ಕೆ.ಸಿ. ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ  
ದೇಶ

ತೆಲಂಗಾಣ: ಪಕ್ಷದಿಂದ ಅಮಾನತು ಬೆನ್ನಲ್ಲೇ BRS, MLC ಸ್ಥಾನಕ್ಕೆ KCR ಪುತ್ರಿ ಕವಿತಾ ರಾಜೀನಾಮೆ

ಕವಿತಾ ಅವರ ಇತ್ತೀಚಿನ ನಡೆ ಮತ್ತು ಅವರ ಪಕ್ಷ ವಿರೋಧಿ ಚಟುವಟಿಕೆಗಳು ಬಿಆರ್‌ಎಸ್‌ಗೆ ಇರಿಸುಮುರಿಸು ಉಂಟು ಮಾಡಿದ್ದವು.

ಹೈದರಾಬಾದ್: ತೆಲಂಗಾಣದ ಬಿಆರ್‌ಎಸ್ ಪಕ್ಷದಿಂದ ಅಮಾನತುಗೊಂಡಿದ್ದ ಕೆ.ಸಿ. ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರು ಪಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಕೆ ಕವಿತಾ ಅವರನ್ನು ಭಾರತ ರಾಷ್ಟ್ರ ಸಮಿತಿ ಪಕ್ಷದಿಂದ ಮಂಗಳವಾರ ಪಕ್ಷದ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ಅವರು ಅಮಾನತುಗೊಳಿಸಿದ್ದರು.

ಕವಿತಾ ಅವರ ಇತ್ತೀಚಿನ ನಡೆ ಮತ್ತು ಅವರ ಪಕ್ಷ ವಿರೋಧಿ ಚಟುವಟಿಕೆಗಳು ಬಿಆರ್‌ಎಸ್‌ಗೆ ಇರಿಸುಮುರಿಸು ಉಂಟು ಮಾಡಿದ್ದವು. ಇದರಿಂದಾಗಿ ಅವರನ್ನು ಅಮಾನತು ಮಾಡುವ ನಿರ್ಧಾರವನ್ನು ಪಕ್ಷ ತೆಗೆದುಕೊಂಡಿದೆ’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಟಿ.ರವೀಂದರ್ ರಾವ್‌ ಅವರು ಹೇಳಿದ್ದರು.

ಇದರ ಬೆನ್ನಲ್ಲೇ ಪಕ್ಷ ಹಾಗೂ ಎಂಎಲ್'ಸಿ ಸ್ಥಾನಕ್ಕೆ ಕವಿತಾ ಅವರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಬೆಂಬಲಿಗರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹರೀಶ್ ರಾವ್ ಅವರು ಕೆಸಿಆರ್ ಕುಟುಂಬದ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರೊಂದಿಗೆ ಕೈಜೋಡಿಸಿದ್ದಾರೆ, ಈ ಪಿತೂರಿಗಳ ಬಗ್ಗೆ ನನ್ನ ಸಹೋದರ ಮತ್ತು ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆ ಟಿ ರಾಮರಾವ್ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.

ನಾನು ಯಾವುದೇ ಹುದ್ದೆಗಳಿಗೆ ಎಂದಿಗೂ ಆಕಾಂಕ್ಷಿಯಾಗಿರಲಿಲ್ಲ. (ಶಾಸಕ ಮಂಡಳಿ) ಅಧ್ಯಕ್ಷರಿಗೆ ರಾಜೀನಾಮೆ ಪತ್ರವನ್ನು ಕಳುಹಿಸುತ್ತಿದ್ದೇನೆ. ಬಿಆರ್‌ಎಸ್‌ನ ಪ್ರಾಥಮಿಕ ಸದಸ್ಯತ್ವಕ್ಕೂ ನಾನು ರಾಜೀನಾಮೆ ಕಳುಹಿಸುತ್ತಿದ್ದೇನೆಂದು ಹೇಳಿದ್ದಾರೆ.

ಇದೇ ವೇಳೆ ಕಾಳೇಶ್ವರಂ ನೀರಾವರಿ ಯೋಜನೆಯಲ್ಲಿ ಕೇಳಿ ಬಂದ ಅಕ್ರಮ ಕೂಡ ಹರೀಶ್ ರಾವ್ ಮತ್ತು ಸಂತೋಷ್ ರಾವ್ ಅವರೇ ನಡೆಸಿದ್ದು ಎಂದೂ ಕವಿತಾ ಆರೋಪಿಸಿದ್ದಾರೆ.

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಆರೋಪದಡಿ ಬಂಧಿತರಾಗಿದ್ದ ಕವಿತಾ ಅವರು ಸದ್ಯ ಸುಪ್ರೀಂ ಕೋರ್ಟ್‌ ಮಂಜೂರು ಮಾಡಿದ ಜಾಮೀನಿನ ಮೇಲೆ ಹೊರಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

I-PAC ಮೇಲೆ ಇಡಿ ದಾಳಿ ಖಂಡಿಸಿ ಅಮಿತ್ ಶಾ ಕಚೇರಿ ಹೊರಗೆ ಪ್ರತಿಭಟನೆ: ಟಿಎಂಸಿ ಸಂಸದರ ಬಂಧನ-Video

ಮಿನಿಯಾಪೊಲಿಸ್ ಶೂಟಿಂಗ್: ICE ಅಧಿಕಾರಿಗಳಿಂದ ಗುಂಡಿಟ್ಟು ಮಹಿಳೆ ಹತ್ಯೆ, ‘ಸ್ವಯಂರಕ್ಷಣೆ ಕ್ರಮ’ ಎಂದು ಟ್ರಂಪ್ ಸಮರ್ಥನೆ

"ನನಗೆ ಯಾವುದೇ ಅಂತಾರಾಷ್ಟ್ರೀಯ ಕಾನೂನುಗಳೂ ಬೇಕಿಲ್ಲ"- ಗ್ರೀನ್ ಲ್ಯಾಂಡ್ ವಶದ ಬಗ್ಗೆ ಟ್ರಂಪ್ ಸುಳಿವು

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ'- ಅಮೆರಿಕ ವಾಣಿಜ್ಯ ಕಾರ್ಯದರ್ಶಿ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ; ಸಿದ್ದರಾಮಯ್ಯ ತೀವ್ರ ಆಕ್ರೋಶ

SCROLL FOR NEXT