ಸಾಂದರ್ಭಿಕ ಚಿತ್ರ 
ದೇಶ

Accidental Death Cover: SBI ಸ್ಯಾಲರಿ ಅಕೌಂಟ್ ಹೊಂದಿರುವ ರೈಲ್ವೆ ನೌಕರರಿಗೆ 1 ಕೋಟಿ ರೂ ಮೊತ್ತದ ವಿಮೆ!

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಸಮ್ಮುಖದಲ್ಲಿ ನಡೆದ ಒಪ್ಪಂದದಡಿ, ಎಸ್‌ಬಿಐನಲ್ಲಿ ಸ್ಯಾಲರಿ ಖಾತೆ ಹೊಂದಿರುವ ನೌಕರರು ರೂ. 1 ಕೋಟಿ ಮೊತ್ತದ ಆಕಸ್ಮಿಕ ಮರಣ ವಿಮೆಯನ್ನು ಪಡೆಯುತ್ತಾರೆ ಎಂದು ರೈಲ್ವೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದ.

ನವದೆಹಲಿ: ಭಾರತೀಯ ರೈಲ್ವೇ ತನ್ನ ಉದ್ಯೋಗಿಗಳು ಮತ್ತು ಅವರ ಕುಟುಂಬಗಳಿಗೆ ಮಹತ್ವದ ವಿಮಾ ರಕ್ಷಣೆ ಒದಗಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (MOU) ಸೋಮವಾರ ಸಹಿ ಹಾಕಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಸಮ್ಮುಖದಲ್ಲಿ ನಡೆದ ಒಪ್ಪಂದದಡಿ, ಎಸ್‌ಬಿಐನಲ್ಲಿ ಸ್ಯಾಲರಿ ಖಾತೆ ಹೊಂದಿರುವ ನೌಕರರು ರೂ. 1 ಕೋಟಿ ಮೊತ್ತದ ಆಕಸ್ಮಿಕ ಮರಣ ವಿಮೆಯನ್ನು ಪಡೆಯುತ್ತಾರೆ ಎಂದು ರೈಲ್ವೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದ.

ಕೇಂದ್ರ ಸರ್ಕಾರಿ ನೌಕರರ ಗುಂಪು ವಿಮಾ ಯೋಜನೆ (CGEGIS) ಅಡಿಯಲ್ಲಿ ಪ್ರಸ್ತುತ ಗ್ರೂಪ್ A, B ಮತ್ತು C ನೌಕರರಿಗೆ ಇರುವ ಕ್ರಮವಾಗಿ ರೂ. 1.20 ಲಕ್ಷ, ರೂ. 60,000 ಮತ್ತು ರೂ.30,000 ಮೊತ್ತದ ವಿಮೆ ಗಮನಾರ್ಹವಾಗಿ ರೂ. 1 ಕೋಟಿಗೆ ಹೆಚ್ಚಳವಾಗಲಿದೆ.

ಅಲ್ಲದೇ ಎಸ್‌ಬಿಐನಲ್ಲಿ ವೇತನ ಖಾತೆಯನ್ನು ಹೊಂದಿರುವ ಎಲ್ಲಾ ರೈಲ್ವೆ ಉದ್ಯೋಗಿಗಳು ಈಗ ಯಾವುದೇ ಪ್ರೀಮಿಯಂ ಪಾವತಿಸುವ ಅಥವಾ ಯಾವುದೇ ವೈದ್ಯಕೀಯ ಪರೀಕ್ಷೆಗೆ ಒಳಗಾಗುವ ಅಗತ್ಯವಿಲ್ಲದೇ ರೂ. 10 ಲಕ್ಷ ಮೊತ್ತದ ಸಹಜ ಸಾವಿನ ವಿಮೆಗೂ ಅರ್ಹರಾಗುತ್ತಾರೆ.

