ಕೆ ಕವಿತಾ, ಕೆ ಚಂದ್ರಶೇಖರ್ ರಾವ್ 
ದೇಶ

BRS ಪಕ್ಷದಿಂದ MLC ಕೆ ಕವಿತಾ ಅಮಾನತು; ಪಕ್ಷ ವಿರೋಧಿ ಚಟುವಟಿಕೆ ಆರೋಪ

ಇತ್ತೀಚಿನ ದಿನಗಳಲ್ಲಿ ಕವಿತಾ ಅವರ ನಡವಳಿಕೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳು ಬಿಆರ್‌ಎಸ್‌ಗೆ ಹಾನಿಯನ್ನುಂಟುಮಾಡುತ್ತಿವೆ. ಪಕ್ಷದ ನಾಯಕತ್ವವು ಇದನ್ನು ಗಂಭೀರವಾಗಿ ಪರಿಗಣಿಸಿದೆ.

ಹೈದರಾಬಾದ್: ಪಕ್ಷ ವಿರೋಧಿ ಚಟುವಟಿಕೆಗಳಿಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಬಿಆರ್‌ಎಸ್ ಮಂಗಳವಾರ ತನ್ನ ಎಂಎಲ್‌ಸಿ ಕೆ. ಕವಿತಾ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ.

ಕವಿತಾ ಅವರ ತಂದೆ ಮತ್ತು ಬಿಆರ್‌ಎಸ್ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಕವಿತಾ ಅವರನ್ನು ಅಮಾನತುಗೊಳಿಸಲು ನಿರ್ಧರಿಸಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಟಿ ರವೀಂದರ್ ರಾವ್ ಮತ್ತು ಮತ್ತೋರ್ವ ಪ್ರಧಾನ ಕಾರ್ಯದರ್ಶಿ (ಶಿಸ್ತು ವ್ಯವಹಾರಗಳ ಉಸ್ತುವಾರಿ) ಸೋಮ ಭರತ್ ಕುಮಾರ್ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕವಿತಾ ಅವರ ನಡವಳಿಕೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳು ಬಿಆರ್‌ಎಸ್‌ಗೆ ಹಾನಿಯನ್ನುಂಟುಮಾಡುತ್ತಿವೆ. ಪಕ್ಷದ ನಾಯಕತ್ವವು ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಅದು ಹೇಳಿದೆ.

ಸೆಪ್ಟೆಂಬರ್ 1 ರಂದು, ಕೆ. ಕವಿತಾ ಅವರು, ಕಾಳೇಶ್ವರಂ ಯೋಜನೆಯ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿರುವ ತೆಲಂಗಾಣ ಸರ್ಕಾರದ ನಿರ್ಧಾರಕ್ಕೆ ಪ್ರತಿಕ್ರಿಯಿಸುತ್ತಾ, ಕಾಳೇಶ್ವರಂ ವಿಷಯಕ್ಕೆ ಸಂಬಂಧಿಸಿದಂತೆ ಕೆಸಿಆರ್ ಅವರ ವರ್ಚಸ್ಸಿನ ಮೇಲೆ ಯಾವುದೇ ಕಳಂಕ ಬಂದಿದ್ದರೆ, ಅದಕ್ಕೆ ಬಿಆರ್‌ಎಸ್ ನಾಯಕರಾದ ಹರೀಶ್ ರಾವ್ ಮತ್ತು ಸಂತೋಷ್ ರಾವ್ ಕಾರಣ ಎಂದು ಆರೋಪಿಸಿದರು. ಅವರು ತಮ್ಮ ಮತ್ತು ಕೆಸಿಆರ್ ವಿರುದ್ಧ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

'ಸಿಬಿಐ ತನಿಖೆಯಲ್ಲಿ, ಕೆಸಿಆರ್ ಆರೋಪಮುಕ್ತರಾಗಿ ಹೊರಹೊಮ್ಮುತ್ತಾರೆ. ಈ ವಿಚಾರದಲ್ಲಿ ಕೆಸಿಆರ್ ಕಳಂಕಿತರಾಗಿದ್ದರೆ, ಅದಕ್ಕೆ ಹರೀಶ್ ರಾವ್ ಮತ್ತು ಸಂತೋಷ್ ರಾವ್ ಕಾರಣ. ಅವರು ನನ್ನ ವಿರುದ್ಧ ಹಲವಾರು ಪಿತೂರಿಗಳನ್ನು ನಡೆಸಿದ್ದರೂ, ನಾನು ಸಹಿಸಿಕೊಂಡೆ. ಹರೀಶ್ ಮತ್ತು ಸಂತೋಷ್ ರಾವ್ ಹಿಂದೆ, ಖಂಡಿತವಾಗಿಯೂ ರೇವಂತ್ ರೆಡ್ಡಿ ಇದ್ದಾರೆ. ಹರೀಶ್ ರಾವ್ ಮತ್ತು ಸಂತೋಷ್ ರಾವ್ ಅವರ ಕಾರಣದಿಂದಾಗಿ ಕೆಸಿಆರ್ ಸಿಬಿಐ ತನಿಖೆಯನ್ನು ಎದುರಿಸುತ್ತಿದ್ದಾರೆ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