ಗುರುಗ್ರಾಮದ ಟ್ರಾಫಿಕ್ ಜಾಮ್ 
ದೇಶ

ಗುರುಗ್ರಾಮದಲ್ಲಿ 'ಹೊಸ ಬಾಹುಬಲಿಯ ದರ್ಶನ! 'ಟ್ರಾಫಿಕ್ ಜಾಮ್' ನಿಂದ ತಪ್ಪಿಸಿಕೊಳ್ಳಲು ಮಾಡಿದ್ದೇನು? ಈ Video ನೋಡಿ...

ಇಬ್ಬರು ವ್ಯಕ್ತಿಗಳು ಸ್ಕೂಟರ್ ನ್ನು ಈ ರೀತಿ ಎತ್ತಿಕೊಂಡು ಹೋಗುವ ದೃಶ್ಯ ನೋಡಿ ಅಲ್ಲಿದ್ದವರು ನಿಬ್ಬೆರಗಿನಿಂದ ನೋಡುತ್ತಿದ್ದರು.

ಗುರುಗ್ರಾಮ: ದೆಹಲಿ-ಎನ್‌ಸಿಆರ್‌ನಲ್ಲಿ ನಿರಂತರ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಗುರುಗ್ರಾಮ್-ದೆಹಲಿ ಹೆದ್ದಾರಿಯಲ್ಲಿ ಕಿ.ಮಿ. ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಈ ಮಧ್ಯೆ ವ್ಯಕ್ತಿಯೊಬ್ಬ ಟ್ರಾಫಿಕ್ ಜಾಮ್ ನಿಂದ ತಪ್ಪಿಸಿಕೊಳ್ಳಲು ಮಾಡಿರುವ ಕೆಲಸದ ವಿಡಿಯೋವೊಂದು ವೈರಲ್ ಆಗಿದೆ. ಈ ವ್ಯಕ್ತಿ ಇನ್ನೋಬ್ಬರ ಸಹಾಯದಿಂದ ತನ್ನ ಹೆಗಲ ಮೇಲೆ ಸ್ಕೂಟರ್ ನ್ನು ಎತ್ತಿಕೊಂಡು ವಾಹನಗಳ ನಡುವೆ ಸಾಗುತ್ತಿರುವುದು ಕಂಡುಬಂದಿದೆ.

ಇಬ್ಬರು ವ್ಯಕ್ತಿಗಳು ಸ್ಕೂಟರ್ ನ್ನು ಈ ರೀತಿ ಎತ್ತಿಕೊಂಡು ಹೋಗುವ ದೃಶ್ಯ ನೋಡಿ ಅಲ್ಲಿದ್ದವರು ನಿಬ್ಬೆರಗಿನಿಂದ ನೋಡುತ್ತಿದ್ದರು.

ಇನ್ಸಾಟಾಗ್ರಾಮ್ ನಲ್ಲಿ ಬಳಕೆದಾರರೊಬ್ಬರು ಗುರುಗ್ರಾಮ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಇದೊಂದೇ ಪರಿಹಾರ ಎಂದು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ತಕ್ಷಣ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಯುದ್ಧದ ಕುರಿತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಮೋದಿ ಮಹತ್ವದ ಮಾತುಕತೆ

ಗುಜರಾತ್: ರಾಹುಲ್ ಗಾಂಧಿ ಪರ ವಕಾಲತ್ತು ವಹಿಸಿದ್ದ ವಕೀಲ ಫಿರೋಜ್ ಪಠಾಣ್ ಮೃತದೇಹ ತಾಪಿ ನದಿಯ ದಡದಲ್ಲಿ ಪತ್ತೆ!

ಭಾರತಕ್ಕೆ ಉತ್ತಮ ವಿರೋಧಪಕ್ಷಕ್ಕಾಗಿ ಅಭಿಯಾನ ಅಗತ್ಯ: ಸೀತಾರಾಮನ್

ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನ

SCROLL FOR NEXT