ಸುಮಾರು 7 ಲಕ್ಷ ರೈಲ್ವೆ ಉದ್ಯೋಗಿಗಳು ಎಸ್‌ಬಿಐನಲ್ಲಿ ಸ್ಯಾಲರಿ ಖಾತೆ ಹೊಂದಿದ್ದು, ಈ ಒಪ್ಪಂದ ನೌಕರರ ಕಲ್ಯಾಣದತ್ತ ಪ್ರಮುಖ ಹೆಜ್ಜೆಯಾಗಿದೆ. ಇದು ಭಾರತೀಯ ರೈಲ್ವೇ ಮತ್ತು ಎಸ್‌ಬಿಐ ನಡುವಿನ ಕಾಳಜಿ ಮತ್ತು ರಚನಾತ್ಮಕ ಪಾಲುದಾರಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು SBI ಹೇಳಿದೆ.

ರೈಲ್ವೆ ಸಚಿವಾಲಯದ ಪ್ರಕಾರ ಈ ಒಪ್ಪಂದ ಹಲವು ಪೂರಕ ವಿಮಾ ರಕ್ಷಣೆಗಳನ್ನು ಸಹ ಒದಗಿಸುತ್ತದೆ. ಇವುಗಳಲ್ಲಿ ರೂ. 1.60 ಕೋಟಿ ಮೊತ್ತದ ವಿಮಾನ ಅಪಘಾತ ಮರಣ ವಿಮೆ ಜೊತೆಗೆ ರುಪೇ ಡೆಬಿಟ್ ಕಾರ್ಡ್ ಗಳಿಗೆ ಹೆಚ್ಚುವರಿ ರೂ. 1 ಕೋಟಿಗಳ ವೈಯಕ್ತಿಕ ಅಪಘಾತ, ಶಾಶ್ವತ ಅಂಗವೈಕಲ್ಯ ವಿಮೆ ಹಾಗೂ ರೂ. 80ಲಕ್ಷ ಮೊತ್ತದ ವೈಯಕ್ತಿಕ ಅಪಘಾತ, ಶಾಶ್ವತ ಅಥವಾ ಭಾಗಶ: ಅಂಗವೈಕಲ್ಯ ರಕ್ಷಣೆಯೂ ಸೇರಿವೆ.

ಈ ಒಪ್ಪಂದವು ಎಲ್ಲಾ ವರ್ಗದ ಉದ್ಯೋಗಿಗಳಿಗೆ ವಿಶೇಷವಾಗಿ ಗ್ರೂಪ್ ಸಿ ಮುಂಚೂಣಿ ಸಿಬ್ಬಂದಿಗೆ ಪ್ರಯೋಜನವಾಗುವಂತೆ ರೂಪಿಸಲಾಗಿದೆ. ಆರ್ಥಿಕ ಭದ್ರತೆ ಹೆಚ್ಚಿಸುವ ಮೂಲಕ ಭಾರತೀಯ ರೈಲ್ವೆಯ ಬೆನ್ನೆಲುಬು ಆಗಿರುವ ಕಾರ್ಯಪಡೆ ಬೆಂಬಲಿಸುವುದು ಈ ಒಪ್ಪಂದದ ಗುರಿಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ

ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಮೃತಪಟ್ಟ ಎಲ್ಲಾ ಏಳು ಮಂದಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ-Video

ಸಾಮೂಹಿಕ ಅತ್ಯಾಚಾರ: ಕೊನೆಗೂ ಮೌನ ಮುರಿದ ಸಂತ್ರಸ್ಥೆ, 'ನ್ಯಾಯಬೇಕು.. ನನ್ನಂತೆಯೇ ಸಾಕಷ್ಟು ಯುವತಿಯರಿಗೆ ದೌರ್ಜನ್ಯ'

T20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ Shimron Hetmyer ಸಿಡಿಲಬ್ಬರದ ಬ್ಯಾಟಿಂಗ್, 17 ವರ್ಷಗಳ ಹಿಂದಿನ ಕ್ರಿಸ್ ಗೇಯ್ಲ್ ದಾಖಲೆ ಉಡೀಸ್!

ಜಾರ್ಖಂಡ್‌ ಸಮೀಪ ಚಾತ್ರಾದಲ್ಲಿ ಪತನಗೊಂಡ ರಾಂಚಿ–ದೆಹಲಿ ಏರ್ ಆಂಬ್ಯುಲೆನ್ಸ್: ಎಲ್ಲಾ 7 ಮಂದಿ ಸಾವು-Video

SCROLL FOR NEXT