ಸಂಗ್ರಹ ಚಿತ್ರ 
ದೇಶ

34 ಮಾನವ ಬಾಂಬ್‌, 400 ಕೆಜಿ RDX, 14 ಪಾಕ್ ಭಯೋತ್ಪಾದಕರು! ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ; ಎಲ್ಲೆಡೆ ಕಟ್ಟೆಚ್ಚರ!

ಲಷ್ಕರ್-ಎ-ಜಿಹಾದಿ ಎಂದು ಕರೆದುಕೊಳ್ಳುವ ಸಂಘಟನೆಯು 14 ಪಾಕಿಸ್ತಾನಿ ಭಯೋತ್ಪಾದಕರು ಭಾರತವನ್ನು ಪ್ರವೇಶಿಸಿದ್ದಾರೆ ಮತ್ತು ಸ್ಫೋಟಗಳಿಗೆ 400 ಕೆಜಿ ಆರ್‌ಡಿಎಕ್ಸ್ ಬಳಸಲಾಗುವುದು ಎಂದು ಹೇಳಿದೆ.

ಮುಂಬಯಿ: 34 ವಾಹನಗಳಲ್ಲಿ 400 ಕೆಜಿ ಆರ್​ಡಿಎಕ್ಸ್​ ಹೊತ್ತ ಮಾನವ ಬಾಂಬ್​ಗಳನ್ನು ಇರಿಸಲಾಗಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಸಂಚಾರ ಪೊಲೀಸ್​ ಠಾಣೆಗೆ ಬೆದರಿಕೆ ವಾಟ್ಸಾಪ್ ಸಂದೇಶ ಬಂದಿದ್ದು ನಗರದ್ಯಾಂತ ಭಾರೀ ಕಟ್ಟೆಚ್ಚರವಹಿಸಿದ್ದಾರೆ.

ಲಷ್ಕರ್-ಎ-ಜಿಹಾದಿ ಎಂಬ ಸಂಘಟನೆಯಿಂದ ಈ ಬೆದರಿಕೆ ಬಂದಿದ್ದು, ರಾಜ್ಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮಾನವ ಬಾಂಬ್‌ಗಳನ್ನು ಹೊತ್ತೊಯ್ಯುವ 34 ಕಾರುಗಳನ್ನು ಬಳಸಿ 400 ಕೆಜಿ ಆರ್‌ಡಿಎಕ್ಸ್ ಸ್ಫೋಟಿಸಿ ಒಂದು ಕೋಟಿ ಜನರನ್ನು ಕೊಲ್ಲಲಾಗುವುದು ಎಂದು ಬೆದರಿಕೆ ಸಂದೇಶದಲ್ಲಿ ಹೇಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಷ್ಕರ್-ಎ-ಜಿಹಾದಿ ಎಂದು ಕರೆದುಕೊಳ್ಳುವ ಸಂಘಟನೆಯು 14 ಪಾಕಿಸ್ತಾನಿ ಭಯೋತ್ಪಾದಕರು ಭಾರತವನ್ನು ಪ್ರವೇಶಿಸಿದ್ದಾರೆ ಮತ್ತು ಸ್ಫೋಟಗಳಿಗೆ 400 ಕೆಜಿ ಆರ್‌ಡಿಎಕ್ಸ್ ಬಳಸಲಾಗುವುದು ಎಂದು ಹೇಳಿದೆ.

ಮುಂಬೈ ಪೊಲೀಸರು ಜಾಗರೂಕರಾಗಿದ್ದಾರೆ ಮತ್ತು ಇಡೀ ರಾಜ್ಯದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಬೆದರಿಕೆಯ ಪ್ರತಿಯೊಂದು ಸಾಧ್ಯತೆ ಮತ್ತು ಮೂಲವನ್ನು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಳೆ ಮುಂಬೈನಲ್ಲಿ ಗಣೇಶ ವಿಸರ್ಜನೆ ಸಮಾರಂಭ. ಅನಂತ ಚತುರ್ದಶಿ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Ashoka emblem ಧ್ವಂಸ ಪ್ರಕರಣ: 50 ಮಂದಿ ಪೊಲೀಸ್ ವಶಕ್ಕೆ! ಬುರ್ಖಾಧಾರಿ ಮಹಿಳೆಯರಿಗೂ ಸಂಕಷ್ಟ!

ಬಿಹಾರದ ಮಹಾಮೈತ್ರಿಕೂಟಕ್ಕೆ ಹೊಸ ಪಕ್ಷಗಳ ಸೇರ್ಪಡೆ; ಸೀಟು ಹಂಚಿಕೆ ಮತ್ತಷ್ಟು ಕಠಿಣ!

ವಿಜಯಪುರ: ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ; ಬಿಡಬೇಡ ಖಲಾಸ್ ಮಾಡು, ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆಗೆ ಪತ್ನಿ ಯತ್ನ!

ಕತ್ರಾ-ಶ್ರೀನಗರ ವಂದೇ ಭಾರತ್‌ನಲ್ಲಿ ಸ್ಥಳೀಯ ಸಸ್ಯಾಹಾರಿ ಪಾಕಪದ್ಧತಿ ಪರಿಚಯಿಸಿದ IRCTC

Danger sunroof; ಬಾಲಕನ ತಲೆಗೆ ಬಡಿದ overhead barricade, ಮುಂದೇನಾಯ್ತು..? Video!

SCROLL FOR NEXT