ಯಮುನಾ ನದಿ 
ದೇಶ

ದೆಹಲಿಯಲ್ಲಿ ಭಾರೀ ಮಳೆ: ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ ನದಿ; ತಗ್ಗು ಪ್ರದೇಶಗಳು ಜಲಾವೃತ! Video

ಮಂಗಳವಾರ ಬೆಳಿಗ್ಗೆ ಯಮುನಾ ನದಿಯ ನೀರಿನ ಮಟ್ಟ 205.81 ಮೀಟರ್‌ಗೆ ಏರಿದ್ದು, ಅಪಾಯದ ಮಟ್ಟ (205.33)ವನ್ನು ದಾಟಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಯಮುನಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪ್ರದೇಶದ ಕೆಲವು ಭಾಗಗಳಲ್ಲಿದ್ದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ನದಿ ಉಕ್ಕಿ ಹರಿಯುತ್ತಿದ್ದಂತೆ ಯಮುನಾ ಬಜಾರ್‌ನಂತಹ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವಿ ಮನೆಗಳ ನೆಲ ಮಹಡಿಗಳು ಜಲಾವೃತಗೊಂಡಿವೆ. ವಸ್ತುಗಳು ಹಾನಿಗೊಂಡಿವೆ ಎಂದು ವರದಿಗಳು ತಿಳಿಸಿವೆ.

ಕೇಂದ್ರ ಜಲ ಆಯೋಗದ (ಸಿಡಬ್ಲ್ಯೂಸಿ) ಪ್ರಕಾರ, ಬೆಳಿಗ್ಗೆ 9 ಗಂಟೆಗೆ, ಹಳೆಯ ಯಮುನಾ ಸೇತುವೆಯಲ್ಲಿ (ಒವೈಬಿ) ನದಿಯ ನೀರು 205.81 ಮೀಟರ್‌ನಲ್ಲಿ ಹರಿಯುತ್ತಿದ್ದು, ಅಪಾಯದ ಮಟ್ಟವನ್ನು 205.33 ಮೀಟರ್ ಮೀರಿದೆ ಎಂದು ತಿಳಿದುಬಂದಿದೆ.

ಈ ಮಟ್ಟವು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದ್ದು, ರಾತ್ರಿ 8 ಗಂಟೆಗೆ 206.41 ಮೀಟರ್ ತಲುಪವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಬೆಳಿಗ್ಗೆ 8 ಗಂಟೆಗೆ ಬಿಡುಗಡೆಯಾದ ಮಾಹಿತಿಯ ಪ್ರಕಾರ, ಹಥ್ನಿ ಕುಂಡ್ ಬ್ಯಾರೇಜ್‌ನಿಂದ 1.76 ಲಕ್ಷ ಕ್ಯೂಸೆಕ್‌ಗಳು, ವಜೀರಾಬಾದ್ ಬ್ಯಾರೇಜ್‌ನಿಂದ 69,210 ಕ್ಯೂಸೆಕ್‌ಗಳು ಮತ್ತು ಓಖ್ಲಾ ಬ್ಯಾರೇಜ್‌ನಿಂದ 73,619 ಕ್ಯೂಸೆಕ್‌ಗಳು ನೀರಿನ್ನು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ನದಿಯು ಅಪಾಯ ಮಟ್ಟ ಮೀರಿ ಹರಿಯಲು ಕಾರಣವಾಗಿದೆ ಎಂದು ತಿಳಿದುಬಂದಿದೆ.

ಇಂದು ಬೆಳಿಗ್ಗೆ ಓಖ್ಲಾದ ಎಲ್ಲಾ ಗೇಟ್‌ಗಳನ್ನು ತೆರೆಯಲಾಗಿದ್ದು, ಯಮುನಾ ಪೂರ್ಣವಾಗಿ ಹರಿಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮಯೂರ್ ವಿಹಾರ್, ಹತ್ತಿರದ ವಸತಿ ಪ್ರದೇಶಗಳ ಮೇಲೆ ಹೆಚ್ಚು ಪರಿಣಾಮ ಬೀರಿವೆ ಎಂದು ತಿಳಿದುಬಂದಿದೆ. ಸರ್ಕಾರ ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದು, ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುತ್ತಿದೆ ಎಂದು ವರದಿಗಳು ತಿಳಿಸಿವೆ.

ದೋಣಿಗಳ ಮೂಲಕ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಪ್ರವಾಹದ ಅಪಾಯವಿರುವ ಪ್ರದೇಶಗಳನ್ನು ಖಾಲಿ ಮಾಡುವಂತೆ ಜನರಿಗೆ ಒತ್ತಾಯಿಸಲಾಗುತ್ತಿದೆ. ಪರಿಸ್ಥಿತಿ ಎದುರಿಸಲು ಸನ್ನದ್ಧರಾಗುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದ್ವೇಷ ಭಾಷಣ, ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಅನುಮೋದನೆ

ಎಸ್‌ಐಆರ್ ಕರ್ತವ್ಯಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆಗೆ ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ; ಒತ್ತಡ ಕಡಿಮೆ ಮಾಡಲು ಆದೇಶ

ಅಗತ್ಯ ವಸ್ತುಗಳ ಮೇಲೆ ಆರೋಗ್ಯ, ರಾಷ್ಟ್ರೀಯ ಭದ್ರತಾ ಸೆಸ್ ಇಲ್ಲ: ರಾಜ್ಯಗಳೊಂದಿಗೆ ಆದಾಯ ಹಂಚಿಕೆ- ನಿರ್ಮಲಾ ಸೀತಾರಾಮನ್

Video: 'ದೇಶದ ಅತ್ಯಂತ ಭ್ರಷ್ಟ 5 ರಾಜ್ಯಗಳಲ್ಲಿ ಕರ್ನಾಟಕ, ನಿಯಂತ್ರಿಸದಿದ್ದರೆ ಭವಿಷ್ಯಕ್ಕೇ ಅಪಾಯ': ಲೋಕಾಯುಕ್ತ

ಇಂಡಿಗೋದಲ್ಲಿ ಭಾರಿ ಅಸ್ತವ್ಯಸ್ತತೆ; ಗುರುವಾರ 300ಕ್ಕೂ ಹೆಚ್ಚು ದೇಶಿ, ಅಂತರರಾಷ್ಟ್ರೀಯ ವಿಮಾನಗಳು ರದ್ದು

SCROLL FOR NEXT