ಖಾಸಗಿ ವಿಮಾನಯಾನ ಸಂಸ್ಥೆಯ ಪೈಲಟ್ 
ದೇಶ

ದೆಹಲಿ: 'ಸ್ಪೈ ಕ್ಯಾಮೆರಾ' ಮೂಲಕ ಮಹಿಳೆಯ ಆಕ್ಷೇಪಾರ್ಹ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಪೈಲಟ್ ಬಂಧನ

ಆರೋಪಿಯನ್ನು ಉತ್ತರ ಪ್ರದೇಶದ ಆಗ್ರಾದ ಸಿವಿಲ್ ಲೈನ್ಸ್ ಪ್ರದೇಶದ ನಿವಾಸಿ ಮೋಹಿತ್ ಪ್ರಿಯದರ್ಶಿ (31) ಎಂದು ಗುರುತಿಸಲಾಗಿದೆ.

ನವದೆಹಲಿ: ಮಹಿಳೆಯೊಬ್ಬರ ಆಕ್ಷೇಪಾರ್ಹ ವಿಡಿಯೋ ರೆಕಾರ್ಡ್ ಮಾಡಿದ್ದಕ್ಕಾಗಿ ದೆಹಲಿಯಲ್ಲಿ ಖಾಸಗಿ ವಿಮಾನಯಾನ ಸಂಸ್ಥೆಯ ಪೈಲಟ್ ಒಬ್ಬನನ್ನು ಬಂಧಿಸಲಾಗಿದೆ. ಆತನಿಂದ ಲೈಟರ್ ಆಕಾರದ ಸಣ್ಣ, ಗುಪ್ತ ಸ್ಪೈ ಕ್ಯಾಮೆರಾವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯನ್ನು ಉತ್ತರ ಪ್ರದೇಶದ ಆಗ್ರಾದ ಸಿವಿಲ್ ಲೈನ್ಸ್ ಪ್ರದೇಶದ ನಿವಾಸಿ ಮೋಹಿತ್ ಪ್ರಿಯದರ್ಶಿ (31) ಎಂದು ಗುರುತಿಸಲಾಗಿದೆ.

ಆಗಸ್ಟ್ 30 ರಂದು ಮಹಿಳೆಯೊಬ್ಬರು ದಾಖಲಿಸಿದ ದೂರಿನ ಮೇರೆಗೆ ದೆಹಲಿಯ ನೈಋತ್ಯ ಜಿಲ್ಲೆಯ ಕಿಶನ್‌ಗಢ ಪೊಲೀಸ್ ಠಾಣೆಯ ಸಿಬ್ಬಂದಿ ಆತನನ್ನು ಬಂಧಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಕಿಶನ್‌ಗಢ ಗ್ರಾಮದ ನಿವಾಸಿಯಾಗಿರುವ ದೂರುದಾರರು, ಆಗಸ್ಟ್ 30 ರಂದು ರಾತ್ರಿ 10.20 ರ ಸುಮಾರಿಗೆ ಕಿಶನ್‌ಗಢ ಗ್ರಾಮದ ಶನಿ ಬಜಾರ್‌ನಲ್ಲಿದ್ದಾಗ, ವ್ಯಕ್ತಿಯೊಬ್ಬ ಹಿಡನ್ ಕ್ಯಾಮೆರಾ ಅಳವಡಿಸಿದ ಲೈಟರ್ ಆಕಾರದ ಸಣ್ಣ ಸಾಧನವನ್ನು ಬಳಸಿಕೊಂಡು ತನ್ನ ಒಪ್ಪಿಗೆಯಿಲ್ಲದೆ ತನ್ನ ಆಕ್ಷೇಪಾರ್ಹ ವಿಡಿಯೋಗಳನ್ನು ರೆಕಾರ್ಡ್ ಮಾಡಲು ಪ್ರಯತ್ನಿಸುತ್ತಿರುವುದನ್ನು ಗಮನಿಸಿರುವುದಾಗಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸರು ಬಿಎನ್‌ಎಸ್ ಸೆಕ್ಷನ್ 77/78 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆಗಾಗಿ ಪ್ರತ್ಯೇಕ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಿಶನ್‌ಗಢ ಎಸ್‌ಎಚ್‌ಒ ಇನ್ಸ್‌ಪೆಕ್ಟರ್ ಅಜಯ್ ಕುಮಾರ್ ಯಾದವ್ ನೇತೃತ್ವದಲ್ಲಿ ಮತ್ತು ದೆಹಲಿಯ ಎಸಿಪಿ/ಉಪ-ವಿಭಾಗ ಸಫ್ದರ್‌ಜಂಗ್ ಎನ್‌ಕ್ಲೇವ್ ಮೆಲ್ವಿನ್ ವರ್ಗೀಸ್ ಅವರ ಮೇಲ್ವಿಚಾರಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ದಿವ್ಯಾ ಯಾದವ್, ಹೆಡ್ ಕಾನ್ಸ್‌ಟೇಬಲ್ ಯೋಗೇಶ್, ಎಚ್‌ಸಿ ಶ್ಯಾಮ್ ಸುಂದರ್, ಕಾನ್ಸ್‌ಟೇಬಲ್ ಮೋಹನ್ ಮತ್ತು ಸಿಟಿ ವಿಕಾಸ್ ತಂಡದಲ್ಲಿದ್ದಾರೆ.

