ಪ್ರಧಾನಿ ಮೋದಿ  
ದೇಶ

ಮಣಿಪುರ-ಮಿಜೋರಾಂಗೆ ಸೆಪ್ಟೆಂಬರ್ 13 ರಂದು ಪ್ರಧಾನಿ ಮೋದಿ ಭೇಟಿ?

ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದ 28 ತಿಂಗಳ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿ ನೀಡುವ ಸಾಧ್ಯತೆಯಿದೆ.

ನವದೆಹಲಿ: ಸೆಪ್ಟೆಂಬರ್ 13 ರಂದು ಮಿಜೋರಾಂ ಮತ್ತು ಮಣಿಪುರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಲಿದ್ದು, ಎರಡೂ ರಾಜ್ಯಗಳಲ್ಲಿಯೂ ಸಿದ್ಧತೆಗಳು ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಮೊದಲು ಮಿಜೋರಾಂಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಬೈರಾಬಿ-ಸೈರಾಂಗ್ ರೈಲ್ವೆ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಈ ಯೋಜನೆ ಈಶಾನ್ಯದಲ್ಲಿ ಸಂಪರ್ಕವನ್ನು ಹೆಚ್ಚಿಸುವ ಮತ್ತು ಆರ್ಥಿಕ ಏಕೀಕರಣವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು, ಕೇಂದ್ರದ ಪ್ರಮುಖ ಮೂಲಸೌಕರ್ಯ ಯೋಜನೆಯಾಗಿದೆ.

ಹೊಸ ರೈಲು ಸಂಪರ್ಕವು ಐಜ್ವಾಲ್ ಅನ್ನು ಅಸ್ಸಾಂನ ಸಿಲ್ಚಾರ್‌ನೊಂದಿಗೆ ಮತ್ತು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುತ್ತದೆ.

ಮೋದಿ ಭೇಟಿ ಹಿನ್ನೆಲೆಯಲ್ಲಿ ಮಿಜೋರಾಂ ಮುಖ್ಯ ಕಾರ್ಯದರ್ಶಿ ಖಿಲ್ಲಿ ರಾಮ್ ಮೀನಾ ಅವರು, ಭದ್ರತೆ, ಸಂಚಾರ ನಿಯಂತ್ರಣ ಮತ್ತು ಸಾರ್ವಜನಿಕ ಭಾಗವಹಿಸುವಿಕೆ ಸೇರಿದಂತೆ ಸಿದ್ಧತೆಗಳನ್ನು ಪರಿಶೀಲಿಸಲು ಸೋಮವಾರ ಉನ್ನತ ಮಟ್ಟದ ಸಭೆ ನಡೆಸಿದರು.

ಮಿಜೋರಾಂ ಭೇಟಿಯ ನಂತರ, ಪ್ರಧಾನಿ ಮೋದಿಯವರು ಮಣಿಪುರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.

ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದ 28 ತಿಂಗಳ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿ ನೀಡುವ ಸಾಧ್ಯತೆಯಿದೆ. ಮಣಿಪುರಕ್ಕೆ ಮೋದಿ ಭೇಟಿಯು ಇನ್ನಷ್ಟೇ ಅಧಿಕೃತಗೊಳ್ಳಬೇಕಿದೆ. ಇದನ್ನು ಇಂಫಾಲದ ಅಧಿಕಾರಿಗಳು ದೃಢೀಕರಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Kurnool Bus Fire: ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಹೈದರಾಬಾದ್-ಬೆಂಗಳೂರು ಖಾಸಗಿ ಬಸ್ ನಲ್ಲಿ ಭೀಕರ ಬೆಂಕಿ ಅವಘಡ: 21 ಮಂದಿ ಸಜೀವ ದಹನ-Video

ಕರ್ನೂಲ್ ಬಸ್ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ-ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ

ಭಾರತದ ನಂತರ ಇದೀಗ ಅಪ್ಘಾನಿಸ್ತಾನದಿಂದಲೂ 'ಜಲಬಾಂಬ್': ಪಾಕಿಸ್ತಾನ ವಿಲವಿಲ!

ಆಳಂದ: ಕೇವಲ ರೂ.80 ಗೆ ಮತದಾರರ ಹೆಸರು ಡಿಲೀಟ್! ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಮನೆ ಬಳಿ 6,000 ಮತದಾರರ ಸುಟ್ಟ ದಾಖಲೆ ಪತ್ತೆ! ಮೂಲಗಳು

'ಅಹಿಂದ ಕಿರೀಟ'ಕ್ಕಾಗಿ ಕಚ್ಚಾಟ: ಸಿದ್ದರಾಮಯ್ಯ ಸೈದ್ಧಾಂತಿಕ ಉತ್ತರಾಧಿಕಾರಿ ಪಟ್ಟಕ್ಕಾಗಿ ಕಿತ್ತಾಟ! ಒಳಗೊಳಗೆ ಖರ್ಗೆ ಕೊತ-ಕೊತ?

SCROLL FOR NEXT