳು ಅಥವಾ ವಸೂಲಾತಿ ಕರೆಗಳನ್ನು ಸ್ವೀಕರಿಸಿದ ನಂತರವೇ ಸಂತ್ರಸ್ತರಿಗೆ ವಂಚನೆ ಮಾಡಿರುವುದು ತಿಳಿಯುತ್ತದೆ. ಇಂತಹ ಅಪಾಯಗಳನ್ನು ಕಡಿಮೆ ಮಾಡಲು ಕ್ರೆಡಿಟ್ ಸ್ಕೋರ್ ಅನ್ನು ನಿಯಮಿತವಾಗಿ ಪರಿಶೀಲಿಸಲು ಮತ್ತು ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ತಜ್ಞರು ಸಲಹೆ ನೀಡುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ

ಎರಡು ಗಂಟೆ ಮಳೆ - 20 ಕಿ.ಮೀ. ಟ್ರಾಫಿಕ್ ಜಾಮ್: ಮಿಲೇನಿಯಮ್ ಸಿಟಿ ನಗರಾಭಿವೃದ್ಧಿ ಟ್ರಿಪಲ್ ಎಂಜಿನ್ ಮಾದರಿ: BJP ಕಾಲೆಳೆದ ಕಾಂಗ್ರೆಸ್!

'ಸ್ವಾತಂತ್ರ್ಯ ಹೋರಾಟದಲ್ಲಿ ಯಾರ ಮನೆ ನಾಯಿ ಭಾಗವಹಿಸಿತ್ತೆಂದು ಬಹಿರಂಗ ಪಡಿಸಲಿ: ರಾಜ್ಯ ಸರ್ಕಾರದಲ್ಲಿ ಬಚ್ಚಲುಬಾಯಿ ಮಂತ್ರಿಗಳು!'

SCROLL FOR NEXT