ತನಿಖೆಯ ಸಮಯದಲ್ಲಿ, ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಯಿತು ಮತ್ತು ಶಂಕಿತ ವ್ಯಕ್ತಿಯ ಚಿತ್ರವನ್ನು ಬಿಡುಗಡೆ ಮಾಡಲಾಯಿತು.

ಸ್ಥಳೀಯ ಬೀಟ್ ಸಿಬ್ಬಂದಿ ಮತ್ತು ರಹಸ್ಯ ಮಾಹಿತಿದಾರರನ್ನು ಮಾಹಿತಿ ಸಂಗ್ರಹಿಸಲು ಸಕ್ರಿಯಗೊಳಿಸಲಾಗಿತ್ತು. ಬಳಿಕ ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಲಾಗಿದೆ. ನಿರಂತರ ವಿಚಾರಣೆಯ ನಂತರ, ಆತ ಕೃತ್ಯದಲ್ಲಿ ತಾನು ಭಾಗಿಯಾಗಿರುವುದಾಗಿ ಒಪ್ಪಿಕೊಂಡನು ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.

ಆರೋಪಿ ಮೋಹಿತ್ ಪ್ರಿಯದರ್ಶಿ ಖಾಸಗಿ ವಿಮಾನಯಾನ ಸಂಸ್ಥೆಯಲ್ಲಿ ಪೈಲಟ್ ಆಗಿ ಕೆಲಸ ಮಾಡುತ್ತಿದ್ದಾನೆ. ಅವನು ಅವಿವಾಹಿತನಾಗಿದ್ದು, ತನ್ನ ವೈಯಕ್ತಿಕ ತೃಪ್ತಿಗಾಗಿ ಇಂತಹ ವಿಡಿಯೋಗಳನ್ನು ಮಾಡುತ್ತಿದ್ದಾಗಿ ಒಪ್ಪಿಕೊಂಡಿದ್ದಾನೆ. ಆತನಿಂದ ಒಂದು ಸ್ಪೈ ಕ್ಯಾಮೆರಾವನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 23 ಮಂದಿ ಸಜೀವ ದಹನ, ತನಿಖೆಗೆ ಆದೇಶ

'ಹಿಂದೂ ಬೆಳವಣಿಗೆ ದರ' ಧರ್ಮ ಕೆಣಕುವ ಒಂದು ಮಾರ್ಗವಾಗಿತ್ತು: ಪ್ರಧಾನಿ ಮೋದಿ

ದೆಹಲಿಯಲ್ಲಿ 2ನೇ ಮದುವೆಗೆ ಪತಿಯ ಸಿದ್ಧತೆ: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಬೇಡಿದ ಪಾಕ್ ಮಹಿಳೆ!

'ಜನ ಸಾಮಾನ್ಯರಿಗಾಗಿ ಸುಪ್ರೀಂಕೋರ್ಟ್' : ಬಲವಾದ ಸಂದೇಶ ರವಾನಿಸಿದ CJI ಸೂರ್ಯಕಾಂತ್!

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ: 2-1 ಅಂತರದಲ್ಲಿ ಸರಣಿ ಕೈ ವಶ!

SCROLL FOR NEXT