ಯಮುನಾ ನದಿ ನೀರು ಜೈತ್‌ಪುರ ಯಮುನಾ ಪುಷ್ಟಾ ಪ್ರದೇಶವನ್ನು ಪ್ರವೇಶಿಸಿದ ನಂತರ ಜಲಾವೃತಗೊಂಡ ವಸತಿ ಪ್ರದೇಶ 
ದೇಶ

ದೆಹಲಿ: ಅಪಾಯದ ಮಟ್ಟ ಮೀರಿ ಹರಿದ ಯಮುನೆ; ದೆಹಲಿ ಸಚಿವಾಲಯಕ್ಕೆ ಪ್ರವಾಹ ಭೀತಿ; Video

ದೆಹಲಿ ಮುಖ್ಯಮಂತ್ರಿ, ಸಂಪುಟ ಸಚಿವರು ಮತ್ತು ಪ್ರಮುಖ ಅಧಿಕಾರಿಗಳ ಕಚೇರಿಗಳನ್ನು ಹೊಂದಿರುವ ದೆಹಲಿ ಸಚಿವಾಲಯದ ಬಳಿ ಪ್ರವಾಹ ನೀರು ತಲುಪಿದೆ.

ನವದೆಹಲಿ: ದೆಹಲಿಯ ಹಳೆಯ ರೈಲ್ವೆ ಸೇತುವೆಯಲ್ಲಿ ಯಮುನಾ ನದಿಯ ನೀರಿನ ಮಟ್ಟ ಇಂದು ಬೆಳಗ್ಗೆ 7 ಗಂಟೆಗೆ 207.48 ಮೀಟರ್‌ನಷ್ಟಿತ್ತು, ಉಕ್ಕಿ ಹರಿಯುವ ನದಿಯಿಂದ ಬರುವ ಪ್ರವಾಹದ ನೀರು ಹತ್ತಿರದ ಪ್ರದೇಶಗಳನ್ನು ಮುಳುಗಿಸಿವೆ.

ಅಧಿಕೃತ ಮಾಹಿತಿಯ ಪ್ರಕಾರ, ಬೆಳಗ್ಗೆ 6 ರಿಂದ 7 ರವರೆಗೆ 207.48 ಮೀಟರ್‌ನಲ್ಲಿ ನೀರಿನ ಮಟ್ಟ ಸ್ಥಿರವಾಗಿತ್ತು. ಬೆಳಗ್ಗೆ 5 ಗಂಟೆಗೆ 207.47 ಮೀಟರ್‌ನಷ್ಟಿದ್ದರೂ, 6 ಗಂಟೆಗೆ 207.48 ಮೀಟರ್‌ನಷ್ಟಿತ್ತು. ಅಧಿಕಾರಿಗಳ ಪ್ರಕಾರ, ನಸುಕಿನ ಜಾವ 2 ಗಂಟೆಯಿಂದ 5 ರವರೆಗೆ ನೀರಿನ ಮಟ್ಟ 207.47 ಮೀಟರ್‌ನಲ್ಲಿ ಸ್ಥಿರವಾಗಿತ್ತು.

ದೆಹಲಿ ಮುಖ್ಯಮಂತ್ರಿ, ಸಂಪುಟ ಸಚಿವರು ಮತ್ತು ಪ್ರಮುಖ ಅಧಿಕಾರಿಗಳ ಕಚೇರಿಗಳನ್ನು ಹೊಂದಿರುವ ದೆಹಲಿ ಸಚಿವಾಲಯದ ಬಳಿ ಪ್ರವಾಹ ನೀರು ತಲುಪಿದೆ. ವಾಸುದೇವ್ ಘಾಟ್ ಸುತ್ತಮುತ್ತಲಿನ ಪ್ರದೇಶಗಳು ಸಹ ಜಲಾವೃತಗೊಂಡವು.

ಕಾಶ್ಮೀರಿ ಗೇಟ್ ಬಳಿಯ ಶ್ರೀ ಮಾರ್ಗಟ್ ವಾಲೆ ಹನುಮಾನ್ ಬಾಬಾ ಮಂದಿರಕ್ಕೂ ಪ್ರವಾಹ ನೀರು ತಲುಪಿತು. ನದಿಯ ಹರಿವು ಮತ್ತು ಸಂಭಾವ್ಯ ಪ್ರವಾಹ ಅಪಾಯಗಳನ್ನು ಪತ್ತೆಹಚ್ಚಲು ಹಳೆಯ ರೈಲ್ವೆ ಸೇತುವೆ ಪ್ರಮುಖ ವೀಕ್ಷಣಾ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ.

ಕಂದಾಯ ಇಲಾಖೆಯ ಪ್ರಕಾರ, 8,018 ಜನರನ್ನು ಡೇರೆಗಳಿಗೆ ಸ್ಥಳಾಂತರಿಸಲಾಗಿದ್ದು, 2,030 ಜನರನ್ನು 13 ಶಾಶ್ವತ ಆಶ್ರಯಗಳಿಗೆ ಸ್ಥಳಾಂತರಿಸಲಾಗಿದೆ. ಪರಿಸ್ಥಿತಿಯ ಬಗ್ಗೆ ದೆಹಲಿ ಸರ್ಕಾರ 24/7 ನಿಗಾ ಇಡುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video