ಐಪಿಎಸ್ ಅಧಿಕಾರಿ ಅಂಜನಾ ಕೃಷ್ಣ ಹಾಗೂ ಎಂಎಲ್ ಸಿ ಅಮೋಲ್ ಮಿಟ್ಕರಿ 
ದೇಶ

ಮಹಾರಾಷ್ಟ್ರ: IPS ಅಧಿಕಾರಿ ವಿರುದ್ಧದ ಟ್ವೀಟ್ ಅಳಿಸಿ ಹಾಕಿ, ಕ್ಷಮೆಯಾಚಿಸಿದ NCP MLC!

ಅಂಜನಾ ಕೃಷ್ಣ ಅವರು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕಾರಣವಾದ ಶೈಕ್ಷಣಿಕ ಮತ್ತು ಜಾತಿ ಪ್ರಮಾಣ ಪತ್ರವನ್ನು ಯುಪಿಎಸ್ ಸಿಯಿಂದ ಮಾಹಿತಿ ಬಯಸಿ ಮಿಟ್ಕರಿ ಟ್ವೀಟ್ ಮಾಡಿದ್ದರು.

ಮುಂಬೈ: ಐಪಿಎಸ್ ಅಧಿಕಾರಿ ಅಂಜನಾ ಕೃಷ್ಣ ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕಾರಣವಾದ ಶೈಕ್ಷಣಿಕ ಮತ್ತು ಜಾತಿ ಪ್ರಮಾಣ ಪತ್ರವನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದ ಎನ್ ಸಿಪಿ ಎಂಎಲ್ ಸಿ ಅಮೋಲ್ ಮಿಟ್ಕರಿ ಇದೀಗ ಆ ಟ್ವೀಟ್ ನ್ನು ಅಳಿಸಿ ಹಾಕಿ ಕ್ಷಮೆಯಾಚಿಸಿದ್ದಾರೆ.

ಕರ್ಮಾಲಾ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಅಂಜನಾ ಕೃಷ್ಣ ಅವರಿಗೆ ಫೋನ್ ಕಾಲ್ ನಲ್ಲಿ ಡಿಸಿಎಂ ಅಜಿತ್ ಪವಾರ್ ಧಮಕಿ ಹಾಕಿದ್ದು, ಅಕ್ರಮವಾಗಿ ಮಣ್ಣು ತೆಗೆಯುವುದರ ವಿರುದ್ಧದ ಕ್ರಮವನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಇದು ಭಾರಿ ವಿವಾದಕ್ಕೆ ಕಾರಣವಾಗಿದೆ.

ಈ ಕುರಿತ ವಿಡಿಯೋ ವೈರಲ್ ಆದ ಬಳಿಕ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ಅಜಿತ್ ಪವಾರ್, ನಾನು ಇದರಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಆದರೆ ಪರಿಸ್ಥಿತಿಯನ್ನು ತಣ್ಣಗಾಗಿಸಲು ಪ್ರಯತ್ನಿಸುತ್ತೇನೆ ಎಂದು ಶುಕ್ರವಾರ ಹೇಳಿದ್ದರು.

ಅಂಜನಾ ಕೃಷ್ಣ ಅವರು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕಾರಣವಾದ ಶೈಕ್ಷಣಿಕ ಮತ್ತು ಜಾತಿ ಪ್ರಮಾಣ ಪತ್ರವನ್ನು ಯುಪಿಎಸ್ ಸಿಯಿಂದ ಮಾಹಿತಿ ಬಯಸಿ ಮಿಟ್ಕರಿ ಟ್ವೀಟ್ ಮಾಡಿದ್ದರು. ಮಹಿಳಾ ಪೊಲೀಸ್ ಅಧಿಕಾರಿ ಟಾರ್ಗೆಟ್ ಮಾಡಿದ್ದಕ್ಕಾಗಿ ಮಿಟ್ಕರಿ ವಿರುದ್ಧ ಎನ್ ಸಿಪಿ ಶರದ್ಚಂದ್ರ ಪವಾರ್ ಬಣದ ಸಂಸದೆ ಸುಪ್ರಿಯಾ ಸುಳೆ ಮತ್ತು ಕಾಂಗ್ರೆಸ್ ನಾಯಕರಾದ ಯಶೋಮತಿ ಠಾಕೂರ್ ತೀವ್ರ ವಾಗ್ದಾಳಿ ನಡೆಸಿದ್ದರು.

ಈ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಿಟ್ಕರಿ, ಇದು ನನ್ನ ಪಕ್ಷದ ನಿಲುವಲ್ಲ. ಇದು ನನ್ನ ವೈಯಕ್ತಿಕ ಹೇಳಿಕೆ. ಪೊಲೀಸ್ ಪಡೆ ಮತ್ತು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಅಧಿಕಾರಿಗಳ ಬಗ್ಗೆ ನನಗೆ ಅತ್ಯುನ್ನತ ಗೌರವವಿದೆ. ಪಕ್ಷದ ಹಿರಿಯರ ನಾಯಕತ್ವದ ನಿಲುವನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಯುದ್ಧದ ಕುರಿತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಮೋದಿ ಮಹತ್ವದ ಮಾತುಕತೆ

ಗುಜರಾತ್: ರಾಹುಲ್ ಗಾಂಧಿ ಪರ ವಕಾಲತ್ತು ವಹಿಸಿದ್ದ ವಕೀಲ ಫಿರೋಜ್ ಪಠಾಣ್ ಮೃತದೇಹ ತಾಪಿ ನದಿಯ ದಡದಲ್ಲಿ ಪತ್ತೆ!

ಭಾರತಕ್ಕೆ ಉತ್ತಮ ವಿರೋಧಪಕ್ಷಕ್ಕಾಗಿ ಅಭಿಯಾನ ಅಗತ್ಯ: ಸೀತಾರಾಮನ್

ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನ

SCROLL FOR NEXT